ಅರ್ಧ ಗಂಟೆ ಸುರಿದ ಮಳೆಗೆ ಕೆರೆಯಂತಾದ ಬೆಂಗಳೂರಿನ ರಸ್ತೆಗಳು

Date:

Advertisements
  • ಮುಂದಿನ ನಾಲ್ಕು ದಿನ ಮಳೆ ಮುಂದುವರಿಯುವ ಸಾಧ್ಯತೆ
  • ಮಳೆಯಿಂದಾಗಿ ಬೆಂಗಳೂರಿನಲ್ಲಿ ಮನೆಗಳಿಗೆ ನುಗ್ಗಿದ ಮಳೆ ನೀರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಬಿಸಿಲಿನ ವಾತಾವರಣ ಇತ್ತು. ಸಂಜೆಯಾಗುತ್ತಿದ್ದಂತೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ನಗರದ ಹಲವೆಡೆ ಜೋರು ಮಳೆ ಸುರಿದಿದ್ದು, ಬಹುತೇಕ ಅಂಡರ್‌ಪಾಸ್‌ಗಳು ರಸ್ತೆಗಳು ನೀರಿನಿಂದ ತುಂಬಿದ್ದವು.

ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಜನ ತತ್ತರಿಸಿದ್ದು ಕೆರೆಯಂತಾದ ರಸ್ತೆಗಳಲ್ಲಿ ವಾಹನ ಚಲಾಯಿಸಲು ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಸಾಯಂಕಾಲದ ವೇಳೆ ಮಳೆಯಿಂದ ತಪ್ಪಿಸಿಕೊಳ್ಳಲು ಜನರು ಅಂಗಡಿಗಳ ಬಳಿ ನಿಂತು ಮಳೆಯಿಂದ ರಕ್ಷಣೆ ಪಡೆದರು. ಇನ್ನು ವಾಹನ ಸವಾರರು ಮಳೆಯಿಂದ ತಪ್ಪಿಸಿಕೊಳ್ಳಲು ಅಂಡರ್‌ಪಾಸ್‌ಗಳಲ್ಲಿ ಆಸರೆ ಪಡೆದಿದ್ದು ಕಂಡುಬಂದಿತು.

ವಿಲ್ಸನ್ ಗಾರ್ಡಾನ್, ಶಾಂತಿ ನಗರ, ಕೋರಮಂಗಲ, ಲಾಲ್ ಬಾಗ್, ಮಾರತಹಳ್ಳಿ, ಆಡುಗೋಡಿ, ರಾಜಾಜಿನಗರ, ಪ್ರಕಾಶನಗರ, ಮಲ್ಲೇಶ್ವರಂ, ವಿಜಯನಗರ, ಗೋವಿಂದರಾಜನಗರ ಸೇರಿದಂತೆ ನಗರದ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ. ಮಳೆಯಿಂದಾಗಿ ಬೆಂಗಳೂರಿನಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾದವು.

Advertisements

ಅಂಡರ್‌ಪಾಸ್‌ ಸಂಪೂರ್ಣ ಜಲಾವೃತ

ಕಳೆದ ಕೆಲವು ದಿನಗಳ ಹಿಂದೆ ಕೆ ಆರ್‌ ಸರ್ಕಲ್ ಅಂಡರ್‌ಪಾಸ್‌ನ ನೀರಿನಲ್ಲಿ ಮುಳುಗಿ ಭಾನುರೇಖಾ ಎಂಬ ಯುವತಿ ಸಾವನ್ನಪ್ಪಿದ್ದಳು. ಈ ಘಟನೆ ನಡೆದ ನಂತರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದಲ್ಲಿರುವ ಅಂಡರ್‌ಪಾಸ್‌ಗಳಲ್ಲಿ ಅಪಾಯ ತಡೆಗೆ ಸರ್ವೇ ನಡೆಸಿತ್ತು. ಕ್ರಮ ಕೈಗೊಳ್ಳುವುದಾಗಿ ತಿಳಿಸಿತ್ತು. ಇದೀಗ ನಿನ್ನೆ ರಾತ್ರಿ (ಸೋಮವಾರ) ಸುರಿದ ಅರ್ಧ ಗಂಟೆಯ ಮಳೆಗೆ ಕಾಡುಬೀಸನಹಳ್ಳಿ ಅಂಡರ್‌ಪಾಸ್‌ ಸಂಪೂರ್ಣ ನೀರಿನಿಂದ ತುಂಬಿ ಹೋಗಿತ್ತು. ಈ ವೇಳೆ, ವಾಹನಗಳು ಅಂಡರ್‌ಪಾಸ್‌ಗೆ ತೆರಳದಂತೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹಲವಾರು ವಾಹನಗಳು ಅಂಡರ್‌ಪಾಸ್‌ಗೆ ತೆರಳಿ ವಾಪಸ್‌ ಅಂಡರ್‌ಪಾಸ್‌ನಿಂದ ತಿರುಗಿ ಬರಲು ಹರಸಾಹಸ ಪಡುವಂತಾಯಿತು.

ಮುಂದಿನ ನಾಲ್ಕು ದಿನ ಮಳೆ

ಈಗಾಗಲೇ ಕೇರಳಕ್ಕೆ ಮಾನ್ಸೂನ್ ಮಾರುತಗಳ ಆಗಮನವಾಗಿದ್ದು, ರಾಜ್ಯದಲ್ಲಿ ಕೆಲವೆಡೆ ಜೋರು ಮಳೆಯಾಗುತ್ತಿದೆ. ಇನ್ನೂ ಕೆಲವೆಡೆ ಮಳೆಯ ಆಗಮನಕ್ಕಾಗಿ ಜನರು ಕಾಯುತ್ತಿದ್ದಾರೆ. ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿರುಗಾಳಿ ಎದ್ದಿರುವ ಕಾರಣ ಸಮುದ್ರಕ್ಕೆ ಇಳಿಯದಂತೆ ಕರಾವಳಿ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದ್ದು ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

“ಅರಬ್ಬಿ ಸಮುದ್ರದಲ್ಲಿ ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಹಿನ್ನೆಲೆ ರಾಜ್ಯದ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕೆಲವೆಡೆ ಭಾರೀ ಮಳೆಯಾಗಲಿದೆ” ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಡಿ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X