ಬಿಎಂಟಿಸಿ | ಹೆಬ್ಬಾಳ-ಶಿವಾಜಿನಗರ ಬಸ್‌ಗಳ ಸೇವೆ ಕೊಡಿಗೇಹಳ್ಳಿ ಗೇಟ್‌ವರೆಗೆ ವಿಸ್ತರಣೆ

Date:

Advertisements

ರಾಜಧಾನಿ ಬೆಂಗಳೂರಿನ ಹೆಬ್ಬಾಳ ಬಳಿ ಸಂಚಾರ ದಟ್ಟಣೆ ಕಡಿಮೆ ಮಾಡುವ ದೃಷ್ಟಿಯಿಂದ ಮೇಲ್ಸೇತುವೆಗೆ ಹೆಚ್ಚುವರಿ ರ‍್ಯಾಂಪ್ ನಿರ್ಮಾಣ ಮಾಡುವ ಕಾರ್ಯ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ವೀಸ್ ರಸ್ತೆ ಬಂದ್ ಮಾಡಲಾಗಿದ್ದು, ಜುಲೈ 15ರವರೆಗೆ ಆ ಪ್ರದೇಶದಲ್ಲಿ ಸಂಚಾರ ದಟ್ಟಣೆ ಉಂಟಾಗಲಿದೆ. ಹೀಗಾಗಿ ಹೆಬ್ಬಾಳ ಮತ್ತು ಶಿವಾಜಿನಗರ ನಡುವೆ ಸಂಚರಿಸುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳ ಸೇವೆಗಳನ್ನು ಕೊಡಿಗೇಹಳ್ಳಿ ಗೇಟ್‌ವರೆಗೆ ವಿಸ್ತರಿಸಲಾಗಿದೆ.

ಹೆಬ್ಬಾಳದಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಗಳಿಂದಾಗಿ ಹೆಬ್ಬಾಳ ಪೊಲೀಸ್ ಠಾಣೆ ಬಳಿಯ ಬಸ್ ನಿಲ್ದಾಣದಿಂದ ಬಸ್‌ಗಳನ್ನು ಹಿಡಿಯಲು ಹಲವು ಪ್ರಯಾಣಿಕರು ತೊಂದರೆ ಅನುಭವಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಹೆಬ್ಬಾಳ ಮೇಲ್ಸೇತುವೆಗೆ ರ‍್ಯಾಂಪ್ ಸೇರಿಸುವ ಕಾಮಗಾರಿ ಆರಂಭವಾಗುತ್ತಿದ್ದಂತೆ ಸಂಚಾರ ಪೊಲೀಸರು ಜುಲೈ 3ರ ಸೋಮವಾರದಿಂದ ಸರ್ವಿಸ್ ರಸ್ತೆಗೆ ನಿರ್ಬಂಧ ಹೇರಿದ ಪರಿಣಾಮ ಸೋಮವಾರ ಮತ್ತು ಮಂಗಳವಾರ ಸಿಬಿಐ ಸ್ಟಾಪ್‌ನಲ್ಲಿ ಬಸ್‌ಗಳು ಆರಂಭಗೊಂಡು ನಿಲ್ಲುತ್ತಿವೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜುಲೈ 15ರವರೆಗೆ ಹೆಬ್ಬಾಳ ಮೇಲ್ಸೇತುವೆ ಬಳಿ ಸಂಚಾರ ದಟ್ಟಣೆ ಬಿಸಿ

“ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಕೊಡಿಗೇಹಳ್ಳಿ ಗೇಟ್‌ವರೆಗೆ ಸೇವೆಯನ್ನು ವಿಸ್ತರಿಸಲು ನಾವು ನಿರ್ಧರಿಸಿದ್ದೇವೆ. ಕಾಮಗಾರಿ ಪೂರ್ಣಗೊಳ್ಳುವವರೆಗೂ ಇದು ಮುಂದುವರಿಯಲಿದೆ” ಎಂದು ಬಿಎಂಟಿಸಿ ಅಧಿಕಾರಿಯೊಬ್ಬರು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X