ಬೆಂಗಳೂರು | ಮಳೆಯಿಂದ ಉಂಟಾಗಿರುವ ಅನಾಹುತಗಳ ಬಗ್ಗೆ ವಿವಿಧ ಸ್ಥಳಗಳಿಗೆ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಭೇಟಿ

Date:

Advertisements

ಬೆಂಗಳೂರು ನಗರದಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಉಂಟಾಗಿರುವ ಅನಾಹುತಗಳ ಬಗ್ಗೆ ಪರಿಶೀಲನೆ ಮಾಡಲು ಮಾನ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಇಂದು ಬೆಂಗಳೂರು ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕ್ರಮ ವಹಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಲ್ಕ್ ಬೋರ್ಡ್ ಜಕ್ಷನ್:

ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್‍ನಲ್ಲಿ ಜಲಾವೃತವಾಗುವುದದನ್ನು ತಪ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಸಿಲ್ಕ್ ಬೋರ್ಡ್ ನ ಮೇಲ್ಸೇತುವೆ ಕೆಳಭಾಗದ ಸುತ್ತಲೂ, ರಾಜಕಾಲುವೆಯಲ್ಲಿ ಸಂಪೂರ್ಣ ಸ್ವಚ್ಛತೆ ಕಾಪಾಡಬೇಕು. ಬಳಕೆಯಾಗದ ಜಾಗದಲ್ಲಿ ಡೆಬ್ರೀಸ್, ರಾಜಕಾಲುವೆಯಲ್ಲಿ ಹೂಳನ್ನು ಇಂದೇ ತೆರವುಗೊಳೊಸಿ ಸುಂದರೀಕರಣ ಮಾಡಿ, ಫೇವರ್ ಬ್ಲಾಕ್ಸ್ ಅಳವಡಿಸಬೇಕು ಎಂದು ತಿಳಿಸಿದರು.

ಮೆಟ್ರೋ ಇಲಾಖೆಯಿಂದ ಸ್ಕೈವಾಕ್ ನಿರ್ಮಾಣ ಮಾಡಿ, 2026 ಜೂನ್ ಅಂತ್ಯಕ್ಕೆ ಮೆಟ್ರೋ ಕಾಮಗಾರಿ ಪೂರ್ಣಗೊಳಿಸುವುದು. ಪಾಲಿಕೆಯಿಂದ ಹೈ ರೈಸ್ ಪೆಡೆಸ್ಟ್ರಿಯನ್ ಕ್ರಾಸಿಂಗ್ (HRPC) ಮಾಡುವುದು. ರಾಜಕಾಲುವೆಯಲ್ಲಿ ಹೂಳೆತ್ತಿದ ತಕ್ಷಣ, ಹೂಳನ್ನು ಸ್ಥಳದಲ್ಲಿಯೇ ಬಿಡದೆ ತಕ್ಷಣ ತೆರವುಗೊಳಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಮೆಟ್ರೋ ಇಲಾಖೆಯಿಂದ 25 ಮೀ. ನಿಂದ 45 ಮೀಟರ್ ಗೆ ಮೇಲ್ಸೇತುವೆ ನಿರ್ಮಾಣ ಮಾಡಲಾಗುವುದು. ಕೆ.ಎ.ಎಲ್ ಕಾಲೋನಿಯಲ್ಲಿ ಅಳವಡಿಸಲು ಬೃಹತ್ ಪೈಪ್‍ಗಳನ್ನು ಜಂಕ್ಷನ್‍ನಲ್ಲಿ ಹಾಕಿದ್ದು, ಅದನ್ನು ಕೂಡಲೆ ತೆರವುಗೊಳಿಸಲು ಹಾಗೂ ಸಿಲ್ಕ್ ಬೋರ್ಡ್ ಮೆಟ್ರೋ ಇಲಾಖೆಯು ಕಾಮಗಾರಿ ನಡೆಯುವ ಸ್ಥಳದಲ್ಲಿ ಕಬ್ಬಣಿ, ಸ್ಕ್ರ್ಯಾಪ್ ರಸ್ತೆಯಲ್ಲೇ ಹಾಕಿದ್ದು, ಅದನ್ನು ಈ ಕೂಡಲೆ ತೆರವುಗೊಳಿಸಲು ಸೂಚನೆ ನೀಡಿದರು

ಹೆಚ್.ಎಸ್.ಆರ್ 5 & 6ನೇ ಸೆಕ್ಟರ್:

ಹೆಚ್.ಎಸ್.ಆರ್ 6ನೇ ಸೆಕ್ಟರ್ (ಮಂಗಮ್ಮನ ಪಾಳ್ಯ ಮುಖ್ಯ ರಸ್ತೆ ಬಳಿ) ಮೆಟ್ರೋ ಕಾಮಗಾರಿಯ ಮೀಡಿಯನ್ ಸರಿಯಾಗಿ ಅಳವಡಿಸದೇ ಇರುವುದು, ಅನುಪಯುಕ್ತ ಮೆಟಿರಿಯಲ್ ಅನ್ನು ಕೂಡಲೆ ತೆರವುಗೊಳಿಸಬೇಕು. ಜೊತೆಗೆ ರಸ್ತೆ ಬದಿ ಸ್ವಚ್ಛತೆ ಹಾಗೂ ಡಂಬರೀಕರಣ ಹಾಕಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮೆಟ್ರೋ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಸ್ತೆ ಗುಂಡಿ ಮುಚ್ಚುವುದು ಸಚಿವ ಡಿ.ಕೆ. ಶಿವಕುಮಾರ್ ಕೆಲಸವೇ?

ಹೆಚ್.ಎಸ್.ಆರ್ 5ನೇ ಸೆಕ್ಟರ್ ರಸ್ತೆ ತಿರುವು ಬಳಿ ಪಾದಾಚರಿ, ಎಲೆಕ್ಟ್ರಿಕಲ್ ಕಂಬ, ಡ್ರೈನ್ ಅನ್ನು ಸರಿಯಾಗಿ ಮಾಡಿ ಸುಗಮ ವಾಹನಗಳ ಸಂಚಾರಕ್ಕೆ ಅನುವಾಗುವಂತೆ ಮಾಡುವುದು ಮತ್ತು ರಸ್ತೆ ಮೇಲೆ ನೀರು ನಿಲ್ಲುತ್ತದೆ, ಕೂಡಲೆ ಡ್ರೈನ್ ಕಾಮಗಾರಿ ನಡೆಸಿ ನೀರು ಸರಾಗವಾಗಿ ಹೋಗಲು ವ್ಯವಸ್ಥೆ ಮಾಡುವಂತೆ ಸೂಚಿಸಿದರು.

ಅಗರ ಕೆರೆ ರಸ್ತೆ ಪರಿಶೀಲನೆ:

ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಂಡಿದ್ದು, ರಸ್ತೆಯನ್ನು ಸಂಪೂರ್ಣ ಸುಸ್ತಿತಿಯಲ್ಲಿಡಬೇಕು. ಕೂಡಲೆ ಡ್ರೈನೇಜ್ ಕೆಲಸ ಮುಗಿಸಬೇಕು. ಹಾಳಾಗಿರುವ ಕಡೆ ರಸ್ತೆ ಲೆವೆಲ್ ಮಾಡಿ ರೋಲ್ ಮಾಡಿ, ವೆಟ್ ಮಿಕ್ಸ್ ಹಾಕಿ ಮೋಟರೆಬಲ್ ಮಾಡಲು ತಿಳಿಸಿದರು.

ಸ್ಯಾನಿಟರಿ ಲೈನ್ ಬಳಿ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವುದು. ಫೆಬ್ರಬರಿಯಲ್ಲಿ ಕೆಲಸ ಪ್ರಾರಂಭವಾಗಿದ್ದು, ಕೆಲಸಕ್ಕೆ ಮಾತ್ರ ವೇಗ ನೀಡಲ್ಲ ಎಂದು ನಾಗರಿಕರು ದೂರಿದರು. ಈ ಸಂಬಂಧ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಮುಖ್ಯ ಕಾರ್ಯದರ್ಶಿಗಳು ದಕ್ಷಿಣ ನಗರ ಪಾಲಿಕೆಯ ಏನು ಕೆಲಸ ನಡೆಯುತ್ತಿದೆ, ಯಾರು ಗುತ್ತಿಗೆದಾರರು, ಯವಾಗ ಕೆಲಸ ಪ್ರಾರಂಭಿಸಲಾಗಿದೆ, ಯವಾಗ ಮುಗಿಯುತ್ತದೆ ಸಂಪೂರ್ಣ ಮಾಹಿತಿ ತಿಳಿಸಬೇಕು ಎಂದು ಸೂಚಿಸಿದರು.

ಅಗರ ಜಂಕ್ಷನ್ ಪರಿಶೀಲನೆ:

ಅಗರ ಜಂಕ್ಷನ್ ಬಳಿ ಮೇಲ್ಸೇತುವೆಯ ಮೇಲೆ ಬೀಳುವ ನೀರಿಗೆ ಅಳವಡಿಸಿರುವ ಪೈಪ್ ಹಾಳಾಗಿದ್ದು, ರಸ್ತೆ ಮೇಲೆ ನೀರು ಬೀಳುತ್ತಿದೆ. ಈ ಸಂಬಂಧ ರಸ್ತೆ ಮೇಲೆ ನೀರು ಬೀಳದಂತೆ ಪೈಪ್ ಗಳನ್ನು ಅಳವಡಿಸಬೇಕು. ಮುಖ್ಯ ರಸ್ತೆಯನ್ನು ಮೆಟ್ರೋ, ಸರ್ವೀಸ್ ರಸ್ತೆಯನ್ನು ಪಾಲಿಕೆ ದುರಸ್ತಿ ಮಾಡಬೇಕಿದ್ದು, ಈ ಕ್ಷಣವೇ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಲು ಮೆಟ್ರೋ ಅಧಿಕಾರಿಗೆ ಸೂಚನೆ ನೀಡಿದರು.

ಇಬ್ಲೂರು ಜಂಕ್ಷನ್ ಪರಿಶೀಲನೆ:

ಸರ್ಜಾಪುರ ಸರ್ವೀಸ್ ರಸ್ತೆಯನ್ನು ಆದ್ಯತೆ ಮೇರೆಗೆ ಅಭಿವೃದ್ಧಿಪಡಿಸಲು ದಕ್ಷಿಣ ಪಾಲಕೆ ಆಯುಕ್ತರಿಗೆ ಸೂಚಿಸಿದ ಮುಖ್ಯ ಕಾರ್ಯದರ್ಶಿಗಳು, ಇಬ್ಲೂರು ಜಂಕ್ಷನ್ ಬಳಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಸ್ಕೈವಾಕ್ ನಿರ್ಮಾಣ ಮಾಡುವಂತೆ ತಿಳಿಸಿದರು.

ರಸ್ತೆಯಲ್ಲಿ ಜಲಾವೃತವಾಗದಂತೆ ಹಾಗೂ ಜಂಕ್ಷನ್ ನ ಸಮಗ್ರ ಅಭಿವೃದ್ಧಿ ಮಾಡಬೇಕು. ಪಾದಚಾರಿ ಮಾರ್ಗ ದುರಸ್ತಿ ಕಾರ್ಯ ನಡೆಸಿ, ಸ್ವಚ್ಛವಾಗಿಡಬೇಕು. ಇಬ್ಲೂರು ಜಂಕ್ಷನ್ ನಿಂದ ಮಾರತಹಳ್ಳಿಯವರೆಗೆ ಮುಖ್ಯ ರಸ್ತೆ ಹಾಗೂ ಸರ್ವೀಸ್ ರಸ್ತೆ ವಿಲೀನ ಮಾಡಿದರೆ ಬಹಳಷ್ಟು ಸಂಚಾರ ದಟ್ಟಣೆ ಕಡಿಮೆ ಆಗಲಿದ್ದು, ಅದಕ್ಕೆ ಅಗತ್ಯ ಕ್ರಮವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪಣತ್ತೂರು ಮುಖ್ಯ ರಸ್ತೆ ಪರಿಶೀಲನೆ:

ಪಣತ್ತೂರು ರಸ್ತೆ ಸಂಪೂರ್ಣ ಆಳಾಗಿದ್ದು, ರಸ್ತೆಯಲ್ಲಿ ಸ್ಯಾನಿಟರಿ ಓವರ್ ಫೆÇ್ಲೀ ಆಗುತ್ತಿದೆ. ಕೂಡಲೆ ದುರಸ್ತಿ ಕಾರ್ಯ ನಡೆಸಲು ತಿಳಿಸಿದರು. ಪಾದಚಾರಿ ಮಾರ್ಗ ಸ್ಲ್ಯಾಬ್ ಆಳಾಗಿದ್ದು, ಅದನ್ನು ಬದಲಿಸಿ, ಡ್ರೈನ್‍ನಲ್ಲಿ ಹೂಳೆತ್ತಿ ನೀರು ಸರಾಗವಾಗಿ ಹೋಗುವಂತೆ ಮಾಡಲು ತಿಳಿಸಿದರು. ಪಣತ್ತೂರು ಆರ್‍ಯುಬಿ ಬಳಿ ಜಲಾವೃತ ಆಗುವುದನ್ನು ತಪ್ಪಿಸಲು ಅಗತ್ಯ ಕ್ರಮ ವಹಿಸುವುದು ಹಾಗೂ ಪಣತ್ತೂರು ರಸ್ತೆ ಅಗಲೀಕರಣಕ್ಕೆ ವೇಗ ನೀಡವುದು. ಸೈಡ್ ಡ್ರೈನ್‍ಗಳಲ್ಲಿ ಹೂಳೆತ್ತಿ, ಕೂಡಲೆ ಅದನ್ನು ತೆರವುಗೊಳಿಸುವುದು ಮತ್ತು ಕಲ್ವರ್ಟ್ ಕಾಮಗಾರಿ ಪ್ರಗತಿಯಲ್ಲಿದ್ದು ಅದನ್ನು ಬೇಗ ಮುಗಿಸುವಂತೆ ಸೂಚನೆ ನೀಡಿದರು.

ವಿಬ್‍ಗಯಾರ್ ಸ್ಕೂಲ್ ರಸ್ತೆ ಪರಿಶೀಲನೆ:

ವಿಬ್‍ಗಯಾರ್ ಸ್ಕೂಲ್ ರಸ್ತೆ ತೂಬರಹಳ್ಳಿ ಬಳಿ ರಸ್ತೆ ಹಾಗೂ ಡ್ರೈನ್ ಕಾಮಗಾರಿಗೆ ವೇಗ ನೀಡಿ ಪೂರ್ಣಗೊಳಿಸಬೇಕು. ಕೆಲಸ ಮುಗಿದ ಬಳಿಕ ಯಾವುದೇ ಡೆಬ್ರಿಸ್ ಇರಬಾರದು. ವಿಪತ್ತು ನಿರ್ವಹಣೆ ಕಾಯ್ದೆ ಅಡಿ ನೀರುಗಾಲುವೆ ಮಾಡಲ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ವತಿಯಿಂದ ಅ.2ರಿಂದ ರಾಜ್ಯಾದ್ಯಂತ ʼಅರಿವು-ಮಾನವೀಯತೆʼ ಜಾಗೃತಿ ಅಭಿಯಾನ

ಕರ್ನಾಟಕ ರಾಜ್ಯ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ವತಿಯಿಂದ ಅ.2ರಿಂದ ರಾಜ್ಯಾದ್ಯಂತ...

ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್ ಬೆಂಬಲಕ್ಕೆ ಬೃಹತ್ ಪ್ರತಿಭಟನೆ: ನರಮೇಧ ನಿಲ್ಲಿಸಿ ಎಂದು ಆಗ್ರಹ

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ದೊಡ್ಡ ಸಂಖ್ಯೆಯ ಜನರು ಸೇರಿ, ಗಾಜಾದಲ್ಲಿ...

ವಿಪ್ರೋ ಕ್ಯಾಂಪಸ್‌ ಮೂಲಕ ವಾಹನ ಸಂಚಾರಕ್ಕೆ ಅವಕಾಶ; ಸಿಎಂ ಮನವಿ ತಿರಸ್ಕರಿಸಿದ ಅಜೀಂ ಪ್ರೇಮ್‌ಜಿ

ಬೆಂಗಳೂರಿನ ಹೊರ ವರ್ತುಲ ರಸ್ತೆಯಲ್ಲಿ (ಒಆರ್‌ಆರ್‌) ಉಂಟಾಗುವ ತೀವ್ರ ಸಂಚಾರ ದಟ್ಟಣೆಯನ್ನು...

ಬೆಂಗಳೂರು | ಆರ್ಥಿಕ ಅಭಿವೃದ್ಧಿಗೆ ಸಹಕಾರ; ಕರ್ನಾಟಕ-ನ್ಯೂಜೆರ್ಸಿ ಒಪ್ಪಂದ: ಪ್ರಿಯಾಂಕ್‌ ಖರ್ಗೆ

ತಂತ್ರಜ್ಞಾನ, ನಾವೀನ್ಯತೆ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರವನ್ನು ಬಲಪಡಿಸಲು ಕರ್ನಾಟಕ ಸರ್ಕಾರ...

Download Eedina App Android / iOS

X