ಬೆಂಗಳೂರು | ಮಹಾರಾಣಿ ಕಾಲೇಜಿನ ಆವರಣದಲ್ಲಿ ಪ್ರೊಫೆಸರ್ ಕಾರು ಅಪಘಾತ; ಮೂವರಿಗೆ ಗಾಯ

Date:

ಬೆಂಗಳೂರಿನ ಪ್ರತಿಷ್ಠಿತ ಮಹಾರಾಣಿ ಕ್ಲಸ್ಟರ್ ಕಾಲೇಜು ಆವರಣದಲ್ಲೇ ಶನಿವಾರ ಅಪಘಾತ ಸಂಭವಿಸಿದ್ದು ಇಬ್ಬರು ವಿದ್ಯಾರ್ಥಿನಿಯರು ಹಾಗೂ ಕಾರು ಚಲಾಯಿಸುತ್ತಿದ್ದ ಪ್ರೊಫೆಸರ್ ಗಾಯಗೊಂಡಿರುವ ಘಟನೆ ನಡೆದಿದೆ.

- Advertisement -

ಕಾಲೇಜಿನ ಇಂಗ್ಲಿಷ್ ಪ್ರೊಫೆಸರ್ ನಾಗರಾಜ್‌(52) ಎಂಬುವವರು ಕಾಲೇಜು ಕ್ಯಾಂಪಸ್​ನೊಳಗಡೆ ಬಂದು ಪಾರ್ಕಿಂಗ್ ಮಾಡಲು ಯತ್ನಿಸಿದಾಗ ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಪರಿಣಾಮ ಈ ಅಪಘಾತ ಘಟನೆ ನಡೆದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಮತ್ತು ಕಾರು ಚಲಾಯಿಸುತ್ತಿದ್ದ ಪ್ರೊಫೆಸರ್ ಅವರಿಗೆ ಗಾಯಗಳಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಘಟನೆಯಲ್ಲಿ ಬಿಕಾಂ ವಿದ್ಯಾರ್ಥಿ ಅಶ್ವಿನಿ(19), ಮತ್ತೊಬ್ಬ ವಿದ್ಯಾರ್ಥಿನಿ ನಂದುಪ್ರಿಯಾ(19) ಎಂಬಾಕೆಗೆ ಗಾಯಗಳಾಗಿವೆ. ಕಾರು ನಿಯಂತ್ರಣ ತಪ್ಪಿದ ಬಳಿಕ ಪಾರ್ಕಿಂಗ್ ಮಾಡಿದ್ದ ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಆ ಬಳಿಕ ಕಾಲೇಜು ಆವರಣದಲ್ಲಿದ್ದ ಮರವೊಂದಕ್ಕೆ ಗುದ್ದಿ ನಿಂತಿದೆ.

ಸದ್ಯ ಗಾಯಾಳುಗಳನ್ನು ಸೆಂಟ್ ಮಾರ್ಥಾಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಾವುದೇ ಆತಂಕವಿಲ್ಲ, ಚಿಕಿತ್ಸೆಗೆ ವಿದ್ಯಾರ್ಥಿನಿಯರು ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಪ ಪೊಲೀಸ್ ಆಯುಕ್ತ ಸಚಿನ್ ಘೋರ್ಪಡೆ, ‘ಪ್ರೊಫೆಸರ್ ನಾಗರಾಜ್‌ ಅವರು ಕಾರು ಪಾರ್ಕಿಂಗ್ ಮಾಡುವ ವೇಳೆ ಬ್ರೇಕ್ ಬದಲು ಎಕ್ಸಲೇಟರ್ ತುಳಿದಿದ್ದೇ ಅಪಘಾತಕ್ಕೆ ಕಾರಣ ಎಂದು ಪರಿಶೀಲನೆ ನಡೆಸಿದ ಸಂದರ್ಭ ತಿಳಿದುಬಂದಿದೆ. ಘಟನೆಯಲ್ಲಿ ನಾಗರಾಜ್‌ ಹಾಗೂ ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯಗಳಾಗಿವೆ. ಗಾಯಾಳು ವಿದ್ಯಾರ್ಥಿನಿಯರ ಪೈಕಿ ಅಶ್ವಿನಿಯವರ ತಲೆಗೆ ಸ್ವಲ್ಪ ಹೆಚ್ಚು ಪೆಟ್ಟಾಗಿದೆ. ಜೀವಾಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆ ನೀಡಲಾಗುತ್ತಿದೆ. ಪ್ರೊಫೆಸರ್ ನಾಗರಾಜ್‌ ಅವರಿಗೂ ಗಾಯವಾಗಿದೆ. ಸದ್ಯ ಅವರನ್ನು ವಶಕ್ಕೆ ಪಡೆದಿದ್ದೇವೆ’ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...