ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಮಾಜಿ ಸಿಎಂ ವಿಶೇಷ ಅಧಿಕಾರಿ

Date:

Advertisements
  • ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
  • ಪದೇಪದೆ ಲಕ್ಷಾಂತರ ಹಣಕ್ಕೆ ಬೇಡಿಕೆ ಇಟ್ಟ ಆರೋಪಿಗಳು

ಹನಿಟ್ರ್ಯಾಪ್‌ ಜಾಲಕ್ಕೆ ಸಿಲುಕಿ ರಾಜ್ಯದ ಮಾಜಿ ಮುಖ್ಯಮಂತ್ರಿಯೊಬ್ಬರ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ ₹6.8 ಲಕ್ಷ ಕಳೆದುಕೊಂಡಿದ್ದಾರೆ. ಈ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹಣ ಕಳೆದುಕೊಂಡ 58 ವರ್ಷದ ಅಧಿಕಾರಿ ಮೂಲತಃ ಬೆಂಗಳೂರಿನ ಮಲ್ಲೇಶ್ವರಂ ನಿವಾಸಿಯಾಗಿದ್ದು, ಅವರು ಜೂ.12 ರಂದು ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಅತಿಥಿ ಗೃಹದಲ್ಲಿದ್ದರು. ಅಲ್ಲಿ, ಸ್ನಾನ ಮುಗಿಸಿ ಹೊರ ಬಂದಾಗ ಅವರಿಗೆ ವಿಡಿಯೋ ಕಾಲ್ ಬಂದಿದೆ. ಕರೆಗೆ ಅವರು ಉತ್ತರಿಸಿದ್ದು, ಕರೆ ಮಾಡಿದ್ದ ಮಹಿಳೆ ಕರೆಯ ಸಂಭಾಷಣೆ ಮತ್ತು ವಿಡಿಯೋವನನ್ನು ರೆಕಾರ್ಡ್‌ ಮಾಡಿಕೊಂಡಿದ್ದಾಳೆ.

ಮರುದಿನ ಓರ್ವ ಅಪರಿಚಿತ ವ್ಯಕ್ತಿ ಅಧಿಕಾರಿಗೆ ಕರೆ ಮಾಡಿದ್ದಾನೆ. ಆದರೆ, ಅಧಿಕಾರಿ ಕರೆ ಸ್ವೀಕರಿಸಿಲ್ಲ. ಪದೇಪದೆ ಕರೆ ಬಂದ ಕಾರಣ ಕರೆಯನ್ನು ಸ್ವೀಕರಿಸಿದ್ದಾರೆ. ಈ ವೇಳೆ, ಆ ಅಪರಿಚಿತ ವ್ಯಕ್ತಿ ತಾನೂ ಮಹೇಂದ್ರ ಸಿಂಗ್ ರಾಷ್ಟ್ರೀಯ ಸುದ್ದಿ ವಾಹಿನಿಯೊಂದರ ವರದಿಗಾರ ಎಂದು ಹೇಳಿಕೊಂಡಿದ್ದಾನೆ.

Advertisements

ಬಳಿಕ ಓರ್ವ ಮಹಿಳೆ ನಿಮ್ಮ ಬಗ್ಗೆ ದೂರು ನೀಡಿದ್ದಾರೆ. ನೀವು ಮಹಿಳೆಯೊಂದಿಗೆ ವಿಡಿಯೋ ಕಾಲ್‌ನಲ್ಲಿ ಅನುಚಿತವಾಗಿ ವರ್ತಿಸಿದ್ದೀರಿ. ನಿಮ್ಮ ವಿಡಿಯೋ ನಮ್ಮ ಬಳಿ ಇದೆ ಎಂದು ಹೇಳಿದ್ದಾರೆ. ಬಳಿಕ ನಾವು ಕೇಳಿದಷ್ಟು ಹಣ ನೀಡಿ, ಇಲ್ಲದಿದ್ದರೆ, ನಿಮ್ಮ ವಿಡಿಯೋ ಅನ್ನು ಯೂಟ್ಯೂಬ್ ಹಾಗೂ ಫೇಸ್ ಬುಕ್‌ನಲ್ಲಿ ಹರಿಬಿಡುವುದಾಗಿ ಹೆದರಿಸಿದ್ದಾನೆ. ಹಣ ನೀಡಿದರೆ ವಿಡಿಯೋ ಡಿಲಿಟ್‌ ಮಾಡುವುದಾಗಿ ಹೇಳಿದ್ದನು ಎಂದು ಅಧಿಕಾರಿ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿದ್ಯುತ್ ಬಿಲ್ ಜಾಸ್ತಿ ಬಂತೆಂದು ಮೀಟರ್ ರೀಡರ್ ಮೇಲೆ ಹಲ್ಲೆ; ದೂರು ದಾಖಲು

ಬಳಿಕ ಹೆದರಿದ ಅಧಿಕಾರಿ ಮೊದಲಿಗೆ ₹1.5 ಲಕ್ಷ ಹಣ ನೀಡಿದ್ದಾರೆ. ನಂತರ ₹50 ಸಾವಿರ ಆರೋಪಿ ಹೇಳಿದ ಬ್ಯಾಂಕ್ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಿದ್ದಾರೆ. ಬಳಿಕ ಜು.14ರಂದು ಕರೆ ಮಾಡಿ ಮತ್ತೆ ಹೆಚ್ಚಿನ ಮೊತ್ತಕ್ಕೆ ಬೇಡಿಕೆ ಇಟ್ಟು ₹2 ಲಕ್ಷ ಹಾಗೂ ₹2.8 ಲಕ್ಷ ವರ್ಗಾಯಿಸುವಂತೆ ಒತ್ತಾಯಿಸಿದ್ದಾನೆ. ಒಟ್ಟು ₹6.8 ಲಕ್ಷ ಹಣವನ್ನು ಅಧಿಕಾರಿಯಿಂದ ವಂಚಕರು ಸುಲಿಗೆ ಮಾಡಿದ್ದಾರೆ.

ಮತ್ತೆ ಅದೇ ದಿನ ಕರೆ ಮಾಡಿ ₹7.2 ಲಕ್ಷ ನೀಡುವಂತೆ ಕೇಳಿದ್ದಾರೆ. ಇದಕ್ಕೆ ಅಧಿಕಾರಿ ನಗರ ಪೊಲೀಸ್ ಕಮಿಷನರ್‌ ಅವರಿಗೆ ತಿಳಿಸಿ, ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X