ಜುಲೈ 4ರ ಸಭೆ ನಿರ್ಣಾಯಕ, ಅಲ್ಲಿಯವರೆಗೆ ಹೋರಾಟ ಮುಂದುವರಿಯಲಿದೆ- ಪ್ರಕಾಶ್‌ ರಾಜ್‌

Date:

Advertisements

ದೇವನಹಳ್ಳಿ ಚಲೋ ಹೋರಾಟಕ್ಕೆ ತಡೆಯೊಡ್ಡಿ ರೈತಪರ ಹೋರಾಟಗಾರರನ್ನು ಬಂಧಿಸಿದ ಬೆನ್ನಲ್ಲೇ ಗುರುವಾರ ಮಧ್ಯಾಹ್ನ ಒಂದು ಗಂಟೆಗೆ ನಟ ಪ್ರಕಾಶ್‌ ರಾಜ್‌ ನೇತೃತ್ವದ ಸಮಾನ ಮನಸ್ಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಮನೆಯಲ್ಲಿ ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮಂಡಿಸಿತ್ತು. ಅದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಜುಲೈ 4ರಂದು ದೇವನಹಳ್ಳಿ ರೈತರೊಂದಿಗೆ ಸಭೆ ನಡೆಸಲು ಒಪ್ಪಿದ್ದಾರೆ ಎಂದು ಸಭೆಯ ನಂತರ ಪ್ರಕಾಶ್‌ ರಾಜ್‌ ಅವರು ತಿಳಿಸಿದರು.

“ಜುಲೈ 4ರಂದು ರೈತರೊಂದಿಗೆ ಸಭೆ ನಡೆಸುವ ಭರವಸೆ ಸಿಕ್ಕಿದೆ. ಅಲ್ಲಿಯವರೆಗೆ ರೈತರ ಹೋರಾಟ ಮುಂದುವರಿಯಲಿದೆ. ಸಿ ಎಂ ಪಾಸಿಟಿವ್‌ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಜುಲೈ ನಾಲ್ಕರ ನಂತರ ಏನಾಗುತ್ತದೆ ಎಂಬುದರ ಮೇಲೆ ಮುಂದಿನ ಹೋರಾಟ ನಿಂತಿದೆ“ ಎಂದರು.

“ನಿನ್ನೆ ಶಾಂತಿಯುತ ಹೋರಾಟ ನಡೆಸಿದ್ದವು. ಫೈನಲ್‌ ನೋಟಿಫಿಕೇಷನ್‌ ಆದ ನಂತರ ಸುಮ್ಮನಿರಲು ಆಗಲ್ಲ. ಸಿದ್ದರಾಮಯ್ಯ ಅವರಿಗೆ ಇದು ಗೊತ್ತಿಲ್ಲದ ವಿಚಾರ ಅಲ್ಲ, ನೋಟಿಫಿಕೇಷನ್‌ ಆಗಿದೆ ಅದನ್ನು ಡಿ ನೋಟಿಫಿಕೇಷನ್‌ ಮಾಡಬೇಕು ಎಂದು ಒತ್ತಾಯಿಸಿದೆವು. ಅವರು ಜುಲೈ ನಾಲ್ಕರಂದು ರೈತರೊಂದಿಗೆ ಸಭೆ ನಡೆಸಿ ಹೇಗೆ ಮಾಡಬಹುದು ಎಂಬ ತೀರ್ಮಾನಕ್ಕೆ ಬರುವುದಾಗಿ ತಿಳಿಸಿದ್ದಾರೆ. ನಮಗೆ ಕೇಳಿಸಿಕೊಳ್ಳುವವರು ಬೇಕಾಗಿದೆ. ಕೇಳಿಸಿಕೊಂಡಿದ್ದಾರೆ. ಅವರಿಗೆ ಇಂಡಸ್ಟ್ರಿ ಕಡೆಯಿಂದ ಏನೇನು ಸಮಸ್ಯೆ ಇದೆಯೋ ಗೊತ್ತಿಲ್ಲ. ಆದರೆ ಸರ್ಕಾರ ಜನಪರವಾಗಿರಬೇಕು“ ಪ್ರಕಾಶ್‌ ರಾಜ್‌ ಹೇಳಿದರು.

Advertisements

ಕೆಲವು ಹಳ್ಳಿಗಳ ಐನೂರು ಎಕರೆ ಭೂಮಿ ವಶಪಡಿಸಿಕೊಳ್ಳುವುದಿಲ್ಲ ಎಂಬ ಸಚಿವ ಎಂ ಬಿ ಪಾಟೀಲರ ಹೇಳಿಕೆಯ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು “ರೈತರ ಒಡೆದಾಳುವ ಆಟ ಬೇಡ. ಅವರು ಸರ್ಕಾರದ ಯಾವ ಗ್ಯಾರಂಟಿಯನ್ನೂ ಕೇಳುತ್ತಿಲ್ಲ. ನಮ್ಮ ಭೂಮಿ ಬಿಟ್ಟುಬಿಡಿ ಎಂದು ಕೇಳುತ್ತಿದ್ದಾರೆ. ಸಿ ಎಂ ವಿರೋಧ ಪಕ್ಷದಲ್ಲಿದ್ದಾಗ ಪ್ರತಿಭಟನೆಯ ಸ್ಥಳಕ್ಕೆ ಬಂದಿದ್ದರು. ಅದನ್ನು ಅವರು ಮರೆತಿಲ್ಲ. ಆದರೆ ಈಗ ಫೈನಲ್‌ ನೋಟಿಫಿಕೇಷನ್ ಆಗಿಬಿಟ್ಟಿದೆ. ಈಗ ಡಿನೋಟಿಫೈ ಮಾಡಿದರೆ ವಿಪಕ್ಷಗಳು ಮುಗಿ ಬೀಳುತ್ತವೆ ಎಂದು ಸಿ ಎಂ ಸಮಜಾಯಿಷಿ ನೀಡಿದ್ದಾರೆ“ ಎಂದು ಅವರು ವಿವರಿಸಿದರು.

ನಿಯೋಗದಲ್ಲಿದ್ದ ಸಾಮಾಜಿಕ ಕಾರ್ಯಕರ್ತ ಸಿರಿಮನೆ ನಾಗರಾಜ್‌ ಮಾತನಾಡಿ, “ಆಂಧ್ರಪ್ರದೇಶ ಸರ್ಕಾರ ಕೈಗಾರಿಕೆಗಳಿಗೆ ಉಚಿತವಾಗಿ ಭೂಮಿ ಕೊಡುವುದಾಗಿ ಹೇಳಿದೆ. ಹಾಗಾಗಿ ನಮಗೆ ಕೈಗಾರಿಕೆಗಳಿಂದ ಒತ್ತಡ ಹೆಚ್ಚಿದೆ“ ಎಂದು ಸಿಎಂ ಹೇಳಿರುವುದಾಗಿ ತಿಳಿಸಿದರು.

ರೈತ ಮುಖಂಡ ವೀರಸಂಗಯ್ಯ ಮಾತನಾಡಿ, “ಮುಖ್ಯಮಂತ್ರಿಯಿಂದ ಪಾಸಿಟಿವ್‌ ರೆಸ್ಪಾನ್ಸ್‌ ಬಂದಿದೆ. ಯಾವುದೇ ಕಾರಣಕ್ಕೂ ಭೂಮಿ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಜುಲೈ ನಾಲ್ಕರ ಸಭೆಯ ತೀರ್ಮಾನ ಏನಾಗುತ್ತೋ ಆಗಲಿ. ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ“ ಎಂದರು.

ಭೇಟಿಗೆ ಅರ್ಧ ದಿನ ಕಾದ ನಿಯೋಗ
ಗುರುವಾರ ಬೆಳಿಗ್ಗೆ 12 ಗಂಟೆಗೆ ಸಿಎಂ ಭೇಟಿಗೆ ಪ್ರಗತಿಪರರ ನಿಯೋಗ ಹೋಗುವುದಾಗಿ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳು ಸಿ ಎಂ ಮನೆ ಕಾವೇರಿ ಮುಂದೆ ಬೆಳಿಗ್ಗೆ ಹನ್ನೊಂದುವರೆಯಿಂದಲೇ ಕಾದಿದ್ದರು. ಪ್ರಕಾಶ್‌ ರಾಜ್‌ ಮತ್ತಿತರ ಮುಖಂಡರು ಕುಮಾರಕೃಪ ಗೆಸ್ಟ್‌ ಹೌಸ್‌ನಲ್ಲಿ ಸಿಎಂ ಅನುಮತಿಗೆ ಕಾದಿದ್ದರು. ಒಂದು ಗಂಟೆಯಾದರೂ ಅನುಮತಿ ಸಿಗದಿದ್ದಾಗ ಭೇಟಿಗೆ ಹೊರಟ ತಂಡವನ್ನು ಪೊಲೀಸರು ಕುಮಾರಕೃಪ ಗೇಟಿನ ಮುಂದೆ ತಡೆದು ಸ್ವಲ್ಪ ಗೊಂದಲ ಸೃಷ್ಟಿಯಾಗಿತ್ತು. ನಂತರ ಸಿ ಎಂ ಕಚೇರಿಯಿಂದ ಅನುಮತಿಯ ಫೋನ್‌ ಕರೆ ಬಂತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ : ‘ಎಕೆ, ಎಡಿ, ಎಎ’ ಸಮಸ್ಯೆ ಜೀವಂತ ಉಳಿಸಿದ ರಾಜ್ಯ ಸರ್ಕಾರ

'ಸಿ' ಮತ್ತು 'ಡಿ' ಗ್ರೂಪ್ ನೌಕರರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಇತರೆ ಅಸ್ಪೃಶ್ಯ...

ಧರ್ಮಸ್ಥಳ ಸುತ್ತ ವ್ಯವಸ್ಥಿತ ಷಡ್ಯಂತ್ರ, ಹಿಂದಿನ ಶಕ್ತಿಗಳನ್ನು ಎಸ್‌ಐಟಿ ಪತ್ತೆ ಮಾಡಲಿ: ಸುನಿಲ್‍ ಕುಮಾರ್

ಧರ್ಮಸ್ಥಳಕ್ಕೆ ಸಂಬಂಧಿಸಿ ಎಸ್‍ಐಟಿ ತನಿಖೆಯಲ್ಲಿ ಬಿಜೆಪಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು...

ನಾನು ದಲಿತರನ್ನು ವಿರೋಧಿಸಿಲ್ಲ, ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಇರಲಿ: ಶಾಸಕ ಜಿ.ಟಿ.ದೇವೇಗೌಡ

ಸರ್ಕಾರದ ಪಾಲುಗಾರಿಕೆ ಇರುವ ಸಂಘಗಳಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸೇರಿಸಿ ಹಾಗೂ ಒಬ್ಬ...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಸ್ವಾಗತ, ಬಿಜೆಪಿ ಮುಖಂಡರ ನಡೆಗೆ ಖಂಡನೆ: ಸಿಪಿಐಎಂ

ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್...

Download Eedina App Android / iOS

X