ಬೆಂಗಳೂರು | ಮಾ. 29ರ ರಾತ್ರಿ ಐತಿಹಾಸಿಕ ಕರಗ ಶಕ್ತ್ಯೋತ್ಸವದ ಅದ್ದೂರಿ ರಥೋತ್ಸವ

Date:

  • ಮಾರ್ಚ್‌ 29ರಿಂದ ಏಪ್ರಿಲ್​​ 6ರವರೆಗೆ ಕರಗ ಶಕ್ತ್ಯೋತ್ಸವ
  • ಚುನಾವಣಾ ನೀತಿ ಸಂಹಿತೆ ಹಿನ್ನಲೆ ವೇದಿಕೆ ಕಾರ್ಯಕ್ರಮವಿಲ್ಲ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿಶ್ವವಿಖ್ಯಾತ ಕರಗ ಮಾ. 29ರ ರಾತ್ರಿ ಅದ್ದೂರಿ ರಥೋತ್ಸವ ಮತ್ತು ಮುಂಜಾನೆ 3 ಗಂಟೆಗೆ ಧ್ವಜಾರೋಹಣ ನಡೆಸುವ ಮೂಲಕ ಕರಗಕ್ಕೆ ಅಧಿಕೃತ ಚಾಲನೆ ದೊರೆಯಲಿದೆ.

ಕರಗ ಶಕ್ತ್ಯೋತ್ಸವ‘ 11 ದಿನ ನಡೆಯಲಿದೆ. ಈ ವೇಳೆ, ನಾನಾ ಕೈಂಕರ್ಯಗಳು ಜರುಗಲಿವೆ. ಮಾರ್ಚ್‌ 29ರಿಂದ ಏಪ್ರಿಲ್​​ 6ರವರೆಗೆ ಕರಗ ಮಹೋತ್ಸವ ನಡೆಯಲಿದೆ. ಪ್ರತಿ ಬಾರಿಯಂತೆ ಈ ವರ್ಷವೂ ಕೂಡಾ ಪೂಜಾರಿ ಜ್ಞಾನೇಂದ್ರ ಅವರು ಕರಗವನ್ನು ಹೊರಲಿದ್ದಾರೆ.

ಏ. 6ರಂದು ಕರಗ ಮೆರವಣಿಗೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕರಗ ಮೆರವಣಿಗೆ ಏ. 6ರಂದು ರಾತ್ರಿ ಆರಂಭಗೊಳ್ಳಲಿದೆ. ದ್ರೌಪದಮ್ಮನ ಕರಗ ರಾತ್ರಿ 12.30ಕ್ಕೆ ಕುಂಬಾರಪೇಟೆ, ನಗರ್ತಪೇಟೆ, ಗೊಲ್ಲರಪೇಟೆಗಳಲ್ಲಿ ಸಂಚರಿಸಲಿದೆ.

ದಶಕದ ಸಂಪ್ರದಾಯದಂತೆ ಮಸ್ತಾನ್ ಸಾಬ್ ದರ್ಗಾಕ್ಕೆ ಕರಗ ಭೇಟಿ ನೀಡಿ, ಬಳಿಕ ಮರುದಿನ (ಏಪ್ರಿಲ್ 7) ಬೆಳಗ್ಗೆ ಧರ್ಮರಾಯಸ್ವಾಮಿ ದೇವಾಲಯ ತಲುಪಲಿದೆ. ಏಪ್ರಿಲ್ 8ರ ಸಂಜೆ 4 ಗಂಟೆಗೆ ವಸಂತೋತ್ಸವ ಹಾಗೂ ರಾತ್ರಿ 12ಕ್ಕೆ ಧ್ವಜಾರೋಹಣ ಮೂಲಕ 2023 ರ ಕರಗಕ್ಕೆ ತೆರೆ ಬೀಳಲಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಕ್ಕಳ ಕಳ್ಳಿಯನ್ನು ಬಂಧಿಸಿದ ಕಲಾಸಿಪಾಳ್ಯ ಪೊಲೀಸರು

ಕರಗದ ಬಗ್ಗೆ ಈ ದಿನ.ಕಾಮ್‌ ಜೊತೆಗೆ ಮಾತನಾಡಿದ ಧರ್ಮದರ್ಶಿ ಲಕ್ಷ್ಮಣ, “ನೂರಾರು ವರ್ಷಗಳಿಂದ ತುಂಬಾ ನಂಬಿಕೆಯಿಂದ ಈ ಕರಗ ಉತ್ಸವವನ್ನು ಮಾಡಲಾಗುತ್ತಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಕರಗ ಉತ್ಸವ ವಿಜೃಂಭಣೆಯಿಂದ ನೆರವೇರಲಿದೆ” ಎಂದರು.

“ಚುನಾವಣಾ ನೀತಿ ಸಂಹಿತೆ ಇರುವುದರಿಂದ ವೇದಿಕೆ ಕಾರ್ಯಕ್ರಮ ಇರುವುದಿಲ್ಲ. ಗಣ್ಯವ್ಯಕ್ತಿಗಳಿಗೂ ಸಾಮಾನ್ಯ ಜನರಂತೆ ದರ್ಶನ ಮಾಡಲು ಅವಕಾಶ ನೀಡಲಾಗುತ್ತದೆ. ವೀರಕುಮಾರರ ಸಂಖ್ಯೆ ಈ ವರ್ಷ ಹೆಚ್ಚಾಗಲಿದೆ. ಈ ಹಿಂದೆ 3,500 ವೀರಕುಮಾರರಿದ್ದರು. ನಾಳೆಗೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ವೀರಕುಮಾರರು ಸೇರ್ಪಡೆಯಾಗಲಿದ್ದಾರೆ” ಎಂದು ಹೇಳಿದರು.

“ಹಿಂದುಗಳು ಮುಸ್ಲಿಮರ ದರ್ಗಾಕ್ಕೆ ಯಾಕೆ ಹೋಗಬೇಕು ಎಂಬ ಕೂಗು ಇದೆ. ಆದರೆ, ಈ ಹಿಂದಿನಿಂದಲೂ ನಮ್ಮ ಹಿರಿಯರು ನಡೆಸಿಕೊಂಡು ಬಂದ ಸಂಪ್ರದಾಯವನ್ನು ನಾವು ಮುನ್ನಡೆಸಬೇಕು. ಕರಗ ಹಿಂದೂ ಮತ್ತು ಮುಸ್ಲಿಂ ಏಕತೆಯನ್ನು ಸಂಕೇತಿಸುತ್ತದೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...

ಬೆಂಗಳೂರು | ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ

ರೈಲಿಗೆ ಸಿಲುಕಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು...