ಬೆಂಗಳೂರು | ಶೌಚಾಲಯದಲ್ಲಿ 30ಕ್ಕೂ ಅಧಿಕ ಮಹಿಳೆಯರ ವಿಡಿಯೋ ರೆಕಾರ್ಡ್‌ ಮಾಡಿದ ಇನ್ಫೋಸಿಸ್‌ ಉದ್ಯೋಗಿ ಬಂಧನ

Date:

Advertisements

ಮಹಿಳಾ ಉದ್ಯೋಗಿಗಳು ಶೌಚಾಲಯಕ್ಕೆ ತೆರಳಿದಾಗ ಅವರ ವಿಡಿಯೋ ಚಿತ್ರೀಕರಣ ಮಾಡಿದ್ದ ಪ್ರಕರಣದಲ್ಲಿ ಬೆಂಗಳೂರಿನ ಇನ್ಫೋಸಿಸ್‌ ಸಂಸ್ಥೆಯ ಉದ್ಯೋಗಿಯೊಬ್ಬನನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶ ಮೂಲದ 28 ವರ್ಷದ ಉದ್ಯೋಗಿ ಸ್ವಪ್ನಿಲ್ ನಾಗೇಶ್ ಮಲಿ ಬಂಧಿತ ವ್ಯಕ್ತಿ. ಈತ ಶೌಚಾಲಯದಲ್ಲಿ ಮಹಿಳಾ ಉದ್ಯೋಗಿ ವಿಡಿಯೋ ರೆಕಾರ್ಡ್‌ ಮಾಡುವಾಗಲೇ ಸಿಕ್ಕಿಬಿದ್ದಿದ್ದಾನೆ. ರಹಸ್ಯವಾಗಿ ತನ್ನ ಮೊಬೈಲ್‌ನಲ್ಲಿ ಮಹಿಳಾ ಉದ್ಯೋಗಿಯ ಶೌಚಾಲಯದ ವಿಡಿಯೋ ರೆಕಾರ್ಡ್‌ ಮಾಡತೊಡಗಿದ್ದ. ಪಕ್ಕದ ಶೌಚಾಲಯದ ಕಮೋಡ್‌ ಮೇಲೆ ನಿಂತು ರೆಕಾರ್ಡ್‌ ಮಾಡಿದ್ದಾನೆ. ಈತ ರೆಕಾರ್ಡ್ ಮಾಡುತ್ತಿರುವುದು ಎದುರುಗಡೆ ಬಾಗಿಲ ಮೇಲೆ ಪ್ರತಿಬಿಂಬ ಮೂಡಿರುವುದನ್ನು ಯುವತಿ ಗಮನಿಸಿದ್ದಾರೆ. ತಕ್ಷಣ ಪರಿಶೀಲನೆ ಮಾಡಿದಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಕೂಡಲೇ ಮಹಿಳೆ ಕಿರುಚಾಡಿದ್ದು, ಅಲ್ಲಿಯೇ ಮಹಿಳಾ ಉದ್ಯೋಗಿಯ ಕ್ಷಮೆ ಕೇಳಿದ್ದಾನೆ. ಈ ಹಂತದಲ್ಲಿ ಎಚ್‌ಆರ್‌ ಸಿಬ್ಬಂದಿ ಆಗಮಿಸಿ ಆರೋಪಿಯ ವಿಡಿಯೋ ಪರಿಶೀಲನೆ ಮಾಡಿದಾಗ ಸಂತ್ರಸ್ತೆಯ ವಿಡಿಯೋ ಜೊತೆಗೆ ಸುಮಾರು 30ಕ್ಕೂ ಅಧಿಕ ಮಹಿಳೆಯರ ವಿಡಿಯೋ ಪತ್ತೆಯಾಗಿದೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪತ್ರಿಕಾ ದಿನಾಚರಣೆ: ಅತಿರೇಕ ಅಳಿಯುತ್ತದೆ, ಒಳಿತು ಉಳಿಯುತ್ತದೆ

ಆದರೆ, ಕಠಿಣ ಕ್ರಮಕ್ಕೆ ಮುಂದಾಗದೆ ಇನ್ಫೋಸಿಸ್‌ ಆಡಳಿತ ಮಂಡಳಿ ಉದ್ಯೋಗಿಯ ಕ್ಷಮೆ ಕೇಳಿಸಿ ಪ್ರಕರಣವನ್ನು ಮುಚ್ಚಿಹಾಕಲು ಮುಂದಾಗಿತ್ತು. ಆದರೆ, ಮಹಿಳಾ ಉದ್ಯೋಗಿ ಪತಿಗೆ ವಿಚಾರ ತಿಳಿದು ಗಲಾಟೆ ದೊಡ್ಡದಾಗಿದ್ದು, ಇನ್ಫೋಸಿಸ್ ಕಂಪನಿ ಬಳಿ ಮಹಿಳೆಯ ಪತಿ ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ ಮಂಗಳವಾರ ಎಲಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಆಧರಿಸಿ ಇಂದು ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸ್ವಪ್ನಿಲ್ ನಾಗೇಶ್ ಮಲಿ ಇನ್ಫೋಸಿಸ್‌ ಕಂಪನಿಯ ಹೀಲೀಕ್ಸ್‌ ಡಿಪಾರ್ಟ್‌ಮೆಂಟ್‌ನಲ್ಲಿ ಸೀನಿಯರ್‌ ಅಸೋಸಿಯೇಟ್‌ ಕನ್ಸಲ್ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದಾನೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X