ದಾಸಪ್ಪ ಹೆರಿಗೆ ಆಸ್ಪತ್ರೆ | ಉಚಿತ ಫಿಸಿಯೋಥೆರಪಿ ಕೇಂದ್ರ ಪ್ರಾರಂಭಿಸಲು ನವೀಕರಣ ಪ್ರಕ್ರಿಯೆ

Date:

Advertisements

ದಾಸಪ್ಪ ಹೆರಿಗೆ ಆಸ್ಪತ್ರೆಯ ಪಾಲಿಕ್ಲಿನಿಕ್ ವಿಭಾಗದ ಕಟ್ಟಡದಲ್ಲಿ ಉಚಿತ ಫಿಸಿಯೋಥೆರಪಿ ಕೇಂದ್ರ ಪ್ರಾರಂಭಿಸಲು ನವೀಕರಣ ಪ್ರಕ್ರಿಯೆಯನ್ನು ನಡೆಸಲಾಗುತ್ತಿದ್ದು, ಮುಂದಿನ 15 ದಿನಗಳಲ್ಲಿ ಎಲ್ಲ ಕೆಲಸವನ್ನು ಪೂರ್ಣಗೊಳಿಸಿ ರೋಗಿಗಳಿಗೆ ಫಿಸಿಯೋಥೆರಪಿ ಸೇವೆಯನ್ನು ಪ್ರಾರಂಭಿಸಲು ಬಿಬಿಎಂಪಿ ದಕ್ಷಿಣ ವಲಯ ಆಯುಕ್ತ ಜಯರಾಮ್ ರಾಯಪುರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು‌.

ದಾಸಪ್ಪ ಹೆರಿಗೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, “ಪಾಲಿಕ್ಲಿನಿಕ್ ವಿಭಾಗದ ಕಟ್ಟಡದಲ್ಲಿ ಉಚಿತ ಫಿಸಿಯೋಥೆರಪಿ ಕೇಂದ್ರವನ್ನು ಪಾಲಿಕೆ, ಎಪಿಡಿ, ಕೆ.ಎಸ್‌.ಡಿ.ಸಿ.ಎಫ್ ಸೇರಿ ತ್ರಿಪಕ್ಷ ಒಪ್ಪಂದದಲ್ಲಿ ಪ್ರಾರಂಭಿಸಲಾಗುತ್ತಿದೆ. ಇದರಿಂದ ನಗರದ ಎಲ್ಲ ನಾಗರಿಕರಿಗೂ ಅನುಕೂಲವಾಗಲಿದೆ” ಎಂದು ತಿಳಿಸಿದರು.

ಫಿಜಿಯೋಥೆರಪಿ ಕೇಂದ್ರದ ಅವಶ್ಯಕತೆಗಳ ಬಗ್ಗೆ ಎಪಿಡಿ ಸಂಸ್ಥೆ ಅವರೊಂದಿಗೆ ಆಯುಕ್ತರು ಚರ್ಚಿಸಿದರು. ದಾಸಪ್ಪ ಹೆರಿಗೆ ಆಸ್ಪತ್ರೆಯಲ್ಲಿ ಕಾಪಾಡಿಕೊಂಡಿರುವ ಶುಚಿತ್ವವನ್ನು ಗಮನಿಸಿದರು. ನವಜಾತ ಶಿಶುವಿನ ಬಾಣಂತಿ ಮಹಿಳೆ, ಸಂಬಂಧಿಗಳ ಜೊತೆ ಸಮಾಲೋಚನೆ ನಡೆಸಿ ಉಚಿತವಾಗಿ ಸಹಜ ಹೆರಿಗೆ ಶಸ್ತ್ರಚಿಕಿತ್ಸೆ ಸೇವೆ ನೀಡುತ್ತಿದ್ದಾರೆಯೇ ಅಥವಾ ಹಣ ಪಡೆಯುತ್ತಿದ್ದಾರೆಯೇ ಎಂದು ಪ್ರಶ್ನಿಸಿದರು. ಅದಕ್ಕೆ ಬಾಣಂತಿ ಮಹಿಳೆಯ ಸಂಬಂಧಿಕರೊಬ್ಬರು ಪ್ರತಿಕ್ರಿಯಿಸಿ, ಎಲ್ಲ ಸೇವೆಯೂ ಉಚಿತವಾಗಿ ಸಿಗುತ್ತಿದ್ದು, ವೈದ್ಯರು ಹಾಗೂ ಸಿಬ್ಬಂದಿ ಸೌಜನ್ಯದಿಂದ ವರ್ತಿಸುತ್ತಾರೆ ಎಂದು ತಿಳಿಸಿದರು.

ದಾಸಪ್ಪ ಹೆರಿಗೆ ಆಸ್ಪತ್ರೆಯ ಆಪರೇಷನ್ ಥಿಯೇಟರ್, ಹೆರಿಗೆ ಕೊಠಡಿ, ಔಷಧ ಉಗ್ರಾಣ ಪರಿಶೀಲಿಸಿದರು ಹಾಗೂ ಆವರಣದಲ್ಲಿರುವ ಎಲ್ಲ ಕಟ್ಟಡಗಳು ಹಾಗೂ ಕಚೇರಿಗಳನ್ನು ಪರಿಶೀಲಿಸಿ ಹಾಳಾಗಿರುವ ಕಡೆ ತ್ವರಿತವಾಗಿ ದುರಸ್ಥಿ ಕಾರ್ಯ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಾಸಪ್ಪ ಆಸ್ಪತ್ರೆಯ ಆವರಣದಲ್ಲಿರುವ ಕಟ್ಟಡಗಳ ಗೋಡೆಗಳ ಮೇಲೆ ಬೆಳೆದಿರುವ ಗಿಡಗಳನ್ನು ತೆರವುಗೊಳಿಸಿ ಮುಂದಿನ ದಿನಗಳಲ್ಲಿ ಗಿಡಗಳು ಬೆಳೆಯದಂತೆ ನೋಡಿಕೊಳ್ಳಬೇಕು. ಆಸ್ಪತ್ರೆ ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮ ಕರ್ತವ್ಯವಾಗಿದ್ದು, ಆವರಣದಲ್ಲಿರುವ 2 ಉದ್ಯಾ‌ನವನಗಳನ್ನು ಸರಿಯಾಗಿ ನಿರ್ವಹಣೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರದ್ದಾಗಿರುವ ಹುದ್ದೆಗಳಿಗೆ ಬಡ್ತಿ ಅಕ್ರಮದಲ್ಲಿ ಸಚಿವರ ಪಾಲೆಷ್ಟು?: ಮುಖ್ಯಮಂತ್ರಿ ಚಂದ್ರು

ದಾಸಪ್ಪ ಹೆರಿಗೆ ಆಸ್ಪತ್ರೆ ಹಾಗೂ ಜನೌಷಧಿ ಕೆಂದ್ರ ಪರಿಶೀಲಿಸಿ, ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳು ಹಾಗೂ ಅತ್ಯವಶ್ಯಕ ಔಷಧಗಳ ಶೇಖರಣೆ ಮಾಡಿಟ್ಟುಕೊಂಡಿರಬೇಕು. ಆಸ್ಪತ್ರೆಯ ತಜ್ಞ ವೈದ್ಯರು, ಪ್ರಸೂತಿ ತಜ್ಞರು, ಮಕ್ಕಳ ತಜ್ಞ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದರು.

ದಾಸಪ್ಪ ಹೆರಿಗೆ ಆಸ್ಪತ್ರೆಯ ಪ್ರಮುಖ ದ್ವಾರದ ಬಳಿ ಒಳ ಚರಂಡಿ ಬ್ಲಾಕ್ ಆಗಿರುವ ಕಾರಣ ರಸ್ತೆಯ ಮೇಲೆ ನೀರು ಹರಿಯುತ್ತಿದ್ದು, ಈ ಸಂಬಂಧ ದಕ್ಷಿಣ ವಲಯದ, ಮುಖ್ಯ ಅಭಿಯಂತರರು ಜಲಮಂಡಳಿ ಅಧಿಕಾರಿಗಳು ಹಾಗೂ ಕೆನರಾ ಬ್ಯಾಂಕ್ ನ ತಾಂತ್ರಿಕ ಸಿಬ್ಬಂದಿಗಳು ಜೊತೆ ಚರ್ಚಿಸಿ ಅದಕ್ಕೆ ಶಾಶ್ವತ ಪರಿಹಾರ ನೀಡಲು ಸೂಚನೆ ನೀಡಿದರು.

ಈ ವೇಳೆ ದಕ್ಷಿಣ ವಲಯ ಮುಖ್ಯ ಅಭಿಯಂತರರಾದ ರಾಜೇಶ್, ದಕ್ಷಿಣ ವಲಯ ಆರೋಗ್ಯಾಧಿಕಾರಿ(ಕ್ಲಿನಿಕಲ್) ಡಾ. ಸರಸ್ವತಿ, ವೈದ್ಯರು, ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆಣ್ಣು ಮಕ್ಕಳು ನಮ್ಮ ದೇಶದ ಮುಂದಿನ ಭವಿಷ್ಯ: ಕ್ರೀಡಾಪಟು ಅಂಜು ಬಾಬಿ‌ ಜಾರ್ಜ್

ಹೆಣ್ಣು ಮಕ್ಕಳು ನಮ್ಮ ದೇಶದ ಮುಂದಿನ ಭವಿಷ್ಯ.‌ ಕ್ರೀಡೆ ಸೇರಿದಂತೆ ಹೆಣ್ಣು...

ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ವತಿಯಿಂದ ಅ.2ರಿಂದ ರಾಜ್ಯಾದ್ಯಂತ ʼಅರಿವು-ಮಾನವೀಯತೆʼ ಜಾಗೃತಿ ಅಭಿಯಾನ

ಕರ್ನಾಟಕ ರಾಜ್ಯ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ವತಿಯಿಂದ ಅ.2ರಿಂದ ರಾಜ್ಯಾದ್ಯಂತ...

ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್ ಬೆಂಬಲಕ್ಕೆ ಬೃಹತ್ ಪ್ರತಿಭಟನೆ: ನರಮೇಧ ನಿಲ್ಲಿಸಿ ಎಂದು ಆಗ್ರಹ

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ದೊಡ್ಡ ಸಂಖ್ಯೆಯ ಜನರು ಸೇರಿ, ಗಾಜಾದಲ್ಲಿ...

ರೈತರು ಸಹಕಾರ ಸಂಘಗಳಲ್ಲಿ ವ್ಯವಹರಿಸಿ ಸಂಘದ ಉನ್ನತಿಗೆ ಸಹಕರಿಸಿ

ದೇವನಹಳ್ಳಿ:ರೈತರು ಸಹಕಾರ ಸಂಘಗಳಲ್ಲಿ ವ್ಯವಹರಿಸಿ ಸಂಘದ ಉನ್ನತಿಗೆ ಸಹಕರಿಸಿ ಖಾಸಗಿ ಬ್ಯಾಂಕ್‌ಗಳಲ್ಲಿ...

Download Eedina App Android / iOS

X