500 ಕೋಟಿಗೂ ಹೆಚ್ಚು ಆಸ್ತಿ ಹೊಂದಿದ್ದ ತಹಶೀಲ್ದಾರ್ ಅಜಿತ್ ರೈ 7 ದಿನ ಪೊಲೀಸ್ ವಶಕ್ಕೆ

Date:

Advertisements

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೆ ಆರ್ ಪುರದ ಹಿಂದಿನ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಲೋಕಾಯುಕ್ತ ಪೊಲೀಸರು ಬುಧವಾರ ಬೆಳಗ್ಗೆ ಅಜಿತ್ ರೈ ಅವರ ಮನೆ ಹಾಗೂ ಇತರ ಹತ್ತು ಸ್ಥಳಗಳ ಮೇಲೆ ದಾಳಿ ಮಾಡಿ, ಶೋಧ ಕಾರ್ಯ ನಡೆಸಿದ್ದರು. ಈ ಶೋಧ ಕಾರ್ಯ ಗುರುವಾರ ತಡ ರಾತ್ರಿಯವರೆಗೂ ನಡೆದಿತ್ತು.

ತನಿಖೆ ವೇಳೆ ಆರೋಪಿ ಅಜಿತ್ ರೈ ₹500 ಕೋಟಿಗೂ ಹೆಚ್ಚು ಮೌಲ್ಯದ ಬೇನಾಮಿ ಆಸ್ತಿಯನ್ನು ಹೊಂದಿರುವುದು ತಿಳಿದುಬಂದಿತ್ತು. ಬಳಿಕ, ಅಜಿತ್ ರೈ ಅವರನ್ನು ಗುರುವಾರ ಲೋಕಾಯುಕ್ತ ತನಿಖಾ ತಂಡ ಬಂಧನ ಮಾಡಿತ್ತು.

Advertisements

ಶುಕ್ರವಾರ ಆರೋಪಿಯನ್ನು ಸಿಟಿ ಸಿವಿಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಬಳಿಕ ಲೋಕಾಯುಕ್ತ ಪೊಲೀಸರು ನ್ಯಾಯಲಯದ ಮುಂದೆ ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು.

ಲೋಕಾಯುಕ್ತ ಪೊಲೀಸರ ಮನವಿಗೆ ಒಪ್ಪಿಗೆ ಸೂಚಿಸಿದ ನ್ಯಾಯಾಧೀಶರು ಏಳು ದಿನಗಳ ವಿಚಾರಣೆಗೆ ಅವಕಾಶ ನೀಡಿ ಆದೇಶ ಹೊಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X