ಲೈಫ್ ಟೈಂ ಟ್ಯಾಕ್ಸ್‌ | ಸರ್ಕಾರದ ವಿರುದ್ಧ ಸಿಡಿದೆದ್ದ ಗೂಡ್ಸ್‌ ವಾಹನ ಮಾಲೀಕರು; ಸೆ. 1ರಂದು ಪ್ರತಿಭಟನೆ

Date:

Advertisements

ರಾಜ್ಯ ಸರ್ಕಾರ ಗೂಡ್ಸ್ ವಾಹನಗಳ ತೆರಿಗೆ ಮೊತ್ತವನ್ನು ಅಧಿಕಗೊಳಿಸಿದ್ದು, ಲೈಫ್ ಟೈಂ ಟ್ಯಾಕ್ಸ್‌ ಪಾವತಿಗೆ ಜುಲೈ 28ರಂದು ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿತ್ತು. ಇದೀಗ, ಈ ಕಾಯ್ದೆ ಗೂಡ್ಸ್‌ ವಾಹನ ಮಾಲೀಕರಿಗೆ ಹೊರೆಯಾಗಿ ಪರಿಣಮಿಸಿದ್ದು, ಈ ಕಾಯ್ದೆಯನ್ನು ಕೂಡಲೇ ಹಿಂಪಡೆಯುವಂತೆ ಗೂಡ್ಸ್ ವಾಹನ ಮಾಲೀಕರು ಸೆ. 1ರಂದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ.

ಆ. 31 ರಂದು ಶಾಂತಿನಗರ ರಸ್ತೆಯುದ್ದಕ್ಕೂ 250ಕ್ಕೂ ಹೆಚ್ಚು ಎಂಜಿವಿ (ಮೀಡಿಯಂ ಗೂಡ್ಸ್ ವೆಹಿಕಲ್) ಗೂಡ್ಸ್ ವಾಹನ ನಿಲ್ಲಿಸಲಾಗಿದೆ. ನಿಲ್ದಾಣದ ಬಳಿಯ ಬಿಟಿಎಸ್ ರೋಡ್ ಬ್ಲಾಕ್ ಮಾಡಲಾಗಿದೆ. ಪ್ರತಿಭಟನಾನಿರತರು ಈ ವೇಳೆ ಶಾಂತಿನಗರ ಆರ್​ಟಿಒ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಲಾರಿ ಅಸೋಸಿಯೇಷನ್ ಅಧ್ಯಕ್ಷ ಶಣ್ಮುಗಪ್ಪ, “ಸರ್ಕಾರ ಕೂಡಲೇ ಆದೇಶವನ್ನು ಹಿಂಪಡೆಯದೇ ಇದ್ದರೆ, ಸೆ.1 ರಂದು ಬೆಂಗಳೂರಿನಾದ್ಯಂತ ಎರಡೂವರೆ ಸಾವಿರ ಎಂಜಿವಿ ಗೂಡ್ಸ್‌ ವಾಹನ ನಿಲ್ಲಿಸಿ ಬೃಹತ್ ಪ್ರತಿಭಟನೆ ಮಾಡುತ್ತೇವೆ” ಎಂದು ತಿಳಿಸಿದರು.

Advertisements

“2 ಸಾವಿರದಿಂದ ಲೈಫ್ ಟ್ಯಾಕ್ಸ್‌ 70 ಸಾವಿರ ಮಾಡಿದ್ದಾರೆ. ನಮಗೆ ಈ ಟ್ಯಾಕ್ಸ್‌ ಕಟ್ಟಲು ಆಗಲ್ಲ. ಇದು ನಮ್ಮ ಮೇಲೆ ಹೆಚ್ಚಿನ ಹೊರೆ ಬೀಳುತ್ತದೆ. ಸರ್ಕಾರ ಕಳೆದ ಜುಲೈ 28ರಂದು ಅಧಿಸೂಚನೆ ಹೊರಡಿಸಿದೆ. ಟ್ಯಾಕ್ಸ್‌ ಪಾವತಿಗೆ ಇವತ್ತು ಕಡೆಯ ದಿನ. ರಾಜ್ಯಾದ್ಯಂತ 28 ಸಾವಿರ ಲಾರಿಗಳಿದ್ದು, ಬೆಂಗಳೂರಿನಲ್ಲಿ 13 ಸಾವಿರ ಲಾರಿಗಳಿವೆ” ಎಂದು ಹೇಳಿದರು.

“ಬೇರೆ ರಾಜ್ಯಗಳಲ್ಲಿ ಇಲ್ಲದ ಕಾಯ್ದೆ ನಮ್ಮ ರಾಜ್ಯದಲ್ಲಿ ಏಕೆ ಜಾರಿಗೆ ತಂದಿದ್ದಾರೆ. ಸೆ.1 ರಂದು ರಾಜ್ಯಾದ್ಯಂತ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ. ಇದರಿಂದ ಲಾ ಅಂಡ್ ಆರ್ಡರ್‌ಗೆ ತೊಂದರೆ ಆದರೆ ಅದಕ್ಕೆ ನಾವು ಹೊಣೆಯಲ್ಲ” ಎಂದರು.

ತ್ರೈಮಾಸಿಕ ತೆರಿಗೆ ಪಾವತಿ ಬದಲಾಗಿ ವಾಹನ ನೋಂದಣಿ ವೇಳೆ ಲೈಫ್​ ಟೈಂ (ಏಕ ಕಾಲಿಕ) ಪಾವತಿ ಮಾಡಲು ರಾಜ್ಯ ಸರ್ಕಾರ ಜುಲೈ 28ರಂದು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಆ.1ರಿಂದಲೇ ಲೈಫ್ ಟೈಮ್ ರೋಡ್ ಟ್ಯಾಕ್ಸ್ ಕಾಯ್ದೆ ಜಾರಿಗೊಳಿಸಿದೆ.

ಈ ಸುದ್ದಿ ಓದಿದ್ದೀರಾ? ಡ್ರಗ್ಸ್‌ ಹಾವಳಿ ತಡೆಗಟ್ಟಲು ವಿದ್ಯಾರ್ಥಿಗಳ ಪಡೆ ನಿರ್ಮಾಣ ಮಾಡಿದ ಬೆಂಗಳೂರು ಪೊಲೀಸರು

ಈ ಹಿಂದೆ ಹಳದಿ ಫಲಕದ ಎಲ್​ಜಿವಿ, ಎಂಜಿವಿ ವಾಹನಗಳ ಮಾಲೀಕರು ಮೂರು ತಿಂಗಳಿಗೊಮ್ಮೆ ₹2,000 ಟ್ಯಾಕ್ಸ್ ಕಟ್ಟುತಿದ್ದರು. ಈ ಕಾಯ್ದೆಯನ್ನು ಸರ್ಕಾರ ಬದಲಾವಣೆ ಮಾಡಿದೆ. ಕಳೆದ ಬಜೆಟ್ ಅಧಿವೇಶನದಲ್ಲಿ ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ ತಿದ್ದುಪಡಿ ಮಾಡಲಾಗಿತ್ತು.

ಎರಡು ಮೂರು ಲಾರಿ ಹೊಂದಿರುವ ಮಾಲೀಕರಿಗೆ ಏಕಕಾಲಕ್ಕೆ ಭಾರೀ ಮೊತ್ತದ ತೆರಿಗೆ ಕಟ್ಟುವುದು ಕಷ್ಟವಾಗಿದೆ. ಈ ನೂತನ ಕಾಯ್ದೆಯಿಂದ ಗೂಡ್ಸ್‌ ವಾಹನ ಮಾಲೀಕರು ಕಂಗಾಲಾಗಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X