ಎಟಿಎಂ ಬ್ಯಾಟರಿ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ

Date:

Advertisements
  • ಬ್ಯಾಟರಿಗಳನ್ನು ₹1,000 ರಿಂದ ₹2,000 ವರೆಗಿನ ಮೊತ್ತಕ್ಕೆ ವಿತರಕರಿಗೆ ಮಾರಾಟ
  • ಕರ್ಣಾಟಕ ಬ್ಯಾಂಕ್‌ನ ಎಟಿಎಂ ಕಿಯೋಸ್ಕ್‌ನಿಂದ ಮೂರು ಬ್ಯಾಟರಿಗಳ ಕಳ್ಳತನ

ಎಟಿಎಂ ಕಿಯೋಸ್ಕ್‌ಗಳಲ್ಲಿ ಅಳವಡಿಸಲಾಗಿದ್ದ ಪವರ್ ಬ್ಯಾಟರಿಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಇಬ್ಬರನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.

ವಿನೋಭಾ ನಗರ(ಕೆಜಿ ಹಳ್ಳಿ)ದ ನಿವಾಸಿ 33 ವರ್ಷದ ರಫೀಕ್ ಪಾಷಾ ಮತ್ತು ಡಿಜೆ ಹಳ್ಳಿಯ 23 ವರ್ಷದ ಮೊಹಮ್ಮದ್ ಮುಬಾರಕ್ ಇಬ್ಬರು ಬಂಧಿತರು.

ಬಂಧಿತರು ಹಗಲಿನಲ್ಲಿ ಭದ್ರತಾ ಸಿಬ್ಬಂದಿ ಇಲ್ಲದ ಎಟಿಎಂ ಬೂತ್‌ಗಳನ್ನು ಗುರಿಯಾಗಿಸಿ ಬ್ಯಾಟರಿಗಳನ್ನು ಕಳ್ಳತನ ಮಾಡುತ್ತಾರೆ. ಮೇ 1ರಂದು ಯಲಹಂಕ ಸಮೀಪದ ಮಾರುತಿನಗರದಲ್ಲಿರುವ ಕರ್ಣಾಟಕ ಬ್ಯಾಂಕ್‌ನ ಎಟಿಎಂ ಕಿಯೋಸ್ಕ್‌ನಿಂದ ಮೂರು ಬ್ಯಾಟರಿಗಳನ್ನು ರಫೀಕ್ ಪಾಷಾ ಮತ್ತು ಅವನ ಸಹಚರ ಮೊಹಮ್ಮದ್ ಮುಬಾರಕ್ ಕಳವು ಮಾಡಿದ್ದರು.

Advertisements

ಕಿಯೋಸ್ಕ್ ಅನ್ನು ನಿರ್ವಹಿಸುವ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಚಂದ್ರಕಾಂತ ಹೂಗಾರ ಮೇ 3ರಂದು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆ, ಮೇ 4 ರಂದು ಪೊಲೀಸ್ ಇನ್ಸ್‌ಪೆಕ್ಟರ್ ವಿ ಬಾಲಾಜಿ ನೇತೃತ್ವದ ಗುಂಪು ಅವರನ್ನು ಬಂಧಿಸಿ ಅವರಿಂದ ಆರು ಬ್ಯಾಟರಿಗಳನ್ನು ವಶಪಡಿಸಿಕೊಂಡಿದ್ದರು.

ವಿಚಾರಣೆ ವೇಳೆ, ಬಂಧಿತರು ತಾವು ಮಾರುತಿ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕಿಯೋಸ್ಕ್‌ನಿಂದ ಮೂರು ಬ್ಯಾಟರಿಗಳನ್ನು ಕದ್ದಿರುವುದಾಗಿ ಇಬ್ಬರೂ ಒಪ್ಪಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮತಗಟ್ಟೆಯಲ್ಲೆ ಕುಳಿತು ಕರಪತ್ರ ಹಂಚುತ್ತಿರುವ ಬಿಜೆಪಿ ಕಾರ್ಯಕರ್ತರು: ಎಎಪಿ ಆರೋಪ

ಮೇ 4 ರಂದು ಎಸ್‌ಬಿಐಗಾಗಿ ಎಟಿಎಂಗಳನ್ನು ನಿರ್ವಹಿಸುವ ಮತ್ತೊಂದು ಸಂಸ್ಥೆಗೆ ಪೊಲೀಸರು ಎಚ್ಚರಿಸಿದ್ದಾರೆ. ಸಂಸ್ಥೆಯ ಉದ್ಯೋಗಿ ಉಮಾ ಮಹೇಶ ಅವರು ನೀಡಿದ ದೂರಿನ ಆಧಾರದ ಮೇಲೆ ಅವರು ಮತ್ತೊಂದು ಪ್ರಕರಣವನ್ನು ದಾಖಲಿಸಲಾಗಿದೆ.

ಬ್ಯಾಟರಿಗಳನ್ನು ಸ್ಕ್ರ್ಯಾಪ್ ಅಥವಾ ಬ್ಯಾಟರಿ ವಿತರಕರಿಗೆ ₹1,000 ರಿಂದ ₹2,000 ವರೆಗಿನ ಮೊತ್ತಕ್ಕೆ ಮಾರಾಟ ಮಾಡುತ್ತಾರೆ. ಬಂಧಿತ ಇಬ್ಬರು ವ್ಯಕ್ತಿಗಳು ಈ ಹಿಂದೆಯೂ ಬಂಧಿತರಾಗಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X