ಮತದಾನ ಮಾಡಿ ಉಚಿತ ತಿಂಡಿ ತಿನ್ನಿ ಎಂದ ನಿಸರ್ಗ ಗ್ರ್ಯಾಂಡ್‌ ಹೋಟೆಲ್

Date:

Advertisements
  • ಮತದಾನ ನಮ್ಮ ಹಕ್ಕು, ಅದನ್ನು ಚಲಾಯಿಸಿ ಸಮೃದ್ಧ ಭಾರತ ನಿರ್ಮಿಸಿ
  • ಮಯೂರ ಹೋಟೆಲ್‌ಗಳಲ್ಲಿ ಉಳಿದುಕೊಳ್ಳಲು ಶೇಕಡಾ 50 ರಷ್ಟು ರಿಯಾಯಿತಿ

ರಾಜ್ಯದೆಲ್ಲೆಡೆ ಕರ್ನಾಟಕ ವಿಧಾನಸಭಾ ಚುನಾವಣೆಯ ಬಿಸಿ ಹೆಚ್ಚಾಗಿದ್ದು, ಮೇ 10ರಂದು ಮತದಾನ ನಡೆಯಲಿದೆ. ಮತದಾನದ ಜಾಗೃತಿ ಮೂಡಿಸುವ ಸಲುವಾಗಿ ಇದೀಗ ಬೆಂಗಳೂರಿನಲ್ಲಿರುವ ನಿಸರ್ಗ ಗ್ರ್ಯಾಂಡ್‌ ಹೋಟೆಲ್ ಮತದಾನ ಮಾಡಿದವರಿಗೆ ಉಚಿತ ತಿಂಡಿ ಮತ್ತು ಸಿನಿಮಾ ಟಿಕೆಟ್‌ ನೀಡುವುದಾಗಿ ಭಿತ್ತಿಪತ್ರ ಹಂಚಿಕೊಂಡಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಹಾಗೂ ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್ ಅವರು ಮತದಾನದ ಅರಿವು ಮೂಡಿಸುವ ಸಲುವಾಗಿ ಜಾಥಾ, ಬೀದಿ ನಾಟಕ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು(ಕೆಎಸ್‌ಟಿಡಿಸಿ) ಕೂಡಾ ತಮ್ಮ ಉಸ್ತುವಾರಿಯಲ್ಲಿರುವ ಮಯೂರ ಹೋಟೆಲ್‌ಗಳಲ್ಲಿ ಉಳಿದುಕೊಳ್ಳಲು ಶೇಕಡಾ 50 ರಷ್ಟು ರಿಯಾಯಿತಿಯನ್ನ ಘೋಷಿಸಿದೆ.

ಮತದಾನದ ಉತ್ತೇಜನಕ್ಕಾಗಿ ನಿಸರ್ಗ ಗ್ರ್ಯಾಂಡ್‌ ಈ ಮಹತ್ವದ ಹೆಜ್ಜೆ ಇಟ್ಟಿದ್ದು, ಮತ ಹಾಕಿದ್ದೇವೆ ಎಂಬುದನ್ನು ದೃಢಪಡಿಸಲು ಮತದಾನ ಮಾಡಿದುದರ ಗುರುತು (ಶಾಹಿ) ತೋರಿಸಿದವರಿಗೆ ಬೆಣ್ಣೆ ಖಾಲಿ ದೋಸೆ, ಮೈಸೂರು ಪಾಕ್‌ ಮತ್ತು ತಂಪು ಪಾನಕವನ್ನು ಉಚಿತವಾಗಿ ನೀಡಲಾಗುವುದು ಎಂದು ಹೇಳಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅರ್ಧ ಗಂಟೆ ಸುರಿದ ಮಳೆಗೆ ಕೆರೆಯಂತಾದ ರಸ್ತೆಗಳು

ಮೊದಲ 100 ಹೊಸ ಯುವ ಮತದಾರರಿಗೆ ಉಚಿತ ಸಿನಿಮಾ ಟಿಕೆಟ್‌ಗಳನ್ನು ನೀಡುತ್ತಿದೆ.​ ಇದು ಸಾಮಾಜಿಕ ಕಳಕಳಿ ಉಳ್ಳ ರಾಜಕೀಯೇತರ ಕಾರ್ಯಕ್ರಮವಾಗಿದ್ದು, ಮತದಾನ ನಮ್ಮ ಹಕ್ಕು, ಅದನ್ನು ಚಲಾಯಿಸಿ ಸಮೃದ್ಧ ಭಾರತ ನಿರ್ಮಿಸಿ ಎಂದು ಭಿತ್ತಿಪತ್ರದಲ್ಲಿ ಬರೆಯಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X