ಬ್ರ್ಯಾಂಡ್ ಬೆಂಗಳೂರು | ಸಲಹೆಗಳ ವರದಿ ಸಲ್ಲಿಸಲು ನೋಡಲ್ ಅಧಿಕಾರಿಗಳಿಗೆ ಸೂಚನೆ

Date:

Advertisements

‘ಬ್ರ್ಯಾಂಡ್ ಬೆಂಗಳೂರು’ ಪರಿಕಲ್ಪನೆ ಅಡಿಯಲ್ಲಿ 8 ವಿಷಯಗಳ ಕುರಿತು ಈಗಾಗಲೇ ತಜ್ಞರು, ಪರಿಸರವಾದಿಗಳು ಸೇರಿದಂತೆ ಸಾರ್ವಜನಿಕರಿಂದ ಸಲಹೆಗಳನ್ನು ಪಡೆಯಲಾಗಿದೆ. ಇದೀಗ, ಬಂದಿರುವ ಸಲಹೆಗಳನ್ನು ಸಂಗ್ರಹಿಸಿ ಒಟ್ಟುಗೂಡಿಸಿ ವರದಿಯನ್ನು ಸಿದ್ಧಪಡಿಸಲಾಗಿದೆ. ಈ ಸಿದ್ದಪಡಿಸಿರುವ ವರದಿಯನ್ನು ಸಲ್ಲಿಸಬೇಕು ಎಂದು ಬ್ರ್ಯಾಂಡ್ ಬೆಂಗಳೂರು ಸಮಾವೇಶ ಸಮಿತಿಯ ಅಧ್ಯಕ್ಷ ಹಾಗೂ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಮ್ ರಾಯಪುರ ಅವರು ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬ್ರ್ಯಾಂಡ್ ಬೆಂಗಳೂರಿನ ಸಮಾವೇಶವನ್ನು ನಡೆಸುವ ಸಂಬಂಧ ಪಾಲಿಕೆ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಅವರು, “ಬ್ರ್ಯಾಂಡ್ ಬೆಂಗಳೂರು ಯೋಜನೆಯ ಅನುಷ್ಠಾನಕ್ಕಾಗಿ ಈಗಾಗಲೇ ಸಾಕಷ್ಟು ಸಿದ್ದತೆ ಮಾಡಿಕೊಳ್ಳಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಈಗಾಗಲೇ ಸರ್ವಪಕ್ಷಗಳ ಶಾಸಕರು, ಸಂಸದರು ಹಾಗೂ ಜನಪ್ರತಿನಿಧಿಗಳ ಸಭೆ ನಡೆಸಲಾಗಿದೆ” ಎಂದರು.

“ನಾನಾ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರು, ಸ್ಥಳೀಯ ಎನ್‌ಜಿಒ/ಆರ್.ಡಬ್ಲ್ಯೂ.ಎ ಗಳ ಜತೆ ಸಭೆ ನಡೆಸಿ ಸಲಹೆ/ಅಭಿಪ್ರಾಯ ಪಡೆಯಲಾಗಿದೆ. ಜತೆಗೆ ಸಾರ್ವಜನಿಕರಿಂದ ವೆಬ್ ಪೋರ್ಟಲ್ ಮೂಲಕ ಸಲಹೆ ಪಡೆಯಲಾಗಿದೆ. ಬೆಂಗಳೂರಿನ ಅಭಿವೃದ್ಧಿಗಾಗಿ ಸಂಚಾರಯುಕ್ತ ಬೆಂಗಳೂರು, ಹಸಿರು ಬೆಂಗಳೂರು, ಸ್ವಚ್ಛ ಬೆಂಗಳೂರು, ಜನಹಿತ ಬೆಂಗಳೂರು, ಆರೋಗ್ಯಕರ ಬೆಂಗಳೂರು, ಟೆಕ್ ಬೆಂಗಳೂರು ಹಾಗೂ ಜಲಸುರಕ್ಷಾ ಬೆಂಗಳೂರು ಸೇರಿದಂತೆ ಒಟ್ಟು 7 ವಿಷಯಗಳ ಕುರಿತು 70 ಸಾವಿರಕ್ಕೂ ಹೆಚ್ಚು ಅಭಿಪ್ರಾಯ/ಅನಿಸಿಕೆ/ಸಲಹೆಗಳು ಬಂದಿವೆ. 8ನೇ ವಿಷಯವಾದ ಶೈಕ್ಷಣಿಕ ಬೆಂಗಳೂರು ವಿಷಯವಾಗಿ ಸಭೆ ನಡೆಸಲಾಗಿದೆ. ಅದರಂತೆ 8 ವಿಷಯಗಳ ಕುರಿತು ಸಿದ್ದಪಡಿಸಿರುವ ವರದಿಯನ್ನು ಕೂಡಲೇ ಸಲ್ಲಿಸಬೇಕು” ಎಂದು ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisements

“ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯ 8 ವಿಷಯಗಳ ಕುರಿತಾಗಿ ಸಿದ್ದಪಡಿಸಿರುವ ವರದಿಗಳ ಆಧಾರದ ಮೇಲೆ 8 ವಿಷಯಗಳನ್ನೊಳಗೊಂಡ ಸಂಕ್ಷಿಪ್ತ ಪ್ರಾತ್ಯಕ್ಷಿಕೆಯನ್ನು ಸಿದ್ದಪಡಿಸಿಕೊಳ್ಳಬೇಕು. ಸಾರ್ವಜನಿಕರಿಂದ ಬಂದಿರುವ ಅಭಿಪ್ರಾಯಗಳ ಬಗ್ಗೆ ಹಾಗೂ ತಜ್ಞರೊಂದಿಗೆ ವಿಚಾರ ವಿನಿಮಯ ನಡೆಸುವ ಬಗ್ಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಮಾವೇಶ ಸಭೆ ನಡೆಸಬೇಕು. ಈ ಸಭೆ ಏರ್ಪಡಿಸುವ ಸಲುವಾಗಿ ಅಗತ್ಯವಿರುವ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು” ಎಂದು ಆಡಳಿತ ವಿಭಾಗದ ಉಪ ಆಯುಕ್ತರಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಣೇಶ ಪ್ರತಿಷ್ಠಾಪನೆಗೆ ಒಂದೇ ಸೂರಿನಡಿ ಸಿಗಲಿದೆ ಅನುಮತಿ: ಬಿಬಿಎಂಪಿ ಆಯುಕ್ತ

ಬ್ರ್ಯಾಂಡ್ ಬೆಂಗಳೂರು ಕಲ್ಪನೆಯ ಬಗ್ಗೆ 8 ಸಮಿತಿಗಳು ಸಿದ್ದಪಡಿಸುತ್ತಿರುವ ವರದಿಗಳ ಆಧಾರದ ಮೇಲೆ ಮುಂದಿನ ಕಾರ್ಯಯೋಜನೆಯನ್ನು ಸೂಚಿಸುವಂತೆ ಹಾಗೂ ಅಗತ್ಯ ಆಡಳಿತಾತ್ಮಕ ಸಿದ್ದತೆಗಳ ಬಗ್ಗೆ ಸಲಹೆ ನೀಡುವಂತೆ ಸೂಚಿಸಿದರು.

ಸಭೆಯಲ್ಲಿ ಸಮಾವೇಶದ ಸಮಿತಿಯ ಸದಸ್ಯರಾದ ಡಾ.ತ್ರಿಲೋಕ್ ಚಂದ್ರ, ಡಾ. ಹರೀಶ್ ಕುಮಾರ್, ಆಡಳಿತ ವಿಭಾಗದ ಉಪ ಆಯುಕ್ತರಾದ ಮಂಜುನಾಥ ಸ್ವಾಮಿ, 8 ವಿಷಯಗಳ ನೋಡಲ್ ಅಧಿಕಾರಿಗಳು, ಸಮನ್ವಯಾಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X