ಚುನಾವಣೆ | ಕೆಎಸ್‌ಆರ್‌ಟಿಸಿಗೆ 350 ಬಸ್‌ ಬಾಡಿಗೆ ನೀಡಿದ ಬಿಎಂಟಿಸಿ; ಬೆಂಗಳೂರಿನಲ್ಲಿ ಸೇವೆಯಲ್ಲಿ ವ್ಯತ್ಯಯ

Date:

Advertisements
  • ಕೆಎಸ್‌ಆರ್‌ಟಿಸಿಯ ಒಟ್ಟು 8,100 ಬಸ್‌ಗಳ ಪೈಕಿ 4,100 ಬಸ್‌ಗಳನ್ನು ಚುನಾವಣಾ ಕೆಲಸಕ್ಕೆ ನಿಯೋಜನೆ
  • ಮೇ 10ರಂದು ಇಂಟರ್‌ಸಿಟಿ ರೂಟ್‌ಗಳಲ್ಲಿ ಕಾರ್ಯಾಚರಣೆ ನಡೆಸಿದ ಬಿಎಂಟಿಸಿಯ 350 ಬಸ್‌ಗಳು

ಮತದಾನದ ದಿನದಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ತನ್ನ 6,850 ಬಸ್‌ಗಳ ಪೈಕಿ 1,700 ಬಸ್‌ಗಳನ್ನು ಚುನಾವಣಾ ಕರ್ತವ್ಯಕ್ಕಾಗಿ ಮತ್ತು ಇನ್ನೂ 350 ವಾಹನಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ಗೆ ನಿಯೋಜಿಸಿದ್ದರಿಂದಾಗಿ ನಗರದಲ್ಲಿ ಪ್ರಯಾಣಿಕರ ಸೇವೆಗಳಿಗೆ ತೊಂದರೆ ಉಂಟಾಯಿತು.

ಕೆಎಸ್‌ಆರ್‌ಟಿಸಿಯ ಒಟ್ಟು 8,100 ಬಸ್‌ಗಳ ಪೈಕಿ 4,100 ಬಸ್‌ಗಳನ್ನು ಚುನಾವಣಾ ಕೆಲಸಕ್ಕಾಗಿ ನೀಡಿದ್ದು, ಬಿಎಂಟಿಸಿಯಿಂದ ಬಾಡಿಗೆ ಪಡೆದ 350 ಬಸ್‌ಗಳು ಮೇ 10ರಂದು ಇಂಟರ್‌ಸಿಟಿ ರೂಟ್‌ಗಳಲ್ಲಿ ಅಂದರೆ, ಮೈಸೂರು, ಮಂಡ್ಯ, ಮದ್ದೂರು, ತುಮಕೂರು, ಪಾವಗಡ, ಚಿತ್ರದುರ್ಗ, ಹೊಸದುರ್ಗ ಸೇರಿದಂತೆ ಮುಂತಾದ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿವೆ.

“ಬೆಳಗ್ಗೆ ಬಸ್‌ಗಳಿಗೆ ಸಾಕಷ್ಟು ಬೇಡಿಕೆ ಇತ್ತು. ಹೆಚ್ಚಿನ ಪ್ರಯಾಣಿಕರು ಮತ ಚಲಾಯಿಸಲು ತಮ್ಮ ಊರಿಗಳಿಗೆ ತೆರಳಿದ್ದಾರೆ” ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisements

“ಬೆಂಗಳೂರಿನಲ್ಲಿ, ಬಿಎಂಟಿಸಿ ಬೇಡಿಕೆಗೆ ಅನುಗುಣವಾಗಿ ಬಸ್ ವೇಳಾಪಟ್ಟಿಯನ್ನು ನಿಗದಿ ಮಾಡಲಾಗಿತ್ತು. ಮೇ 10ರಂದು ಸಾರ್ವಜನಿಕ ರಜೆ ಇದ್ದ ಕಾರಣ ನಗರದಲ್ಲಿ ಬಸ್‌ಗಳಲ್ಲಿ ಹೆಚ್ಚಿನ ಬೇಡಿಕೆ ಇರಲಿಲ್ಲ” ಎಂದು ಬಿಎಂಟಿಸಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮತದಾನದ ದಿನ ಸುಮಾರು ಶೇ.50ರಷ್ಟು ಕುಸಿದ ಮೆಟ್ರೋ ಪ್ರಯಾಣಿಕರ ಸಂಖ್ಯೆ

“ಮೆಜೆಸ್ಟಿಕ್ ಮತ್ತು ಶಿವಾಜಿನಗರ ಬಸ್ ನಿಲ್ದಾಣಗಳು ಹೆಚ್ಚು ಪ್ರಯಾಣಿಕರು ಮತ್ತು ಬಸ್‌ಗಳಿಲ್ಲದೆ ಖಾಲಿಯಾಗಿದ್ದವು. ಮೇ 9 ಮತ್ತು 10 ರಂದು ಬಿಎಂಟಿಸಿ ಬಸ್ ಸೇವೆಗೆ ತೊಂದರೆಯಾಗಿದೆ. ಪ್ರಯಾಣಿಕರು ಬಸ್ ಪಡೆಯಲು 45 ನಿಮಿಷದಿಂದ ಎರಡು ಗಂಟೆಗಳವರೆಗೆ ಕಾಯಬೇಕಾಯಿತು” ಎಂದು ಪ್ರಯಾಣಿಕರೊಬ್ಬರು ದೂರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X