ಬೆಂಗಳೂರು | ಯುವಕನ ಕಿರುಕುಳಕ್ಕೆ ಬೇಸತ್ತು ಠಾಣೆ ಮೆಟ್ಟಿಲೇರಿದ ಯುವತಿ

Date:

Advertisements
  • ಕಂಪನಿ ಆಡಳಿತ ಮಂಡಳಿ ವಿರುದ್ಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು
  • ಕಿರುಕುಳ ನೀಡಿದ ಯುವಕನ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದೂರು

ರಾಜಧಾನಿ ಬೆಂಗಳೂರಿನಲ್ಲಿ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬಳು ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದು, ಯುವಕನಿಂದ ರಕ್ಷಣೆ ಹಾಗೂ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾಳೆ.

ದೂರು ನೀಡಿರುವ ಯುವತಿ ಮಹಾರಾಷ್ಟ್ರ ಮೂಲದವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನೆಲೆಸಿದ್ದರು. ಬ್ಲಾಕ್ ಬೆರಿಸ್​ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆರೋಪಿ ಯುವಕ ಅಲ್ ಮೆಹಪ್ಯೂಸ್ ಬರಪೂಯಾ ಅಸ್ಸಾಂ ಮೂಲದವನಾಗಿದ್ದು, ಗಾರ್ಮೆಂಟ್ಸ್ ರಿಟೇಲ್​ನಲ್ಲಿ ಕೆಲಸ ಮಾಡುತ್ತಿದ್ದಾರೆ. ಆತ ಕೊರಮಂಗಲದಲ್ಲಿ ನೆಲೆಸಿದ್ದಾರೆ.

ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಯ ಪ್ರಾರಂಭದಲ್ಲಿ ಯುವಕ ತನ್ನ ಹೆಸರು ಮೆಲ್ಬಿನ್, ತಾನೂ ಕ್ರಿಶ್ಚಿಯನ್ ಪಂಗಡಕ್ಕೆ ಸೇರಿದವನು ಎಂದು ಹೇಳಿಕೊಂಡಿದ್ದ. ಆಕಸ್ಮಿಕವಾಗಿ ಅಲ್ ಮೆಹಪ್ಯೂಸ್​ನ ಆಧಾರ್ ಕಾರ್ಡ್ ಯುವತಿಯ ಕಣ್ಣಿಗೆ​ ಬಿದ್ದಿದ್ದು, ಆತ ಕ್ರಿಶ್ಚಿಯನ್ ಅಲ್ಲ, ಮುಸ್ಲಿಂ ಎಂದು ಆಕೆಗೆ ಗೊತ್ತಾಗಿದೆ. ಯುವಕನ ಮೋಸದ ಬಗ್ಗೆ ತಿಳಿದು ಯುವತಿ ಆತನಿಂದ ದೂರವಾಗಿದ್ದಾಳೆ.

Advertisements

ಬಳಿಕ ಯುವಕ ಅಲ್ ಮೆಹಪ್ಯೂಸ್ ಯುವತಿಗೆ ಕಿರುಕುಳ ನೀಡಲು ಆರಂಭಿಸಿದ್ದು, ರಾತ್ರಿ ವೇಳೆ ಯುವತಿಯ ಮನೆಯ ಬಳಿ ತೆರಳಿ ಗಲಾಟೆ ಮಾಡಿದ್ದಾನೆ. ಯುವತಿ ಸೇರಿದಂತೆ ಕುಟುಂಬದವರಿಗೆ ಕೊಲೆ ಬೆದರಿಕೆ ಹಾಕಿದ್ದಾನೆ. ಯುವತಿ ಕೆಲಸ ಮಾಡುತ್ತಿದ್ದ ಕಂಪನಿ ಮಾಲೀಕರಿಗೆ ಬಳಿ ಹೋಗಿ, ಆಕೆಯ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದಾನೆ. “ಆತನೊಂದಿಗೆ ತನ್ನ ಸಹೋದ್ಯೋಗಿಗಳು ಸೇರಿಕೊಂಡಿದ್ದಾರೆ” ಎಂದು ಯುವತಿ ದೂರಿದ್ದಾರೆ.

ಕೋರಮಂಗಲ ಬ್ಲಾಕ್ ಬೇರಿಸ್ ಸ್ಟೋರ್ ಟೀಮ್ ಮಹಮದ್ ಸಕ್ಕೈನ್, ಸೈಯ್ಯದ್, ಮುಜಿಬ್ ಸೈಫ್ ಶೇಖ್, ಅಸ್ಲಂ ತಬ್ರೆಜ್ ಇವರೆಲ್ಲರು ಸೇರಿ ತನ್ನ ವೃತ್ತಿ ಜೀವನವನ್ನು ಹಾಳು ಮಾಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹೊಸ ಬಸ್‌ ಖರೀದಿಗೆ ಮುಂದಾದ ಸಾರಿಗೆ ನಿಗಮ

ಕೋರಮಂಗಲ ಬ್ಲಾಕ್ ಬೇರಿಸ್ ಸ್ಟೋರ್ ಕಂಪನಿಯ ಜಿಎಂ ಸಾಯಾಕ್ ಅರೋರಾ ಯುವತಿಗೆ ಅವ್ಯಾಚ ಶಬ್ದಗಳಿಂದ ನಿಂದನೆ ಮಾಡಿದ್ದಲ್ಲದೆ, ನಾಲ್ಕು ಲಕ್ಷ ನೀಡಿ ಸ೦ಧಾನ ಮಾಡಿಕೊಳ್ಳುವಂತೆ ಒತ್ತಡ ಹೇರಿದ್ದಾರೆ. ಈಗಾಗಲೇ, ಟೈಪ್ ಮಾಡಿದ್ದ ಪ್ರತಿಯನ್ನು ಮುಂದಿಟ್ಟು ಸಹಿ ಹಾಕುವಂತೆ ಒತ್ತಡ ಹೇರಿದ್ದಾರೆ. ಹಣ ನೀಡದಿದ್ದರೆ ಕೆಲಸದಿಂದ ತೆಗೆಯುವುದಾಗಿ ಹೆಚ್​ಆರ್ ಅಂಕುಷ್ ಠಾಕೂರ್, ಎಂಐಎಸ್ ಅವಿನಾಶ್ ವರ್ಮ, ಜಿಎಂ ಸಯಾಕ್ ಆರೋರಾ, ಪ್ರಾಂಚೈಸಿ ಹರೀಶ್ ಎಂಬವರು ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಯುವತಿ ದೂರಿನಲ್ಲಿ ವಿವರಿಸಿದ್ದಾರೆ.

ಕಿರುಕುಳ ನೀಡಿದ ಯುವಕನ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಂಪನಿ ಆಡಳಿತ ಮಂಡಳಿ ವಿರುದ್ಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X