ನಮ್ಮ ಮೆಟ್ರೋ | ನೇರಳೆ ಮಾರ್ಗದಲ್ಲಿ ಜು.10ರಿಂದ ಆ.9ರವರೆಗೆ ನಿತ್ಯ 2 ಗಂಟೆ ಸಂಚಾರ ಸ್ಥಗಿತ

Date:

Advertisements
  • ಬೆಳಗ್ಗೆ 7 ಗಂಟೆಯ ನಂತರ ಎಂದಿನಂತೆ ರೈಲು ಸಂಚಾರ ಆರಂಭ
  • ನಮ್ಮ ಮೆಟ್ರೋ ಪ್ರಯಾಣಿಕರು ಆಗಿರುವ ಬದಲಾವಣೆ ಗಮನಿಸಿ

ನೇರಳೆ ಮಾರ್ಗದಲ್ಲಿನ ಬೈಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣ ಸಂಪರ್ಕವನ್ನು ಕಲ್ಪಿಸಲು ಸಿಗ್ನಲಿಂಗ್ ಹಾಗೂ ಇತರ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆ, ಜುಲೈ 10 ರಿಂದ ಆಗಸ್ಟ್‌ 9ರವರೆಗೆ ಬೆಳಗ್ಗೆ 5 ಗಂಟೆಯಿಂದ 7 ಗಂಟೆವರೆಗೆ ಮೆಟ್ರೋ ರೈಲು ಸೇವೆ ಸ್ಥಗಿತವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಆರ್‌ಸಿಎಲ್‌, “ಬೈಯಪ್ಪನಹಳ್ಳಿ ಮತ್ತು ಎಸ್.ವಿ ರಸ್ತೆ ಹಾಗೂ ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳ ನಡುವೆಯ ರೈಲು ಸಂಚಾರ ಸ್ಥಗಿತವಾಗಲಿದೆ” ಎಂದು ಹೇಳಿದೆ.

“ಸ್ವಾಮಿ ವಿವೇಕಾನಂದ ರಸ್ತೆ (ಬೈಯಪ್ಪನಹಳ್ಳಿ ನಿಲ್ದಾಣದ ಮೊದಲು ಒಂದು ನಿಲ್ದಾಣ) ಮತ್ತು ಕೆಂಗೇರಿ ನಿಲ್ದಾಣಗಳ ನಡುವಿನ ರೈಲು ಸೇವೆ ಬೆಳಗ್ಗೆ 5 ಗಂಟೆಯಿಂದ 7 ಗಂಟೆಯವರೆಗೆ ಸ್ಥಗಿತವಾಗಲಿದೆ. ಬೆಳಗ್ಗೆ 7 ಗಂಟೆಯ ನಂತರ, ಬೈಯಪ್ಪನಹಳ್ಳಿ ಮತ್ತು ಕೆಂಗೇರಿ ಹಾಗೂ ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ) ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆಗಳು ಎಂದಿನಂತೆ ರಾತ್ರಿ 11 ಗಂಟೆಯವರೆಗೆ ಇರಲಿದೆ” ಎಂದು ತಿಳಿಸಿದೆ.

Advertisements

“ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ನಮ್ಮ ಮೆಟ್ರೋ ಪ್ರಯಾಣಿಕರು ಈಗ ಆಗಿರುವ ಬದಲಾವಣೆಯನ್ನು ಗಮನಿಸಬೇಕು” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಮುಂದಿನ ಐದು ದಿನಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಹವಾಮಾನ ಇಲಾಖೆ

ಬಜೆಟ್ ; ನಮ್ಮ ಮೆಟ್ರೋ ವಿಸ್ತರಣೆಗೆ ₹31,328 ಕೋಟಿ ಅನುದಾನ

2023-24ನೇ ಸಾಲಿನ ಬಜೆಟ್‌ ಅನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶುಕ್ರವಾರ ಮಂಡಿಸಿದ್ದಾರೆ. ಬೆಂಗಳೂರಿನ ನಮ್ಮ ಮೆಟ್ರೋ ವಿಸ್ತರಣೆಗೆ ₹31,328 ಕೋಟಿ ಅನುದಾನ ನೀಡಿದ್ದು, ಎರಡು ಪ್ರತ್ಯೇಕ ಮೆಟ್ರೋ ರೈಲು ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.

“ಮೆಟ್ರೋ ಮೂರನೇ ಹಂತದ ಯೋಜನೆಯಡಿ ಕೆಂಪಾಪುರದಿಂದ ಜೆಪಿ ನಗರ 4ನೇ ಹಂತದವರೆಗೆ ಮತ್ತು ಹೊಸಹಳ್ಳಿಯಿಂದ ಕಡಬಗೆರೆವರೆಗಿನ ಪಶ್ಚಿಮ ಒಆರ್‌ಆರ್ ಮಾರ್ಗ ನಿರ್ಮಾಣವಾಗಲಿದೆ. ಇದಕ್ಕೆ ಅಂದಾಜು ₹16,328 ಕೋಟಿ ವೆಚ್ಚವಾಗಲಿದೆ. ಒಟ್ಟು 45 ಕಿಮೀ ಉದ್ದದ ಮೆಟ್ರೋ ರೈಲು ಯೋಜನೆಯ ವಿಸ್ತೃತ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ” ಎಂದರು.

“ಅಂದಾಜು ₹15,000 ಕೋಟಿ ವೆಚ್ಚದಲ್ಲಿ ಹೆಬ್ಬಾಳದಿಂದ ಸರ್ಜಾಪುರದವರೆಗೆ 37 ಕಿ.ಮೀ ಉದ್ದದ ಹೊಸ ಮೆಟ್ರೊ ಮಾರ್ಗ ನಿರ್ಮಾಣ ಮಾಡುವ ಪ್ರಸ್ತಾವನೆಯನ್ನು ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಪ್ರಸಕ್ತ ವರ್ಷ ಬೈಯ್ಯಪ್ಪನಹಳ್ಳಿ-ಕೃಷ್ಣರಾಜಪುರ, ಕೆಂಗೇರಿ-ಚಲ್ಲಘಟ್ಟ, ನಾಗಸಂದ್-ಮಾದವಾರ ಹಾಗೂ ಆರ್‌ವಿ ರಸ್ತೆ-ಬೊಮ್ಮಸಂದ್ರದವರೆಗೆ ಒಟ್ಟು 27 ಕಿಮೀ ಉದ್ದದ ಮೆಟ್ರೊ ಮಾರ್ಗ ವಿಸ್ತರಣೆಯಾಗಲಿದೆ” ಎಂದು ತಿಳಿಸಿದರು.

“ಮುಂದಿನ ಮೂರು ವರ್ಷಗಳಲ್ಲಿ 70 ಕಿ.ಮೀ ಉದ್ದದ ಮೆಟ್ರೋ ಸಂಪರ್ಕ ಜಾಲವನ್ನು 176 ಕಿ.ಮೀಗೆ ವಿಸ್ತರಿಸುವ ಗುರಿ ಹೊಂದಲಾಗಿದೆ. ಏರ್‌ಪೋರ್ಟ್‌ ಲೈನ್ ಕಾಮಗಾರಿ 2026ರ ವೇಳೆಗೆ ಮುಗಿಯುವ ನಿರೀಕ್ಷೆಯಿದೆ. ಈ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ನಡೆಸುವಂತೆ ನೋಡಿಕೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X