ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

Date:

Advertisements

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು ಸಾಬೀತಾದರೆ, ಕೆಲಸದಿಂದಲೇ ವಜಾ ಮಾಡಲಾಗುತ್ತದೆ. ಚಾಲನೆ ವೇಳೆ ಫೋನ್‌ನಲ್ಲಿ ಮಾತನಾಡಿದರೆ, ಕೆಲಸದಿಂದ ಅಮಾನತು ಮಾಡಲಾಗುತ್ತದೆ. ಈ ಹೊಸ ನಿಯಮ ಇಂದಿನಿಂದಲೇ ಜಾರಿಯಾಗಲಿದೆ ಎಂದು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕ ಪ್ರಭಾಕರ್ ರೆಡ್ಡಿ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲ ಸಲ ಅಪಘಾತವೆಸಗಿದರೆ 6 ತಿಂಗಳು ಅಮಾನತು ಮಾಡುತ್ತೇವೆ. ಅಮಾನತು ಅವಧಿ ಮುಗಿದ ಮೇಲೆ ತರಬೇತಿ ನೀಡಿ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುತ್ತೇವೆ. ಮೊದಲ ಸಲ ಅಪಘಾತವೆಸಗಿದ ಚಾಲಕರಿಗೆ ಮೂರು ಇಂಕ್ರಿಮೆಂಟ್ ಕಡಿತಗೊಳಿಸಲಾಗುತ್ತದೆ. ಎರಡನೇ ಸಲ ಅಪಘಾತವೆಸಗಿದರೆ ಬಿಎಂಟಿಸಿ ಸಂಸ್ಥೆಯಿಂದಲೇ ವಜಾ ಮಾಡಲಾಗುತ್ತದೆ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹೇಶ್‌ ಶೆಟ್ಟಿ ತಿಮರೋಡಿ ಬಂಧನ; ಜನರ ಪ್ರಶ್ನೆಗಳಿಗೆ ಸರ್ಕಾರದ ಉತ್ತರ ಏನು?

Advertisements

ಎಲೆಕ್ಟ್ರಿಕ್ ಬಸ್ ಚಾಲಕರು ಚಾಲನೆ ವೇಳೆ ಫೋನ್​ನಲ್ಲಿ ಮಾತಾಡಿದರೆ, ಬಸ್ ಚಾಲಕನಿಗೆ 5 ಸಾವಿರ ರೂಪಾಯಿ ದಂಡ, 15 ದಿನಗಳ ಕಾಲ ಅಮಾನತು ಮಾಡಲಾಗುತ್ತದೆ. ಸೋಮವಾರದಿಂದ ಬಿಎಂಟಿಸಿ ಚಾಲಕರಿಗೆ ವಿಶೇಷ ತರಬೇತಿ ನೀಡಲಾಗುತ್ತದೆ. ಜೊತೆಗೆ ಯೋಗ ತರಬೇತಿಯನ್ನೂ ನೀಡಲಾಗುತ್ತದೆ.

ಬೆಂಗಳೂರು ಮಹಾನಗರವು ಅಧಿಕ ಸಂಚಾರ ದಟ್ಟಣೆಯಿಂದ ಕೂಡಿದ್ದು, ಲಕ್ಷಾಂತರ ಜನರು ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುತ್ತಿದ್ದು, ಸದರಿ ಪ್ರಯಾಣಿಕರ ಸುರಕ್ಷತೆಯ ಜೊತೆಗೆ ಸಹ ಸವಾರರು, ಸಾರ್ವಜನಿಕರ ಸುರಕ್ಷತೆಯು ಸಂಸ್ಥೆಯ ಆದ್ಯ ಕರ್ತವ್ಯವಾಗಿರುತ್ತದೆ. ಬೆಂಗಳೂರು ಮಹಾನಗರದಲ್ಲಿ ಈಗಾಗಲೇ ಮಳೆಗಾಲ ಆರಂಭವಾಗಿದ್ದು, ರಸ್ತೆಗಳಲ್ಲಿ ನೀರು ನಿಲ್ಲುವುದು, ರಸ್ತೆ ಗುಂಡಿಗಳು ದುರಸ್ಥಿ ಹಾಗೂ ಇನ್ನಿತರ ಕಾರಣಗಳಿಂದ ಸಂಸ್ಥೆಯ ವಾಹನಗಳಿಂದ, ಸಂಭವಿಸುವ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.

ಸದರಿ ಅಪಘಾತಗಳಲ್ಲಿ ದ್ವಿಚಕ್ರ ವಾಹನ ಸವಾರ, ಪಾದಚಾರಿ ಹಾಗೂ ಬಸ್ಸಿಗೆ ಹತ್ತುವ-ಇಳಿಯುವ ಪ್ರಯಾಣಿಕರು ಭಾಗಿಯಾಗಿರುವುದು ಕಂಡುಬಂದಿರುತ್ತದೆ. ಆದುದರಿಂದ, ವಿಭಾಗೀಯ ನಿಯಂತ್ರಣಾಧಿಕಾರಿಗಳು, ವಿಭಾಗೀಯ ಸಂಚಾರ ಅಧಿಕಾರಿಗಳು, ಘಟಕ ವ್ಯವಸ್ಥಾಪಕರು ಘಟಕಗಳಲ್ಲಿ ದ್ವಾರ ಸಭೆಯ ಮೂಲಕ ಪ್ರತಿ ದಿನ ಬೆಳಿಗ್ಗೆ, ಮಧ್ಯಾಹ್ನ, ಸಾಯಂಕಾಲ ಚಾಲನಾ ಸಿಬ್ಬಂದಿಗಳಿಗೆ ಸುರಕ್ಷಿತ ಚಾಲನೆಗೆ ಸಂಬಂಧಿಸಿದಂತೆ, ಈ ಕೆಳಕಂಡ ಅಂಶಗಳ ಕುರಿತು ಅರಿವು ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳುವುದು.

ಚಾಲಕರಿಗೆ ನೀಡಲಾಗಿರುವ ಮಾರ್ಗಸೂಚಿಗಳು:

ವಾಹನಗಳ ನಡುವೆ ಸುರಕ್ಷಿತ ಅಂತರ ಕಾಯ್ದುಕೊಳ್ಳಿ

ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಬೇಕು.

ಸಂಚಾರ ನಿಯಮಗಳ ಉಲ್ಲಂಘನೆಯಿಂದ ಉಂಟಾಗುವ ಅನಾನುಕೂಲಗಳ ಬಗ್ಗೆ ಗಮನವಿರಲಿ.

ವಾಹನದ ಬ್ರೇಕ್, ಹೆಡ್‌ಲೈಟ್, ವೈಪರ್‌ಗಳು ಸುಸ್ಥಿತಿಯಲ್ಲಿರುವಂತೆ ಕ್ರಮವಹಿಸಬೇಕು.

ರಸ್ತೆಯಲ್ಲಿರುವ ರಸ್ತೆ ಉಬ್ಬುಗಳನ್ನು ಹಾಗೂ ರಸ್ತೆ ಗುಂಡಿಗಳನ್ನು ಗಮನಿಸಿ ಸುರಕ್ಷಿತವಾಗಿ ಚಾಲನೆ ಮಾಡಬೇಕು.

ಇಳಿಜಾರು, ರಸ್ತೆ ತಿರುವುಗಳಲ್ಲಿ ಎಚ್ಚರಿಕೆಯಿಂದ ಬ್ರೇಕ್, ಇಂಡಿಕೇಟರ್ ಹಾಗೂ ಪಾರ್ಕಿಂಗ್ ಲೈಟ್‌ಗಳ ಉಪಯೋಗ ಮಾಡಬೇಕು.

ರಾತ್ರಿ ವೇಳೆಯಲ್ಲಿ ಸೂಕ್ತ ಎಚ್ಚರಿಕೆ ಸಂಜ್ಞೆಗಳಿಲ್ಲದೆ ನಿಂತ ವಾಹನಗಳ ಬಗ್ಗೆ ಎಚ್ಚರಿಕೆ ವಹಿಸಬೇಕು.

ಕರ್ತವ್ಯನಿರತ ಸಮಯದಲ್ಲಿ ಚಾಲನಾ ಸಿಬ್ಬಂದಿಗಳು ಮೊಬೈಲ್ ಬಳಸಬಾರದು .

ಬಸ್ ನಿಲ್ದಾಣಗಳಲ್ಲಿ ಬಾಗಿಲು ತೆರೆದು ಚಲಿಸುತ್ತಿರುವ ಬಸ್‌ನ್ನು ಪ್ರಯಾಣಿಕರು ಇಳಿಯಲು/ಹತ್ತಲು ಪ್ರಯತ್ನಿಸಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಹಿಂದಿನ ಚಕ್ರಕ್ಕೆ ಸಿಲುಕಿ ಅಪಘಾತವಾಗಿರುವ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿದೆ.

ನಿಗದಿತ ಬಸ್ ನಿಲ್ದಾಣಗಳಲ್ಲಿ ಬಸ್‌ನ್ನು ನಿಲ್ಲಿಸಿ, ಪ್ರಯಾಣಿಕರನ್ನು ಇಳಿಸಿ ಬಸ್​ ಹತ್ತಿಸಿಕೊಂಡು ಬಾಗಿಲು ಮುಚ್ಚಿದ ನಂತರವೇ ವಾಹನವನ್ನು ಚಾಲನೆ ಮಾಡಬೇಕು.

ವಾಹನವನ್ನು ರಸ್ತೆಯ ಮಧ್ಯದಲ್ಲಿ ಟ್ರಾಫಿಕ್ ಸಿಗ್ನಲ್​ನಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿ ಹತ್ತಿಸಿಕೊಳ್ಳುವುದನ್ನು ನಿಷೇಧಿಸಿದ್ದು, ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕು.

ಶಾಲೆ, ಆಸ್ಪತ್ರೆ, ತಿರುವು, ಏರು ರಸ್ತೆ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಎಚ್ಚರ ವಹಿಸಿ ಚಾಲನೆ ಮಾಡಬೇಕು.

ಬಸ್ಸನ್ನು ಎಡಕ್ಕೆ-ಬಲಕ್ಕೆ ತಿರುಗಿಸುವಾಗ ಅಥವಾ ನಿಲ್ಲಿಸುವಾಗ ಎರಡೂ ಕಡೆಯ ಸೈಡ್ ಮಿರರ್ ಅನ್ನು ಗಮನಿಸಿ ಎಚ್ಚರಿಕೆಯಿಂದ ವಾಹನವನ್ನು ಚಾಲನೆ ಮಾಡಬೇಕು.

ವಾಹನಗಳ ಎಡಭಾಗದಿಂದ ಮುನ್ನುಗ್ಗಬಾರದು.

ಬಲ ಭಾಗದಲ್ಲಿ ವೇಗವಾಗಿ ಚಲಿಸುವ ವಾಹನಗಳಿಗೆ ದಾರಿ ಬಿಡಬೇಕು.

ಪಥ ನಿಯಮ ಪಾಲಿಸಿ, ಏಕಮುಖ ಸಂಚಾರದ ರಸ್ತೆಯಲ್ಲಿ ಸುರಕ್ಷತೆಯಿಂದ ಚಾಲನೆ ಮಾಡಬೇಕು.

ಮಳೆ, ಗಾಳಿ ಸಮಯದಲ್ಲಿ ವಾಹನವನ್ನು ನಿಗದಿತ ವೇಗದಲ್ಲಿ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು.

ಬಸ್ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಸಿಬ್ಬಂದಿಗಳು ಬಸ್ ನಿಂತ ನಂತರ, ಬಾಗಿಲು ತೆರೆದು ಹಾಗೂ ಹೊರಟ ನಂತರ ಬಾಗಿಲು ಮುಚ್ಚುವುದನ್ನು ಮೇಲ್ವಿಚಾರಣೆ ಮಾಡಬೇಕು.

ಬಸ್ ನಿಲ್ದಾಣದ ತಿರುವುಗಳಲ್ಲಿ ಸಂಚರಿಸುವ ಪಾದಚಾರಿ ಪ್ರಯಾಣಿಕರನ್ನು ಗಮನಿಸಿ ಸಂಚರಿಸದಂತೆ ಅರಿವು ಮೂಡಿಸುವುದು.

ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಈ ಮೇಲಿನ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಚಾಲನಾ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X