ಒಂದು ವರ್ಷದ ಅವಧಿಯವರೆಗೆ ವಿದ್ಯುತ್ ದರ ಹೆಚ್ಚಳ ಮುಂದೂಡಲು ಹೋಟೆಲ್ ಸಂಘ ಮನವಿ

Date:

Advertisements
  • ವಿದ್ಯುತ್ ದರ ಏರಿಕೆಯನ್ನು 9% ನಿಂದ 3% ವರೆಗೆ ಇಳಿಸಬೇಕು
  • ಇಲಾಖೆಗಳು ಪಾವತಿಸಬೇಕಾದ ಬಾಕಿ ಮೊತ್ತವನ್ನು ಬಡ್ಡಿಸಹಿತ ಸಂಗ್ರಹಿಸಬೇಕು

ರಾಜ್ಯದಲ್ಲಿ ಆಗಾಗ ವಿದ್ಯುತ್ ದರವನ್ನು ಹೆಚ್ಚಳ ಮಾಡುವುದರಿಂದ ನಮ್ಮ ಉದ್ಯಮದ ಮೇಲೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಮುಂದಿನ ಒಂದು ವರ್ಷದ ಅವಧಿಯವರೆಗೆ ದರ ಹೆಚ್ಚಳವನ್ನು ಮುಂದೂಡಬೇಕು ಎಂದು ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಮನವಿ ಮಾಡಿದೆ.

ಈ ಬಗ್ಗೆ ಇಂಧನ ಸಚಿವ ಕೆ ಜೆ ಜಾರ್ಜ್‌ ಅವರಿಗೆ ಮನವಿ ಪತ್ರ ಕಳುಹಿಸಿರುವ ಹೋಟೆಲ್ ಸಂಘ, “ದರ ಏರಿಕೆಯಿಂದ ಎಲ್ಲ ಉದ್ಯಮದ ಮಾಲೀಕರಿಗೆ ಬಹಳಷ್ಟು ತೊಂದರೆಯಾಗುತ್ತಿದೆ. ದರ ಏರಿಕೆಯ ಜತೆಗೆ ಇಂಧನ ಮತ್ತು ವೆಚ್ಚ ಹೊಂದಾಣಿಕೆ, ಸ್ಥಿರ ಬೇಡಿಕೆ ಶುಲ್ಕಗಳು ಹೆಚ್ಚಳವಾಗಿವೆ. ಏರಿಕೆಯಾಗಿರುವ ದರದ ಮೇಲೂ ಸಹ 9% ತೆರಿಗೆ ಕೂಡ ಹೆಚ್ಚಳವಾಗಿದೆ. ಇದರಿಂದ ಉದ್ಯಮ ನಡೆಸಲು ತುಂಬಾ ಸಮಸ್ಯೆಯಾಗುತ್ತದೆ” ಎಂದು ಹೇಳಿದೆ.

“ಈಗಿರುವ ವಿದ್ಯುತ್ ದರ ಏರಿಕೆಯನ್ನು 9% ನಿಂದ 3% ವರೆಗೆ ಇಳಿಸಬೇಕು. ಸರಬರಾಜು ಮತ್ತು ವಿತರಣೆಯಲ್ಲಿ ಉಂಟಾಗುವ ನಷ್ಟಗಳನ್ನು ಕಡಿಮೆ ಮಾಡಬೇಕು. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಇಲಾಖೆಗಳು ಪಾವತಿಸಬೇಕಾದ ಬಾಕಿ ಮೊತ್ತವನ್ನು ಬಡ್ಡಿಸಹಿತ ಸಂಗ್ರಹಿಸಬೇಕು. ಪ್ರೀಪೇಡ್ ಮೀಟರ್‌ಗಳನ್ನು ಅಳವಡಿಸಿ ಗ್ರಾಹಕರ ಠೇವಣಿ ಹಣವನ್ನು ಹಿಂತಿರುಗಿಸಬೇಕು. ಅನಗತ್ಯ ಆಡಳಿತ ಖರ್ಚು-ವೆಚ್ಚಗಳನ್ನು ಹತೋಟಿಗೆ ತರಬೇಕು” ಎಂದು ತಿಳಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ₹118 ಕೋಟಿ ಅಕ್ರಮ ಕಾಮಗಾರಿ : 8 ಎಂಜಿನಿಯರ್ ಅಮಾನತು

“ಇವೆಲ್ಲವನ್ನೂ ಪರಿಗಣಿಸಿದಲ್ಲಿ ಉದ್ಯಮಿಗಳಾದ ನಮಗೂ ಇಂಧನ ಇಲಾಖೆಗೂ ಅನುಕೂಲವಾಗಲಿದೆ. ಉದ್ಯಮಿಯಾಗು, ಉದ್ಯೋಗ ಕೊಡು ಎನ್ನುವ ಸರ್ಕಾರದ ಪ್ರಣಾಳಿಕೆಯನ್ನು ಮುಂದುವರೆಸಿಕೊಂಡು ಹೋಗಲು ಸಹಕಾರಿಯಾಗಲಿದೆ” ಎಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X