ಬೆಂಗಳೂರು | 67 ಲಕ್ಷ ಮೌಲ್ಯದ ಚಿನ್ನ ಕಳ್ಳ ಸಾಗಾಣೆ ಮಾಡುತ್ತಿದ್ದ ಚಾಲಾಕಿ ಮಹಿಳೆಯರ ಬಂಧನ

Date:

Advertisements

ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಚಾಲಕಿ ಮಹಿಳೆಯರನ್ನು ಕಸ್ಟಮ್ಸ್‌ ಅಧಿಕಾರಿಗಳು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಶುಕ್ರವಾರ ತಡರಾತ್ರಿ ಹಾಗೂ ಶನಿವಾರ ಮುಂಜಾನೆ ಮಲೇಷ್ಯಾ, ಕುವೈತ್ ಮತ್ತು ಕ್ವಾಲಲಂಪುರದಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಮೂವರು ಪ್ರಯಾಣಿಕರು ಚಿನ್ನವನ್ನು ಸಾಗಣೆ ಮಾಡಲು ಯತ್ನಿಸಿದ್ದು, ಅವರು ಬುದ್ಧಿವಂತಿಕೆ ನೋಡಿ ಕಸ್ಟಮ್ಸ್ ಅಧಿಕಾರಿಗಳು ನಿಬ್ಬೆರಗಾಗಿದ್ದಾರೆ.

ಆರೋಪಿತರಿಂದ ಒಟ್ಟು ₹67.57 ಲಕ್ಷ ಮೌಲ್ಯದ ಚಿನ್ನವನ್ನು ಒಂದೇ ದಿನದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Advertisements

ಕ್ವಾಲಲಂಪುರದಿಂದ ಇಲ್ಲಿನ ವಿಮಾನ ನಿಲ್ದಾಣಕ್ಕೆ ಬಂದ ಭಾರತೀಯ ಮೂಲದ ಮಹಿಳೆಯೊಬ್ಬರು ಕೊಟ್ಟಿದ್ದ ರವಿಕೆಯಲ್ಲಿ 300.95 ಗ್ರಾಂ ಚಿನ್ನದ ಪೇಸ್ಟ್ಅನ್ನು ಬ್ಲೌಸ್‌ನಲ್ಲಿ ಇರಿಸಿದ್ದರು. ಇದನ್ನು ನೋಡಿ ತಪಾಸಣಾ ಅಧಿಕಾರಿಗಳು ಆಶ್ಚರ್ಯಗೊಂಡರು.

ಈ ಸುದ್ದಿ ಓದಿದ್ದೀರಾ? ಇಸ್ರೋದ ಮಾನವಸಹಿತ ಗಗನಯಾನದ ಮೊದಲ ಹಾರಾಟ ಪರೀಕ್ಷೆ ಯಶಸ್ವಿ

ಈ ಮಹಿಳೆಯಿಂದ ವಶಕ್ಕೆ ಪಡೆದ ಚಿನ್ನದ ಮೌಲ್ಯ 17.9 ಲಕ್ಷ ರೂ. ಎಂದು ತಿಳಿದು ಬಂದಿದೆ.

ಇದೇ ವಿಮಾನದಲ್ಲಿ ಬಂದಿದ್ದ ಮಲೇಷ್ಯಾ ಮೂಲದ ಮಹಿಳೆ ಗುದದ್ವಾರದಲ್ಲಿ ನಾಲ್ಕು ಕಾಫ್ಸೂಲ್‌ಗಳಲ್ಲಿ ಒಟ್ಟು 578.27 ಗ್ರಾಂ ಚಿನ್ನವನ್ನು ಅಡಗಿಸಿಟ್ಟುಕೊಂಡು ಬಂದಿದ್ದರು. ವೈದ್ಯರ ಸಹಾಯದಿಂದ ಗುದದ್ವಾರದಲ್ಲಿದ್ದ ಚಿನ್ನವನ್ನು ಹೊರತೆಗೆದಿದ್ದು, ಅದರ ಮೌಲ್ಯ 34.4 ಲಕ್ಷ ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡ್ರೈಫ್ರೂಟ್ಸ್‌ನಲ್ಲಿ ಚಿನ್ನ ಕಳ್ಳ ಸಾಗಣೆ

ಕುವೈತ್‌ನಿಂದ ಬಂದ ಭಾರತೀಯ ಮೂಲದ ಪ್ರಯಾಣಿಕನೊಬ್ಬ ಚಿನ್ನವನ್ನು ಸಣ್ಣ ಸಣ್ಣದಾಗಿ ತುಂಡು ಮಾಡಿ, ಗೋಡಂಬಿ, ಬಾದಾಮಿ, ಪಿಸ್ತಾವನ್ನು ಒಳಗೊಂಡಂತೆ ಡ್ರೈಫ್ರೂಟ್ಸ್‌ ಪೊಟ್ಟಣದಲ್ಲಿ ಸೇರಿಸಿ, ಅಧಿಕಾರಿಗಳನ್ನು ಯಾಮಾರಿಸಲು ಯತ್ನಿಸಿದ್ದ.

ತಪಸಾಣೆಯ ವೇಳೆಯಲ್ಲಿ ಡ್ರೈಫ್ರೂಟ್ಸ್‌ ಪೊಟ್ಟಣದಲ್ಲಿ ಚಿನ್ನದ ಸಣ್ಣಸಣ್ಣ 150 ಗ್ರಾಂ ತೂಕದ ತುಂಡುಗಳು ಇರುವುದು ಕಂಡುಬಂದಿದೆ. ಇದರ ಮೌಲ್ಯವೂ 15.2 ಲಕ್ಷ ರೂ. ಆಗಿದ್ದು, ಇದೇ ಆರೋಪಿಯಿಂದ 1.49 ಲಕ್ಷ ಮೌಲ್ಯದ ಐ ಫೋನ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X