ಇಬ್ಬರು ಯುವಕರಿಂದ ಬ್ಲ್ಯಾಕ್ ಮೇಲ್ ; ಯುವತಿ ಆತ್ಮಹತ್ಯೆ

Date:

Advertisements

ಇಬ್ಬರು ಯುವಕರಿಂದ ನಿರಂತರ ಕಿರುಕುಳ ಅನುಭವಿಸಿದ್ದ ಯುವತಿ, ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಜಿ ನಿಹಾರಿಕಾ (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೂಲತಃ ಆಂಧ್ರಪ್ರದೇಶದ ಧರ್ಮಾವರಂನ ನಿವಾಸಿಯಾದ ನಿಹಾರಿಕಾ ಬೆಂಗಳೂರಿನಲ್ಲಿ ಬಿ.ಟೆಕ್‌ ಪದವಿ ಪಡೆದು, ಇಲ್ಲಿಯೇ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಕಾಲೇಜಿನಲ್ಲಿ ವ್ಯಾಸಂಗ ಮಾಡುವ ವೇಳೆ ಆಂಧ್ರ ಮೂಲದ ಯುವಕನೊಬ್ಬನನ್ನು ನಿಹಾರಿಕಾ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕೆಲಸಕ್ಕೆ ಸೇರಿದ ಬಳಿಕ ಆಕೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಮತ್ತೊಬ್ಬ ಯುವಕ ಪರಿಚಯವಾಗಿದ್ದಾನೆ. ಆತನೊಂಂದಿಗೆ ನಿಹಾರಿಕ ಸ್ನೇಹ ಬೆಳೆಸಿದ್ದಾರೆ.

Advertisements

ಆದರೆ, ಇಬ್ಬರನ್ನೂ ನಿಹಾರಿಕಾ ಪ್ರೀತಿಸುತ್ತಿದ್ದಾರೆಂದು ಭಾವಿಸಿದ ಯುವಕರು ಆಕೆಗೆ ಬ್ಲಾಕ್‌ಮೇಲ್‌ ಮಾಡುವ ಮೂಲಕ ನಿರಂತವಾಗಿ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಕಿರುಕುಳದಿಂದ ಮನನೊಂದಿದ್ದ ಯುವತಿ ಜೂನ್‌ 23ರ ಸಂಜೆ ತನ್ನೂರಿಗೆ ತೆರಳಲು ಧರ್ಮಾವರಂ ಬಸ್‌ ಹತ್ತಿದ್ದಾಳೆ. ಆದರೆ, ಮಾರ್ಗ ಮಧ್ಯೆ, ಬಾಗೇಪಲ್ಲಿಯಲ್ಲಿ ಬಸ್‌ ಇಳಿದು, ಚಿತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೋಬೋಟ್‌ ನೆರವಿನಿಂದ 30 ವರ್ಷದ ರೋಗಿಗೆ ಮಗುವಿನ ಮೂತ್ರಪಿಂಡ ಕಸಿ

ಪ್ರಕರಣ ಸಂಬಂಧ ಈದಿನ.ಕಾಮ್ ಜೊತೆ ಮಾತನಾಡಿದ ಬಾಗೇಪಲ್ಲಿ ಪೊಲೀಸರು, “ಊರಿಗೆ ಹೋಗುತ್ತಿರುವುದಾಗಿ ಆಕೆ ತನ್ನ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಆದರೆ, ಆಕೆ ಮನೆಗೆ ತೆರಳಿಲ್ಲ. ನಾಲ್ಕು ದಿನಗಳು ಕಳೆದರೂ ಮಗಳು ಮನೆಗೆ ಬರದಿರುವುದನ್ನು ಗಮನಿಸಿದ ಪಾಲಕರು ಸಂಬಂಧಿಕರಿಗೆ ಮಾಹಿತಿ ನೀಡಿದ್ದು, ಹುಡುಕಾಡಿದ್ದಾರೆ. ಆದರೆ, ಆಕೆಯ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡಿದ್ದೇವೆ” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X