ಬೆಂಗಳೂರು | ಮಗಳನ್ನು ತಡವಾಗಿ ಮನೆಗೆ ಬಿಟ್ಟ ಶಾಲಾ ವಾಹನ; ಶಾಲೆಯ ವಿರುದ್ಧ ಮಕ್ಕಳ ಆಯೋಗಕ್ಕೆ ದೂರು

Date:

Advertisements
  • ವಿದ್ಯಾರ್ಥಿನಿಗೆ ಸಾರಿಗೆಯನ್ನು ರದ್ದುಗೊಳಿಸಿದ ಶಾಲಾ ಆಡಳಿತ ಮಂಡಳಿ
  • ಮಕ್ಕಳ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ; ಶಾಲಾ ಆಡಳಿತ ಮಂಡಳಿ

ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಓದುತ್ತಿರುವ 5ನೇ ತರಗತಿಯ ಬಾಲಕಿಯನ್ನು ತಡವಾಗಿ ಮನೆಗೆ ಬಿಟ್ಟಿದ್ದಕ್ಕಾಗಿ ಪೋಷಕರು ಶಾಲೆಯ ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ಸಂಸ್ಥೆಗೆ ದೂರು ನೀಡಿದ್ದಾರೆ.

ಕ್ರಿಸಾಲಿಸ್ ಹೈ ಎಂಬ ಖಾಸಗಿ ಶಾಲೆಯ ವಿರುದ್ಧ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ (KSCPCR) ಪೋಷಕರು ದೂರು ನೀಡಿದ್ದು, “ಗುರುವಾರ ಮಧ್ಯಾಹ್ನ 3.20ರ ಸುಮಾರಿಗೆ ಮಗಳು ಮನೆಗೆ ಬರಬೇಕಿತ್ತು. ಆದರೆ, ಆಕೆ ಮನೆಗೆ ಬಂದಿರಲಿಲ್ಲ. ಇದರಿಂದ ನಾವು ತುಂಬಾ ಗಾಬರಿಗೊಂಡೆವು. ಮಧ್ಯಾಹ್ನ 3 ಗಂಟೆಯಿಂದ ಮಗಳನ್ನು ಶಾಲಾ ವಾಹನ ಡ್ರಾಪ್‌ ಮಾಡುವ ಸ್ಥಳದಲ್ಲಿ ಕಾಯುತ್ತಿದ್ದೆವು ಅಂತಿಮವಾಗಿ, ಸಂಜೆ 4.40 ರ ಸುಮಾರಿಗೆ ಶಾಲಾ ವಾಹನದಲ್ಲಿ ಅವಳನ್ನು ಡ್ರಾಪ್ ಮಾಡಿದರು. ವಿಳಂಬದ ಬಗ್ಗೆ ಶಾಲೆಯಿಂದ ಯಾವುದೇ ಮಾಹಿತಿ ಇರಲಿಲ್ಲ” ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.

“ಶಾಲೆಯ ಸಿಬ್ಬಂದಿ ನಮ್ಮ ಮಗಳಿಗೆ ನಮ್ಮ ಮನೆಯ ರಸ್ತೆಯ ಎದುರಿನ ರಸ್ತೆಯ ಬದಿಯಲ್ಲಿ ಬಸ್‌ನಿಂದ ಇಳಿಯುವಂತೆ ಹೇಳಿದ್ದಾರೆ. ಆದರೆ, ರಸ್ತೆ ಅಗಲವಾಗಿರುವುದರಿಂದ ಮತ್ತು ಮಧ್ಯದಲ್ಲಿ ವಿಭಜಕ ಇರುವುದರಿಂದ ಮಗಳಿಗೆ ರಸ್ತೆ ದಾಟಲು ಸಾಧ್ಯವಾಗದ ಕಾರಣ ಅವಳು ಇಳಿಯಲು ನಿರಾಕರಿಸಿದ್ದಾಳೆ. ಸಿಬ್ಬಂದಿಯ ಆದೇಶ ಪಾಲಿಸದ ಕಾರಣ ಅವಳನ್ನು ಶಿಕ್ಷಿಸಲು ಸಿಬ್ಬಂದಿ ಬಸ್ಸಿನಲ್ಲಿದ್ದ ಎಲ್ಲ ಮಕ್ಕಳನ್ನು ಬಿಡುವವರೆಗೂ ಅವಳನ್ನು ಕಾಯುವಂತೆ ಮಾಡಿದರು. ಎಲ್ಲ ಮಕ್ಕಳನ್ನು ಮನೆಗೆ ಬಿಟ್ಟು ನಂತರ ಅವಳನ್ನು ಮನೆಗೆ ತಂದು ಬಿಟ್ಟಿದ್ದಾರೆ” ಎಂದು ಮಗುವಿನ ತಂದೆ ವಿವರಿಸಿದರು.

Advertisements

“ನಡೆದ ಘಟನೆ ಬಗ್ಗೆ ಶಾಲೆಯ ಅಧಿಕಾರಿಗಳ ಮುಂದೆ ಸಮಸ್ಯೆಯನ್ನು ಹೇಳಿದರೆ, ಶಾಲಾ ಆಡಳಿತ ಮಂಡಳಿ ಮಗಳಿಗೆ ಸಾರಿಗೆಯನ್ನು ರದ್ದುಗೊಳಿಸಲಾಗಿದೆ ಎಂದು ಇಮೇಲ್ ಕಳುಹಿಸಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರಿಯತಮೆಯನ್ನು ಕೊಂದ ಪ್ರಿಯಕರ

“ನಾವು ಯಾವುದೇ ತಪ್ಪು ಮಾಡಿಲ್ಲ. ಮಕ್ಕಳ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ. ಪೋಷಕರು ತಮ್ಮ ಮಗುವನ್ನು ಕರೆದುಕೊಂಡು ಹೋಗಲು ರಸ್ತೆ ದಾಟಲು ನಿರಾಕರಿಸಿದ್ದರು, ಎಲ್ಲಿಂದ ಮಗುವನ್ನು ಕರೆದುಕೊಂಡು ಹೋಗಿರುತ್ತಾರೋ ಅಲ್ಲಿಗೆ ತಂದು ಬಿಡಬೇಕು ಎಂದು ಹೇಳಿದರು. ಹೀಗಾಗಿ ಶಾಲೆಯ ಒಬ್ಬ ಅಟೆಂಡೆಂಟ್ ಬಾಲಕಿಯನ್ನು ಇನ್ನೊಂದು ಬದಿಗೆ ಕರೆದುಕೊಂಡು ಹೋಗಿದ್ದಾರೆ. ಪೋಷಕರ ಮನವಿಯನ್ನು ಪಾಲಿಸುವುದರಿಂದ ಬಸ್‌ನಲ್ಲಿರುವ ಇತರ ವಿದ್ಯಾರ್ಥಿಗಳಿಗೆ ಅನಾನುಕೂಲವಾಗುತ್ತದೆ” ಎಂದು ಶಾಲೆಯ ಸಿಬ್ಬಂದಿಯೊಬ್ಬರು ತಿಳಿಸಿದರು.

ಶಾಲೆಯ ವಿರುದ್ಧ ಪೋಷಕರು ಹೆಣ್ಣೂರು ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X