ಭಾರತದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತಕ್ಕೆ 1.5 ಲಕ್ಷಕ್ಕೂ ಹೆಚ್ಚು ಮಂದಿ ಸಾವು: ಎಂ ಎ ಸಲೀಂ

Date:

Advertisements

“ಭಾರತದಲ್ಲಿ ಪ್ರತಿ ವರ್ಷ 1.5 ಲಕ್ಷಕ್ಕೂ ಹೆಚ್ಚು ಜನರು ರಸ್ತೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆರು ಲಕ್ಷಕ್ಕೂ ಹೆಚ್ಚು ಜನರು ಗಾಯಗೊಂಡು ಜೀವನಪರ್ಯಂತ ಅಂಗವಿಕಲರಾಗಿದ್ದಾರೆ” ಎಂದು ಸಿಐಡಿ ಡಿಜಿಪಿ ಎಂ ಎ ಸಲೀಂ ಹೇಳಿದರು.

ರಸ್ತೆ ಅಪಘಾತಗಳ ಕುರಿತು ಜಾಗೃತಿ ಮೂಡಿಸಲು ಬೆಂಗಳೂರಿನ ಸರ್ಜಿಕಲ್ ಸೊಸೈಟಿಯ 50ನೇ ವಾರ್ಷಿಕೋತ್ಸವದ ಅಂಗವಾಗಿ ವಿಧಾನಸೌಧದಿಂದ ನಂದಿಬೆಟ್ಟದವರೆಗೆ ರ‍್ಯಾಲಿಯನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ವಾಹನ ಚಾಲನೆ ಮಾಡುವಾಗ ಹೆಲ್ಮೆಟ್ ಅಥವಾ ಸೀಟ್ ಬೆಲ್ಟ್ ಧರಿಸದ ಕಾರಣ ಹಾಗೂ ಅತಿ ವೇಗದ ಚಾಲನೆ ಅಥವಾ ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸುವುದರಿಂದ ಅನೇಕ ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಾರೆ. ವಾಹನ ಚಲಾಯಿಸುವಾಗ ಹೆಚ್ಚಿನ ಕಾಳಜಿ ವಹಿಸಬೇಕು. ರಸ್ತೆ ಅಪಘಾತಗಳಿಂದ ವಿಕಲಚೇತನರು ಸಾಮಾನ್ಯ ಜೀವನ ನಡೆಸುವುದು ಸುಲಭವಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಯುವತಿಗೆ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಅಪ್‌ಲೋಡ್; ಬಂಧನ

Advertisements

ಬೆಂಗಳೂರಿನ ಸರ್ಜಿಕಲ್ ಸೊಸೈಟಿಯ ಡಾ.ವೆಂಕಟೇಶ್ ಮಾತನಾಡಿ, “ಸಾರ್ವಜನಿಕರು ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸಿದರೆ ರಸ್ತೆ ಅಪಘಾತಗಳು ಸಂಭವಿಸುವುದಿಲ್ಲ. ಪ್ರತಿಯೊಂದು ಜೀವವೂ ಮುಖ್ಯವಾಗಿದ್ದು, ಜನರು ಬೇಜವಾಬ್ದಾರಿಯಿಂದ ವಾಹನ ಚಲಾಯಿಸಿ ತಮ್ಮ ಬದುಕಿನೊಂದಿಗೆ ಆಟವಾಡುತ್ತಿದ್ದಾರೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X