ಬೆಂಗಳೂರು | ಮಾ. 29ರ ರಾತ್ರಿ ಐತಿಹಾಸಿಕ ಕರಗ ಶಕ್ತ್ಯೋತ್ಸವದ ಅದ್ದೂರಿ ರಥೋತ್ಸವ

Date:

  • ಮಾರ್ಚ್‌ 29ರಿಂದ ಏಪ್ರಿಲ್​​ 6ರವರೆಗೆ ಕರಗ ಶಕ್ತ್ಯೋತ್ಸವ
  • ಚುನಾವಣಾ ನೀತಿ ಸಂಹಿತೆ ಹಿನ್ನಲೆ ವೇದಿಕೆ ಕಾರ್ಯಕ್ರಮವಿಲ್ಲ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿಶ್ವವಿಖ್ಯಾತ ಕರಗ ಮಾ. 29ರ ರಾತ್ರಿ ಅದ್ದೂರಿ ರಥೋತ್ಸವ ಮತ್ತು ಮುಂಜಾನೆ 3 ಗಂಟೆಗೆ ಧ್ವಜಾರೋಹಣ ನಡೆಸುವ ಮೂಲಕ ಕರಗಕ್ಕೆ ಅಧಿಕೃತ ಚಾಲನೆ ದೊರೆಯಲಿದೆ.

- Advertisement -

ಕರಗ ಶಕ್ತ್ಯೋತ್ಸವ‘ 11 ದಿನ ನಡೆಯಲಿದೆ. ಈ ವೇಳೆ, ನಾನಾ ಕೈಂಕರ್ಯಗಳು ಜರುಗಲಿವೆ. ಮಾರ್ಚ್‌ 29ರಿಂದ ಏಪ್ರಿಲ್​​ 6ರವರೆಗೆ ಕರಗ ಮಹೋತ್ಸವ ನಡೆಯಲಿದೆ. ಪ್ರತಿ ಬಾರಿಯಂತೆ ಈ ವರ್ಷವೂ ಕೂಡಾ ಪೂಜಾರಿ ಜ್ಞಾನೇಂದ್ರ ಅವರು ಕರಗವನ್ನು ಹೊರಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಏ. 6ರಂದು ಕರಗ ಮೆರವಣಿಗೆ

ಕರಗ ಮೆರವಣಿಗೆ ಏ. 6ರಂದು ರಾತ್ರಿ ಆರಂಭಗೊಳ್ಳಲಿದೆ. ದ್ರೌಪದಮ್ಮನ ಕರಗ ರಾತ್ರಿ 12.30ಕ್ಕೆ ಕುಂಬಾರಪೇಟೆ, ನಗರ್ತಪೇಟೆ, ಗೊಲ್ಲರಪೇಟೆಗಳಲ್ಲಿ ಸಂಚರಿಸಲಿದೆ.

ದಶಕದ ಸಂಪ್ರದಾಯದಂತೆ ಮಸ್ತಾನ್ ಸಾಬ್ ದರ್ಗಾಕ್ಕೆ ಕರಗ ಭೇಟಿ ನೀಡಿ, ಬಳಿಕ ಮರುದಿನ (ಏಪ್ರಿಲ್ 7) ಬೆಳಗ್ಗೆ ಧರ್ಮರಾಯಸ್ವಾಮಿ ದೇವಾಲಯ ತಲುಪಲಿದೆ. ಏಪ್ರಿಲ್ 8ರ ಸಂಜೆ 4 ಗಂಟೆಗೆ ವಸಂತೋತ್ಸವ ಹಾಗೂ ರಾತ್ರಿ 12ಕ್ಕೆ ಧ್ವಜಾರೋಹಣ ಮೂಲಕ 2023 ರ ಕರಗಕ್ಕೆ ತೆರೆ ಬೀಳಲಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಕ್ಕಳ ಕಳ್ಳಿಯನ್ನು ಬಂಧಿಸಿದ ಕಲಾಸಿಪಾಳ್ಯ ಪೊಲೀಸರು

ಕರಗದ ಬಗ್ಗೆ ಈ ದಿನ.ಕಾಮ್‌ ಜೊತೆಗೆ ಮಾತನಾಡಿದ ಧರ್ಮದರ್ಶಿ ಲಕ್ಷ್ಮಣ, “ನೂರಾರು ವರ್ಷಗಳಿಂದ ತುಂಬಾ ನಂಬಿಕೆಯಿಂದ ಈ ಕರಗ ಉತ್ಸವವನ್ನು ಮಾಡಲಾಗುತ್ತಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಕರಗ ಉತ್ಸವ ವಿಜೃಂಭಣೆಯಿಂದ ನೆರವೇರಲಿದೆ” ಎಂದರು.

“ಚುನಾವಣಾ ನೀತಿ ಸಂಹಿತೆ ಇರುವುದರಿಂದ ವೇದಿಕೆ ಕಾರ್ಯಕ್ರಮ ಇರುವುದಿಲ್ಲ. ಗಣ್ಯವ್ಯಕ್ತಿಗಳಿಗೂ ಸಾಮಾನ್ಯ ಜನರಂತೆ ದರ್ಶನ ಮಾಡಲು ಅವಕಾಶ ನೀಡಲಾಗುತ್ತದೆ. ವೀರಕುಮಾರರ ಸಂಖ್ಯೆ ಈ ವರ್ಷ ಹೆಚ್ಚಾಗಲಿದೆ. ಈ ಹಿಂದೆ 3,500 ವೀರಕುಮಾರರಿದ್ದರು. ನಾಳೆಗೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ವೀರಕುಮಾರರು ಸೇರ್ಪಡೆಯಾಗಲಿದ್ದಾರೆ” ಎಂದು ಹೇಳಿದರು.

“ಹಿಂದುಗಳು ಮುಸ್ಲಿಮರ ದರ್ಗಾಕ್ಕೆ ಯಾಕೆ ಹೋಗಬೇಕು ಎಂಬ ಕೂಗು ಇದೆ. ಆದರೆ, ಈ ಹಿಂದಿನಿಂದಲೂ ನಮ್ಮ ಹಿರಿಯರು ನಡೆಸಿಕೊಂಡು ಬಂದ ಸಂಪ್ರದಾಯವನ್ನು ನಾವು ಮುನ್ನಡೆಸಬೇಕು. ಕರಗ ಹಿಂದೂ ಮತ್ತು ಮುಸ್ಲಿಂ ಏಕತೆಯನ್ನು ಸಂಕೇತಿಸುತ್ತದೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...