ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾದ ಬೆಂಗಳೂರು ನಗರ – ನಿಷ್ಕ್ರಿಯ ಪೊಲೀಸ್ ಇಲಾಖೆ

Date:

Advertisements

ಮಂಗಳವಾರ ನಗರದ ಚರ್ಚ್ ಸ್ಟ್ರೀಟ್ ಕಚೇರಿವೊಂದಕ್ಕೆ ಏಕಾಏಕಿ ಪ್ರವೇಶಿಸಿದ ಕಾಮುಕನೊಬ್ಬ ಕಚೇರಿಯಲ್ಲಿದ್ದ ಮಹಿಳಾ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಯುವಕನೊಬ್ಬ ಕಚೇರಿ ಪ್ರವೇಶಿಸಿ ಉದ್ಯೋಗಿಗೆ ನೇರವಾಗಿ ಲೈಂಗಿಕ ಚಟುವಟಿಕೆಗೆ ಬರಬೇಕೆಂದು ಪೀಡಿಸಿದ ಪ್ರಸಂಗ ನಿಜಕ್ಕೂ ಬೆಂಗಳೂರಿನ ಖ್ಯಾತಿಗೆ ಮಸಿ ಬೆಳೆಯುವಂತಿದೆ ಎಂದು ಎಎಪಿ ಆರೋಪಿಸಿದೆ.

ಈ ಪ್ರಕರಣವನ್ನು ಬೆಳಕಿಗೆ ತಂದ ಆಮ್ ಆದ್ಮಿ ಪಕ್ಷದ ಬೆಂಗಳೂರು ಮಾಧ್ಯಮ ಸಂಚಾಲಕ ಅನಿಲ್ ನಾಚಪ್ಪ ವಿಡಿಯೋ ಮತ್ತು ಆಡಿಯೋ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಘಟನೆ ನಡೆದ ತಕ್ಷಣವೇ ಹತ್ತಿರದ ಕಬ್ಬನ್ ಪಾರ್ಕ್ ಪೊಲೀಸರಿಗೆ ಕರೆ ಮಾಡಿದರು ಸಹ, ದೂರನ್ನು ನೀಡಿದರು ಸಹ ಪೊಲೀಸರು ತಕ್ಷಣ ಸಹಕರಿಸದೆ ಕೈ ಚೆಲ್ಲಿ ಕುಳಿತರು. ಸೂಕ್ತ ಸಮಯದಲ್ಲಿ ಸ್ಥಳಕ್ಕೆ ಆಗಮಿಸದೆ ನಂತರ ಒತ್ತಡ ಬಂದಾಗ ನಾಮ್ ಕೆ ವಾಸ್ತೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುವ ಕಾರ್ಯವನ್ನು ಕೈಗೊಂಡರು. ಹತ್ತಿರದ ರಸ್ತೆಯಲ್ಲಿ ಇದ್ದ ಸಿಸಿ ಕ್ಯಾಮರಾಗಳು ಕಾರ್ಯ ನಿರ್ವಹಣೆ ಮಾಡುತ್ತಿಲ್ಲವೆಂದು, ಆರೋಪಿಯನ್ನು ಹಿಡಿಯಲು ಸಾಕಷ್ಟು ಕಷ್ಟವಾಗುತ್ತದೆ ಎಂದು ತಿಳಿಸಿದ ವಿಚಾರ ಬೆಂಗಳೂರು ಪೊಲೀಸರು ಮಹಿಳಾ ಸುರಕ್ಷತೆಯ ವಿಚಾರದಲ್ಲಿ ಸಾಕಷ್ಟು ಬೇಜವಾಬ್ದಾರಿಯನ್ನು ಹೊಂದಿದ್ದಾರೆ ಎಂಬುದು ಸಾಬೀತಾಗುತ್ತದೆ ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯಾದ್ಯಂತ ಒಂದು ವಾರ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Advertisements

“ಬೆಂಗಳೂರಿನ ಅನೇಕ ಪ್ರಮುಖ ರಸ್ತೆಗಳಲ್ಲಿ ಸುರಕ್ಷತೆಗಾಗಿ ಹಾಕಿರುವ ಸಿಸಿ ಕ್ಯಾಮೆರಾಗಳು ಸಂಪೂರ್ಣ ನಿಷ್ಕ್ರಿಯವಾಗಿರುವ ವಿಚಾರ ಪೊಲೀಸರಿಂದಲೇ ಬೆಳಕಿಗೆ ಬಂದಿದೆ. ಠಾಣೆಯಲ್ಲಿ ಯಾವುದೇ ದೂರು ನೀಡಿದರು ಸಿ ಸಿ ಕ್ಯಾಮೆರಾಗಳು ಕೆಲಸ ಮಾಡುತ್ತಿಲ್ಲವೆಂಬ ಉತ್ತರ ಸಿಗುತ್ತದೆ. ಇದು ನಿಜಕ್ಕೂ ಬೆಂಗಳೂರಿನ ಘನತೆಗೆ ಗೌರವ ತರುವಂತದ್ದಲ್ಲ, ಸರ್ಕಾರ ಕೋಟ್ಯಂತರ ರೂಪಾಯಿಗಳನ್ನು ವೆಚ್ಚ ಮಾಡಿ ನಗರ ಸುರಕ್ಷತೆಗೆ ಹಾಕಿರುವ ಸಿಸಿ ಕ್ಯಾಮೆರಾಗಳು ನಿಷ್ಕ್ರಿಯಗೊಂಡಿವೆ. ಹಾಗಾಗಲು ಸ್ಥಳೀಯ ರಾಜಕಾರಣಿಗಳ, ಅಧಿಕಾರಿಗಳ ಪಾಲೂ ಇದೆ. ಬೆಂಗಳೂರಿನ ಜನತೆಗೆ ಈ ಕ್ಯಾಮೆರಾಗಳಿಂದ ಯಾವುದೇ ಸುರಕ್ಷತೆ, ರಕ್ಷಣೆ ಲಭ್ಯವಿಲ್ಲದಂತಾಗಿದೆ. ಕೂಡಲೇ ಗೃಹ ಸಚಿವರು ತನಿಖೆಯನ್ನು ನಡೆಸಿ ಸಿಸಿ ಕ್ಯಾಮೆರಾಗಳ ಕಾರ್ಯ ಶೈಲಿಯನ್ನು ಪರಿಶೀಲಿಸಿ ಮಹಿಳೆಯರ ಸುರಕ್ಷತೆಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X