ಬೇಸಿಗೆಯ ಬೇಗೆಯ ನಡುವೆ ಬೆಂಗಳೂರಿನಲ್ಲಿ ನೀರಿನ ಕೊರತೆ!

Date:

Advertisements
  • ಸಾರ್ವಜನಿಕರಿಗೆ ನೀರಿನ ಕೊರತೆ ಮತ್ತು ಸರಬರಾಜಿನ ಬಗ್ಗೆ ಮಾಹಿತಿ ನೀಡಬೇಕು
  • ಖಾಸಗಿ ಟ್ಯಾಂಕರ್‌ಗಳೊಂದಿಗೆ ಶಾಮೀಲಾಗಿ ವ್ಯಾಪಾರ ಮಾಡುತ್ತಿರುವ ಅಧಿಕಾರಿಗಳು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೇಸಿಗೆಯ ತಾಪಮಾನ ಹೆಚ್ಚಾಗಿದ್ದು, ಜತೆಗೆ ನೀರಿನ ಬೇಡಿಕೆಯೂ ಹೆಚ್ಚಾಗಿದೆ. ಆದರೆ, ನಗರದ ಕೆಲವು ಪ್ರದೇಶಗಳಿಗೆ ನೀರಿನ ಪೂರೈಕೆಯಲ್ಲಿ ಕೊರತೆ ಉಂಟಾಗುತ್ತಿದೆ ಎಂದು ದೂರುಗಳು ದಾಖಲಾಗುತ್ತಿವೆ.

ವಿದ್ಯಾಮಾನ್ಯನಗರ, ಆಂದ್ರಹಳ್ಳಿ, ಕಮ್ಮನಹಳ್ಳಿ ಮುಂತಾದ ಪ್ರದೇಶಗಳಲ್ಲಿ ನೀರಿನ ಕೊರತೆ ಎದುರಾಗಿದೆ. ಅದರಲ್ಲಿಯೂ ಬಾಣಸವಾಡಿಯ ಒಎಂಬಿಆರ್‌ ಲೇಔಟ್‌ ನಿವಾಸಿಗಳು ಒಂದು ತಿಂಗಳಿನಿಂದ ನಿತ್ಯ ನೀರಿನ ಕೊರತೆಯಿಂದ ಪರದಾಡುತ್ತಿದ್ದಾರೆ.

“ಈ ಹಿಂದೆ ನಮ್ಮ ಏರಿಯಾದಲ್ಲಿ ವಾರಕ್ಕೆ ಮೂರು ಬಾರಿ ನೀರು ಬರುತ್ತಿತ್ತು. ಕಳೆದ ಒಂದು ತಿಂಗಳಿನಿಂದ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ. ಸತತ 10 ದಿನಗಳಿಂದ ಒಎಂಬಿಆರ್ ಲೇಔಟ್‌ಗೆ ನೀರು ಬಿಟ್ಟಿಲ್ಲ. ಈ ಪ್ರದೇಶದಲ್ಲಿ ಶೂನ್ಯ ನೀರಿನ ಪೂರೈಕೆಯನ್ನು ಹೊಂದಿದ್ದೇವೆ. ಕೆಲವೊಮ್ಮೆ ನೀರನ್ನು ಕಡಿಮೆ ಅವಧಿಗೆ ಮತ್ತು ಕಡಿಮೆ ಒತ್ತಡದಲ್ಲಿ ಸರಬರಾಜು ಮಾಡಲಾಗುತ್ತದೆ” ಎಂದು ಒಎಂಬಿಆರ್ ಲೇಔಟ್ ನಿವಾಸಿ ಬೋಬಿ ಜೋಸೆಫ್ ತಿಳಿಸಿದರು.

Advertisements

“ನೀರು ಮೂಲಭೂತ ಅವಶ್ಯಕತೆಯಾಗಿದೆ. ನೀರು ಸರಬರಾಜು ಬಗ್ಗೆ ಅಧಿಕಾರಿಗಳು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಪ್ರತಿ ಬಾರಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್ಎಸ್‌ಬಿ) ಅಧಿಕಾರಿಗಳಿಗೆ ದೂರು ನೀಡಿದಾಗ, ಅವರು ನಮಗೆ ಕೆಲಸಗಾರರು ರಜೆಯಲ್ಲಿದ್ದಾರೆ ಎಂಬ ಸಣ್ಣ ಕಾರಣಗಳನ್ನು ನೀಡುತ್ತಾರೆ. ನೀರಿನ ಕೊರತೆ ಇದೆಯೇ ಎಂಬುದು ನಮಗೂ ಗೊತ್ತಿಲ್ಲ. ಈ ಬಗ್ಗೆ ಬಿಡಬ್ಲ್ಯುಎಸ್ಎಸ್‌ಬಿ ಅಧಿಕಾರಿಗಳನ್ನು ಭೇಟಿ ಮಾಡಿ ದೂರು ನೀಡುವೆ” ಎಂದರು.

“ನೀರಿನ ಸರಬರಾಜಿನಲ್ಲಿ ಏಕೆ ತೊಂದರೆ ಉಂಟಾಗಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಬಹುಶಃ ನೀರಿನ ಬೇಡಿಕೆ ಹೆಚ್ಚಿರಬಹುದು. ಆದರೆ, ಸಾರ್ವಜನಿಕರಿಗೆ ಈ ಬಗ್ಗೆ ಮಾಹಿತಿ ನೀಡಬೇಕು” ಎಂದು ವಿದ್ಯಾಮಾನ್ಯ ನಗರದ ನಿವಾಸಿಯೊಬ್ಬರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೇಡಿಕೆ ಮೇರೆಗೆ ಕೇರಳದ ಕೊಚುವೇಲಿ-ಬೆಂಗಳೂರು ನಡುವೆ ವಿಶೇಷ ರೈಲು ಆರಂಭ

“ಬಿಡಬ್ಲ್ಯುಎಸ್ಎಸ್‌ಬಿ ಅಧಿಕಾರಿಗಳು ಖಾಸಗಿ ಟ್ಯಾಂಕರ್‌ಗಳೊಂದಿಗೆ ಶಾಮೀಲಾಗಿ ವ್ಯಾಪಾರ ಮಾಡಲು ಕೆಲಸ ಮಾಡುತ್ತಿದ್ದಾರೆ” ಎಂದು ಕೆಲವು ನಿವಾಸಿಗಳು ದೂರಿದ್ದಾರೆ.

ಈ ಬಗ್ಗೆ ಮಾತನಾಡಿದ ಬಿಡಬ್ಲ್ಯುಎಸ್ಎಸ್‌ಬಿ ಅಧಿಕಾರಿಯೊಬ್ಬರು, “ತಾಂತ್ರಿಕ ಅಡಚಣೆ ಮತ್ತು ವಿದ್ಯುತ್ ಅಡೆತಡೆಗಳಂತಹ ಸಮಸ್ಯೆ ನೀರಿನ ಕೊರತೆಗೆ ಕಾರಣವಾಗಿದೆ” ಎಂದರು.

“ಬೆಂಗಳೂರಿನ ಪೂರ್ವ ಮತ್ತು ಉತ್ತರ ಭಾಗದ ಕೆಲವು ಪ್ರದೇಶಗಳಲ್ಲಿ ಮಾತ್ರ ನೀರಿನ ಸಮಸ್ಯೆ ಇದೆ. ಬೇಸಿಗೆಯಲ್ಲಿ ನೀರಿನ ಬೇಡಿಕೆ ಹೆಚ್ಚಾಗುತ್ತದೆ. ವಿದ್ಯುತ್ ವ್ಯತ್ಯಯದಿಂದ ನಿರಂತರ ನೀರು ಪೂರೈಕೆಗೆ ತೊಂದರೆಯಾಗುತ್ತಿದೆ. ಸಮಸ್ಯೆಗಳನ್ನು ಪರಿಹರಿಸಲಾಗುತ್ತಿದೆ” ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಮುಖ್ಯ ಎಂಜಿನಿಯರ್ ಸುರೇಶ್ ಬಿ ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X