ಚಲಿಸುತ್ತಿದ್ದ ಕಾರಿನಲ್ಲಿ ಯುವತಿ ಮೇಲೆ ನಾಲ್ವರು ದುಷ್ಕರ್ಮಿಗಳಿಂದ ಅತ್ಯಾಚಾರ; ಬಂಧನ

Date:

  • ಬೆಂಗಳೂರಿನಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ
  • ಪ್ರಕರಣ ದಾಖಲಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ನಗರದ ಪಾರ್ಕ್‌ವೊಂದರಲ್ಲಿ ಸ್ನೇಹಿತನ ಜೊತೆ ಕುಳಿತಿದ್ದ ಯುವತಿಯನ್ನು ಎಳೆದೊಯ್ದ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸರ್ಕಾರಿ ನೌಕರರು ಇರುವ ನ್ಯಾಷನಲ್ ಗೇಮ್ಸ್‌ ವಿಲೇಜ್ ಪಾರ್ಕ್‌ನಲ್ಲಿ ಸಂತ್ರಸ್ತ ಯುವತಿಯೂ ತನ್ನ ಸ್ನೇಹಿತನೊಂದಿಗೆ ಕುಳಿತಿದ್ದಳು. ಈ ವೇಳೆ, ಅಲ್ಲಿಗೆ ಬಂದ ನಾಲ್ವರು ದುಷ್ಕರ್ಮಿಗಳು ಯುವತಿಯ ಸ್ನೇಹಿತನನ್ನು ಬೆದರಿಸಿ, ಯುವತಿಯನ್ನು ಕೆಎ 01 ಎಂಬಿ 6169 ಸಂಖ್ಯೆಯ ಕಾರಿನಲ್ಲಿ ಬಲವಂತವಾಗಿ ಎಳೆದುಕೊಂಡು ಹೋಗಿದ್ದಾರೆ. ಈ ಘಟನೆ ಮಾರ್ಚ್‌ 25ರ ರಾತ್ರಿ 10 ಗಂಟೆಗೆ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರಿನ ದೊಮ್ಮಲೂರು, ಇಂದಿರಾನಗರ, ಆನೇಕಲ್, ನೈಸ್ ರಸ್ತೆ ಸೇರಿದಂತೆ ಹಲವೆಡೆ ಕಾರಿನಲ್ಲಿ ಸುತ್ತಾಟ ನಡೆಸಿ, ಚಲಿಸುತ್ತಿದ್ದ ಕಾರಿನಲ್ಲಿ ನಾಲ್ವರು ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ. ಮರುದಿನ ಮಾರ್ಚ್‌ 26ರ ಬೆಳಗ್ಗೆ 4 ಗಂಟೆಗೆ ಯುವತಿಯನ್ನು ಮನೆ ಬಳಿ ಬಿಟ್ಟು ಪರಾರಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೇಸಿಗೆಗೆ ಮತ್ತಷ್ಟು ಹುಳಿಯಾದ ನಿಂಬೆಹಣ್ಣು

ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಮಾರ್ಚ್‌ 26ರಂದು ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ನಾಲ್ವರು ಆರೋಪಿಗಳಾದ ಸತೀಶ್, ವಿಜಯ್, ಶ್ರೀಧರ್, ಕಿರಣ್ ಎಂಬುವವರನ್ನ ಬಂಧಿಸಿದ್ದಾರೆ.

ಪೋಕ್ಸೋ ಪ್ರಕರಣಗಳ ಸಂಖ್ಯೆ ಹೆಚ್ಚಳ

ರಾಜಧಾನಿ ಬೆಂಗಳೂರಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪೋಕ್ಸೊ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿದೆ.

ನಗರದ ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಾಗುತ್ತಿರುವ ಪೋಕ್ಸೋ ಪ್ರಕರಣಗಳ ವರದಿಯೂ ಆಘಾತಕಾರಿಯಾಗಿದೆ.

ರಾಜ್ಯದಲ್ಲಿ 2018ರಲ್ಲಿ 2,063 ಪೋಕ್ಸೊ ಪ್ರಕರಣಗಳು, 2020ರಲ್ಲಿ 2,166 ಹಾಗೂ 2021ರಲ್ಲಿ 2863 ಪ್ರಕರಣಗಳು ದಾಖಲಾಗಿವೆ.

ಈ ಸಂಖ್ಯೆ 2022ರ ವೇಳೆಗೆ 3,097ಕ್ಕೆ ಏರಿಕೆಯಾಗಿದೆ. 2023 ಜನವರಿ ತಿಂಗಳೊಂದರಲ್ಲಿಯೇ 207 ಪ್ರಕರಣಗಳು ದಾಖಲಾಗಿವೆ.

ಬೆಂಗಳೂರಿನಲ್ಲಿ ಕಳೆದ ಮೂರು ತಿಂಗಳಲ್ಲಿ 200ಕ್ಕೂ ಹೆಚ್ಚು ಪೋಕ್ಸೊ ಪ್ರಕರಣಗಳು ದಾಖಲಾಗಿವೆ.

ಕೆ ಸಿ ಜನರಲ್ ಆಸ್ಪತ್ರೆಯೊಂದರಲ್ಲಿ ಕಳೆದ ವರ್ಷ 35 ಪ್ರಕರಣಗಳು ದಾಖಲಾಗಿದ್ದವು, ಈ ವರ್ಷದ ಡಿಸೆಂಬರ್​ನಿಂದ ಮಾರ್ಚ್​​ವರೆಗೂ ಈಗಾಗಲೇ ಪೊಕ್ಸೋ ಪ್ರಕರಣಗಳು 35ರ ಗಡಿ ದಾಟಿವೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆ. ಗ್ರಾಮಾಂತರ | ನಟಿ ಲೀಲಾವತಿ ಕನಸಿನ ಪಶು ಆಸ್ಪತ್ರೆ ಉದ್ಘಾಟನೆ

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಕನಸಿದ ಪಶು ಆಸ್ಪತ್ರೆ ನೆಲಮಂಗಲದ...

ಜೀವ ಪ್ರಮಾಣ ಪತ್ರ ಸಲ್ಲಿಸಲು ಪಿಂಚಣಿದಾರರಿಗೆ ಎರಡೇ ದಿನ ಬಾಕಿ

ಕೇಂದ್ರ ಸರ್ಕಾರ ಹಾಗೂ ನಾನಾ ರಾಜ್ಯಗಳಲ್ಲಿ ಉದ್ಯೋಗ ಮಾಡಿ ನಿವೃತ್ತಿ ಹೊಂದಿ...

ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ಮಕ್ಕಳಿಗಿದು ಸುರಕ್ಷಿತ ತಾಣವೇ?

ಕಳೆದ ಐದು ವರ್ಷಗಳಲ್ಲಿ ಕರ್ನಾಟಕ ನಾಲ್ವರು ಮುಖ್ಯಮಂತ್ರಿಗಳನ್ನು ಕಂಡಿದೆ. ಆದರೂ ರಾಜ್ಯದ...

ಹೆಣ್ಣುಭ್ರೂಣ ಹತ್ಯೆ ಪ್ರಕರಣ: 9 ಮಂದಿ ಆರೋಪಿಗಳ ಬಂಧನ; ಹಲವರ ಕೈವಾಡವಿರುವ ಶಂಕೆ

ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಪ್ರಕರಣದ ಆರೋಪಿಗಳು 1,500ಕ್ಕೂ ಅಧಿಕ...