ಬೆಂಗಳೂರು | ವಿದ್ಯಾರ್ಥಿಗಳಿಂದ ಹಣ ಸುಲಿಗೆ ಮಾಡುತ್ತಿದ್ದ ಮೂವರು ಪೊಲೀಸ್‌ ಮಾಹಿತಿದಾರರ ಬಂಧನ

Date:

Advertisements

ಬೆಂಗಳೂರಿನ ನಾನಾ ಕಾಲೇಜು, ಕ್ಲಬ್‌ ಹಾಗೂ ಪಬ್‌ಗಳಲ್ಲಿ ಗಾಂಜಾ ಸೇವನೆ ವ್ಯಾಪಕವಾಗಿ ನಡೆಯುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಡ್ರಗ್ಸ್‌ ಜಾಲವನ್ನು ಭೇದಿಸಲು ಪೊಲೀಸ್‌ ಇಲಾಖೆ ಕಾರ್ಯೋನ್ಮುಖವಾಗಿದೆ. ಅದರಂತೆಯೇ ಇಲಾಖೆ ಪೊಲೀಸ್‌ ಮಾಹಿತಿದಾರರನ್ನು ಇನ್ಫಾರ್ಮರ್‌ಗಳನ್ನು ನಿಯೋಜನೆ ಮಾಡಿದೆ. ಆದರೆ, ಡ್ರಗ್ಸ್‌ ಜಾಲವನ್ನು ಭೇದಿಸಲು ನಿಯೋಜನೆ ಮಾಡಲಾದ ಪೊಲೀಸ್‌ ಇನ್ಫಾರ್ಮರ್‌ಗಳೇ ಗಾಂಜಾ ಸೇವನೆ ಮಾಡಿದ ವಿದ್ಯಾರ್ಥಿಗಳನ್ನು ಹಿಡಿದು ಲಕ್ಷಾಂತರ ಹಣವನ್ನು ವಸೂಲಿ ಮಾಡಿದ್ದಾರೆ. ಹೀಗೆ ಸೈಬರ್ ಕ್ರೈಂ ಪೊಲೀಸರೆಂದು ಬಿಂಬಿಸಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಯಿಂದ ₹1.7 ಲಕ್ಷ ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ರೀತಿಯಲ್ಲಿ ವರ್ತಿಸುತ್ತಿದ್ದ ಆರೋಪಿಗಳು ಟ್ರ್ಯಾಪ್ ಆದ ವಿದ್ಯಾರ್ಥಿಗಳನ್ನು ಹಿಡಿದು ಬೆದರಿಕೆ ಹಾಕುತ್ತಿದ್ದರು. ಹಣ ವಸೂಲಿ ಮಾಡುತ್ತಿದ್ದರು. ಈ ವಿಚಾರವನ್ನು ಹೊರಗಡೆ ಬಾಯಿಬಿಟ್ಟರೆ ಕೊಲೆ ಮಾಡೋದಾಗಿ ಬೆದರಿಕೆ ಹಾಕುತ್ತಿದ್ದರು. ಇದೇ ಮಾದರಿಯಲ್ಲಿ 15ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಸುಲಿಗೆ ಮಾಡಿರುವ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಮಾಗಡಿ ರಸ್ತೆಯ ರಾಕೇಶ್ ಸಿ (26), ಲೋಕೇಶ್ ಕುಮಾರ್ (20) ಹಾಗೂ ವಿದ್ಯಾರಣ್ಯಪುರ ನಿವಾಸಿ ಅರುಣ್ ಕುಮಾರ್ (27) ಬಂಧಿತರು.

Advertisements

ಜುಲೈ 16 ರಂದು ಮೂವರು ಆರೋಪಿಗಳು ‘ನೀನು ಮಾದಕ ವಸ್ತು ಸೇವನೆ ಮತ್ತು ದಂಧೆಯಲ್ಲಿ ತೊಡಗಿರುವ ಬಗ್ಗೆ ನಮ್ಮ ಬಳಿ ಪುರಾವೆಗಳಿವೆ’ ಎಂದು ಮಿಶಾನ್ ಎಂಬುವವರಿಗೆ ಬೆದರಿಸಿ ಅವರನ್ನು ಬಿಇಎಲ್ ರಸ್ತೆಯಲ್ಲಿರುವ ಹಾಸ್ಟೆಲ್‌ನಿಂದ ಅಪಹರಿಸಿದ್ದರು. ಕಾರಿನೊಳಗೆ ಅವರನ್ನು ಸುಮಾರು ಮೂರು ಗಂಟೆಗಳ ಕಾಲ ನಗರದಾದ್ಯಂತ ಸುತ್ತಾಡಿಸಿ, ಮಿಶಾನ್‌ ಅವರ ಫೋನ್‌ ಅನ್ನು ಬಲವಂತವಾಗಿ ಕಸಿದುಕೊಂಡು ಅವರ ಖಾತೆಗಳಿಗೆ ₹1.72 ಲಕ್ಷ ವರ್ಗಾವಣೆ ಮಾಡಿಸಿಕೊಂಡಿದ್ದರು.

12 ಗಂಟೆಯ ಸುಮಾರಿಗೆ ಮಿಶಾನ್ ಅವರನ್ನು ಹಾಸ್ಟೆಲ್‌ಗೆ ಬಿಡುವ ಮೊದಲು ನಡೆದ ಘಟನೆಯನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಜುಲೈ 17 ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಿಶಾನ್ ನೀಡಿದ ದೂರಿನ ಮೇರೆಗೆ ಪೊಲೀಸರು ಜುಲೈ 20 ರಂದು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಗಳಿಂದ ನಾಲ್ಕು ಮೊಬೈಲ್ ಫೋನ್ ಮತ್ತು ರಾಯಲ್ ಎನ್‌ಫೀಲ್ಡ್ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.

“ಆರೋಪಿಗಳು ಈ ಹಿಂದೆ ನಾನಾ ಪ್ರಕರಣಗಳಲ್ಲಿ ಮಾಹಿತಿದಾರರಾಗಿ ಪೊಲೀಸರಿಗೆ ಸಹಾಯ ಮಾಡಿದ್ದರು. ಮಿಶಾನ್ ಬಗ್ಗೆ ಮಾಹಿತಿ ಸಂಗ್ರಹಿಸಿ ಆತನನ್ನು ಸುಲಭ ಗುರಿ ಎಂದು ಪರಿಗಣಿಸಿ ಟಾರ್ಗೆಟ್ ಮಾಡಿದ್ದರು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? 1,344 ಕಿ.ಮೀ ರಸ್ತೆಯ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗಳಿಗೆ ಹೊರಗುತ್ತಿಗೆ ನೀಡುತ್ತಿರುವ ಬಿಬಿಎಂಪಿ

“ಆರೋಪಿಗಳ ವಿರುದ್ಧ ಹಲವು ಪೊಲೀಸ್ ಠಾಣೆಗಳಲ್ಲಿ 15ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇತ್ತೀಚೆಗೆ ಬೈಕ್ ಸವಾರನಿಗೆ ಬೆದರಿಸಿ ₹10 ಸಾವಿರ ವಸೂಲಿ ಮಾಡಿದ್ದು, ಈ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ” ಎಂದು ಹೇಳಿದ್ದಾರೆ.

“ಗಾಂಜಾ ಪ್ರಕರಣಗಳ ಬಗ್ಗೆ ಮಾಹಿತಿ ಹೊಂದಿರುತಿದ್ದ ಇವರು ಹಲವಾರು ಬಾರಿ ಪೊಲೀಸರಿಗೆ ಮಾಹಿತಿ ನೀಡಿ ಇನ್ಫಾರ್ಮರ್‌ಗಳಾಗಿದ್ದರು. ಬಳಿಕ ಹಣ ಮಾಡಲು ಪೊಲೀಸರ ರೀತಿ ಬಂದು ಸುಲಿಗೆ ಮಾಡಿದ್ದಾರೆ. ನಾವೇ ಪೊಲೀಸರು ಎಂದು ಹೇಳಿಕೊಂಡು ವಂಚನೆ ಮಾಡಿರೊದು ಪತ್ತೆಯಾಗಿದೆ. ತನಿಖೆ ವೇಳೆ 25ಕ್ಕೂ ಅಧಿಕ ಕೃತ್ಯ ಎಸಗಿರೊದಾಗಿ ಮಾಹಿತಿ ಲಭ್ಯವಾಗಿದೆ” ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.  

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X