ಸಂಚಾರ ನಿಯಮ ಉಲ್ಲಂಘನೆ: ಮತ್ತೆ ಶೇ.50ರಷ್ಟು ರಿಯಾಯಿತಿ, ಸೆಪ್ಟೆಂಬರ್ 9ರವರೆಗೆ ಅವಕಾಶ

Date:

Advertisements

ಸಂಚಾರ ನಿಯಮ ಉಲ್ಲಂಘಿಸಿ ದಂಡ ಕಟ್ಟದೇ ಇರುವವರು, ದಂಡ ಪಾವತಿಸಲು ಶೇ.50ರಷ್ಟು ರಿಯಾಯಿತಿಯನ್ನು ರಾಜ್ಯ ಸರ್ಕಾರ ಮತ್ತೆ ಘೋಷಿಸಿದೆ. ಈ ಹಿಂದೆಯೂ ಎರಡು ಬಾರಿ ರಿಯಾಯಿತಿ ನೀಡಿ, ಭಾರೀ ಮೊತ್ತದ ದಂಡ ವಸೂಲಿ ಮಾಡಿದ್ದ ಸರ್ಕಾರ, ಇದೀಗ ಮತ್ತೆ ರಿಯಾಯಿತಿ ಘೋಷಿಸಿದೆ.

2023ರ ಫೆಬ್ರವರಿ 11ನೇ ತಾರೀಖಿಗಿಂತ ಹಿಂದೆ ಸಂಚಾರ ನಿಯಮವನ್ನು ಉಲ್ಲಂಘಿಸಿದ್ದು, ಇನ್ನೂ ದಂಡ ಪಾವತಿಸದೇ ಇರುವವರಿಗೆ ಈ ರಿಯಾಯಿತಿ ಅನ್ವಯವಾಗಲಿದೆ. ಫೆಬ್ರವರಿ 12ರ ಬಳಿಕದ ಉಲ್ಲಂಘನೆಗಳಿಗೆ ರಿಯಾಯಿತಿ ಅನ್ವಯವಾಗುವುದಿಲ್ಲ ಎಂದೂ ಆದೇಶದಲ್ಲಿ ತಿಳಿಸಿದೆ.

ಈ ವರ್ಷದ ಸೆಪ್ಟೆಂಬರ್ 9ರವರೆಗೆ ರಿಯಾಯಿತಿ ದರದಲ್ಲಿ ದಂಡ ಪಾವತಿಸಲು ಅವಕಾಶವಿದೆ ಎಂದು ಸಾರಿಗೆ ಇಲಾಖೆ ಹೇಳಿದೆ.

Advertisements

ಈ ಹಿಂದೆ, 2023ರ ಜನವರಿ-ಫೆಬ್ರವರಿಯಲ್ಲಿ ದಿನಗಳ ಕಾಲ ಶೇ.50ರ ರಿಯಾಯಿತಿಯಲ್ಲಿ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು. ನಂತರ ಮಾರ್ಚ್ 4ರಿಂದ 15 ದಿನಗಳ ಕಾಲಾವಕಾಶ ನೀಡಿತ್ತು. ಆಗ 120 ಕೋಟಿ ರೂ. ದಂಡ ವಸೂಲಿಯಾಗಿತ್ತು ಎಂದು ಅಂಕಿಅಂಶಗಳು ಹೇಳಿದ್ದವು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X