ಬೆಂಗಳೂರು | ಬೈಯಪ್ಪನಹಳ್ಳಿ-ಕೆ.ಆರ್‌.ಪುರ ನಡುವೆ ಮೊದಲ ಮೆಟ್ರೋ ಪ್ರಾಯೋಗಿಕ ಸಂಚಾರ ಯಶಸ್ವಿ

Date:

Advertisements
  • ಆಗಸ್ಟ್‌ ತಿಂಗಳ ಕೊನೆಯಲ್ಲಿ ಈ ಮಾರ್ಗದಲ್ಲಿ ಮೆಟ್ರೋ ಸೇವೆ ಆರಂಭ ಸಾಧ್ಯತೆ
  • ಸಂಚಾರ ಆರಂಭವಾದರೆ ವೈಟ್‌ಫೀಲ್ಡ್‌ನಿಂದ ಕೆಂಗೇರಿಗೆ ಒಂದೇ ರೈಲಿನಲ್ಲಿ ಪ್ರಯಾಣ

ನಮ್ಮ ಮೆಟ್ರೋ ನೇರಳೆ ಮಾರ್ಗದ ಬೈಯಪ್ಪನಹಳ್ಳಿ-ಕೆ.ಆರ್‌.ಪುರ ನಡುವೆ ಮೊದಲ ಮೆಟ್ರೋ ಪ್ರಾಯೋಗಿಕ ರೈಲು ಸಂಚಾರ ಯಶಸ್ವಿಯಾಗಿದೆ.

ಆಗಸ್ಟ್‌ ತಿಂಗಳ ಕೊನೆಯಲ್ಲಿ ಈ ಮಾರ್ಗದಲ್ಲಿ ಮೆಟ್ರೋ ಸೇವೆ ಆರಂಭಿಸುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳ್ಳುವ ಸಾಧ್ಯತೆಯಿದೆ. ಸುರಕ್ಷಾ ಪ್ರಾಧಿಕಾರದ ಅಧಿಕಾರಿಗಳ ಸಮ್ಮುಖದಲ್ಲಿ ಬೈಯಪ್ಪನಹಳ್ಳಿ-ಕೆ.ಆರ್.ಪುರ ನಡುವೆ ಪ್ರಾಯೋಗಿಕ ಸಂಚಾರ ಆರಂಭವಾಗಿದೆ.

“ಬುಧವಾರ ಮೊದಲನೇ ರೈಲು ಪ್ರಾಯೋಗಿಕ ಸಂಚಾರವು ಕೆ.ಆರ್.ಪುರ ಮತ್ತು ಬೈಯಪ್ಪನಹಳ್ಳಿ ನಡುವೆ ನಿಧಾನಗತಿಯಲ್ಲಿ ಸಂಜೆ 6.04 ಗಂಟೆಗೆ ಪ್ರಾರಂಭವಾಗಿ ಮತ್ತೆ ಮರಳಿ ಕೆ.ಆರ್.ಪುರ ನಿಲ್ದಾಣಕ್ಕೆ ತಲುಪಿತು” ಎಂದು ನಮ್ಮ ಮೆಟ್ರೋ ಟ್ವೀಟ್‌ ಮಾಡಿದೆ.

Advertisements

ವೈಟ್ ಫೀಲ್ಡ್‌ನಿಂದ ಬೈಯಪ್ಪನಹಳ್ಳಿ‌ ಮಾರ್ಗದಲ್ಲಿ ಸಂಚರಿಸುವ ಜನ ಕೆ.ಆರ್.ಪುರದಲ್ಲಿ ಇಳಿದು ನಂತರ ಬೇರೆ ಸಾರಿಗೆ ಅವಲಂಬಿಸಬೇಕಿತ್ತು. ಆದರೆ, ಈಗ ಬೈಯಪ್ಪನಹಳ್ಳಿ ಹಾಗೂ ಕೆ.ಆರ್.ಪುರ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾದರೆ ವೈಟ್‌ಫೀಲ್ಡ್‌ನಿಂದ ಕೆಂಗೇರಿಗೆ ಒಂದೇ ರೈಲಿನಲ್ಲಿ ಸುಲಭವಾಗಿ ಹಾಗೂ ಕಡಿಮೆ ಅವಧಿಯಲ್ಲಿ ಪ್ರಯಾಣ ಬೆಳೆಸಬಹುದು. 

ಈ ಸುದ್ದಿ ಓದಿದ್ದೀರಾ? ಇಬ್ಬರು ಕಳ್ಳರಿಂದ 18 ಮೊಬೈಲ್, 11 ದ್ವಿಚಕ್ರ ವಾಹನ ವಶಪಡಿಸಿಕೊಂಡ ಪೊಲೀಸರು

ಬೈಯಪ್ಪನಹಳ್ಳಿ-ಕೆ.ಆರ್‌.ಪುರ ಮೆಟ್ರೋ 2.1 ಕಿ.ಮೀ ಹಾಗೂ ಕೆಂಗೇರಿ-ಚಲ್ಲಘಟ್ಟ ನಡುವೆ 1.9 ಕಿ.ಮೀ ಮೆಟ್ರೋ ಕಾಮಗಾರಿ ಬಾಕಿ ಇದೆ. ಇವೆರಡೂ ಪೂರ್ಣಗೊಂಡ ಬಳಿಕ ಚಲ್ಲಘಟ್ಟ-ವೈಟ್‌ಫೀಲ್ಡ್‌ವರೆಗಿನ 43.5 ಕಿ.ಮೀ ನೇರಳೆ ಮಾರ್ಗ ಪೂರ್ಣವಾದಂತಾಗಲಿದೆ. 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X