ಬೆಂಗಳೂರು | ತಂದೆಯ ಮೇಲೆ ಒರಳು ಕಲ್ಲು ಎತ್ತಿ ಹಾಕಿ ಕೊಲೆಗೈದ ಮಗ

Date:

Advertisements
  • ಘಟನಾ ಸ್ಥಳ ಪರಿಶೀಲನೆ ನಡೆಸಿದ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ
  • ಒರಳು ಕಲ್ಲು ಎತ್ತಿ ಹಾಕಿ ತಂದೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜಗಳದ ವೇಳೆ ತಂದೆಯ ಮೇಲೆ ಒರಳು ಕಲ್ಲು ಎತ್ತಿ ಹಾಕಿ ಸ್ವಂತ ಮಗನೇ ಕೊಲೆ ಮಾಡಿದ್ದಾನೆ.

ಜೂನ್‌ 15 ರಂದು ರಾತ್ರಿ ಮಾಗಡಿ ರಸ್ತೆಯ ಗೋಪಾಲಪುರದ 2ನೇ ಕ್ರಾಸ್​ನಲ್ಲಿ ಈ ಘಟನೆ ನಡೆದಿದೆ. ಗಂಗರಾಜು ಆಲಿಯಾಸ್ ರಾಜು(55) ಕೊಲೆಯಾದ ವ್ಯಕ್ತಿ. ಪುತ್ರ ಚೇತನ್ ಕೊಲೆ ಆರೋಪಿ.

ಜೂನ್‌ 15ರ ರಾತ್ರಿ 2:30 ಗಂಟೆಗೆ ತಂದೆ-ಮಗನ ಮಧ್ಯೆ ಜಗಳ ಆರಂಭವಾಗಿದೆ. ಇಬ್ಬರ ಜಗಳ ಅತಿರೇಕಕ್ಕೆ ಹೋಗಿ ತಂದೆ ಹೊರಗಡೆ ಮಲಗಿದ ವೇಳೆ ಮಗನು ಒರಳು ಕಲ್ಲನ್ನು ತಂದೆಯ ಮೇಲೆ ಎತ್ತಿ ಹಾಕಿದ್ದಾನೆ.

Advertisements

ವಿಷಯ ತಿಳಿದು ಘಟನಾ ಸ್ಥಳಕ್ಕೆ ಮಾಗಡಿರಸ್ತೆ ಪೊಲೀಸರು ಭೇಟಿ ನೀಡಿದ್ದಾರೆ. ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಜೂನ್‌ 30 ರವರೆಗೆ ವಿದ್ಯಾರ್ಥಿ ಬಸ್‌ ಪಾಸ್ ಅವಧಿ ವಿಸ್ತರಣೆ : ಕೆಎಸ್‌ಆರ್‌ಟಿಸಿ

ಈ ವೇಳೆ ಮಾತನಾಡಿದ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ, “ತಂದೆ-ಮಗನ ಜಗಳ ಅತಿರೇಕಕ್ಕೆ ಹೋಗಿ ಈ ಘಟನೆ ಸಂಭವಿಸಿದೆ. ಮಗ ಚೇತನ್ ತಂದೆಯ ಮೇಲೆ ಕಲ್ಲನ್ನು ಎತ್ತಿ ಹಾಕಿದ್ದಾನೆ. ಬಳಿಕ ತಾನೇ ತಂದೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದಾನೆ. ಇದಾದ ನಂತರ ತಂದೆ ರಾಜು ಸಾವನ್ನಪ್ಪಿದ್ದಾರೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X