ಗಲೀಜು ಬಟ್ಟೆ ಕಾರಣಕ್ಕೆ ರೈತನನ್ನು ಮೆಟ್ರೋಗೆ ಹತ್ತಲು ಬಿಡದ ಸಿಬ್ಬಂದಿ: ವಿಡಿಯೋ ವೈರಲ್ ಬಳಿಕ ಸೇವೆಯಿಂದ ವಜಾ

Date:

ಮೂಟೆ ಹೊತ್ತುಕೊಂಡು ರೈತನೋರ್ವ ಮೆಟ್ರೋ ರೈಲಿಗೆ ಹತ್ತುವಾಗ ಮೆಟ್ರೋ ಸಿಬ್ಬಂದಿ ಗಲೀಜು ಬಟ್ಟೆ ಹಾಕಿದ್ದಾನೆ ಎಂದು ಅವರನ್ನು ಒಳಗೆ ಬಿಡದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇದೀಗ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು, ಸಿಬ್ಬಂದಿಯನ್ನು ಸೇವೆಯಿಂದಲೇ ವಜಾಗೊಳಿಸಿದ್ದಾರೆ.

ತಲೆ ಮೇಲೆ ಮೂಟೆ ಹೊತ್ತು, ಗಲೀಜು ಬಟ್ಟೆ ಹಾಕಿದ್ದಾನೆ ಅನ್ನುವ ಒಂದೇ ಕಾರಣಕ್ಕೆ ರೈತನನ್ನು ನಮ್ಮ ಮೆಟ್ರೋ ಸಿಬ್ಬಂದಿ ಒಳಗೆ ಬಿಟ್ಟಿರಲಿಲ್ಲ. ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಫೆ.24ರಂದು ಈ ಘಟನೆ ನಡೆದಿದೆ.

ಹಿಂದಿ ಭಾಷೆಯನ್ನಾಡುವ ರೈತನೊಬ್ಬ ಬೆಂಗಳೂರಿನ ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಟಿಕೆಟ್ ಪಡೆದು ಮೆಟ್ರೋದಲ್ಲಿ ಪ್ರಯಾಣಿಸಲು ಮುಂದಾಗಿದ್ದಾರೆ. ಈ ವೇಳೆ ಲಗೇಜ್ ಪರಿಶೀಲನೆ ಮಾಡುವ ಸಿಬ್ಬಂದಿ ರೈತನನ್ನು ತಡೆದಿದ್ದಾರೆ. ಗಲೀಜು ಬಟ್ಟೆ ಹಾಕಿದ್ದೀರಾ, ತಲೆ ಮೇಲೆ ಮೂಟೆ ಇದೆ ಎಂದು ಹೇಳಿ ರೈತನನ್ನ ಮೆಟ್ರೋದಲ್ಲಿ ಪ್ರಯಾಣಿಸಲು ಅನುಮತಿ ಕೊಟ್ಟಿಲ್ಲ ಎನ್ನುವ ವಿಡಿಯೋ ವೈರಲ್ ಆಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಿಬ್ಬಂದಿಯ ಈ ನಡೆಗೆ ಭಾರೀ ಆಕ್ರೋಶ ವ್ಯಕ್ತಪಡಿಸಿದ ಸ್ಥಳದಲ್ಲಿದ್ದ ಕಾರ್ತಿಕ್ ಸಿ ಐರಾನಿ ಎಂಬ ಯುವಕ, ಇದನ್ನು ಪ್ರಶ್ನಿಸಿದ್ದಾನೆ.

“ಗಲೀಜು ಬಟ್ಟೆಗೆ ಹಾಕಿದರೆ ಮೆಟ್ರೋದಲ್ಲಿ ಪ್ರವೇಶಿಸುವಂತಿಲ್ಲ ಏನಾದರೂ ಬೋರ್ಡ್‌ ಇದೆಯೇ?ಇದು ಸಾರ್ವಜನಿಕ ಸಾರಿಗೆ. ಇದು ವಿಐಪಿಗಳ ಸಾರಿಗೆ ಅಲ್ಲ. ನಾನು ಚೆನ್ನಾಗಿರುವ ಬಟ್ಟೆ ಹಾಕಿದ್ದೇನೆ. ನನಗೆ ಉಚಿತ ಪ್ರವೇಶ ನೀಡುತ್ತೀರಾ?” ಎಂದು ಕಾರ್ತಿಕ್ ಸ್ಥಳದಲ್ಲಿದ್ದ ಸಿಬ್ಬಂದಿಯನ್ನು ಪ್ರಶ್ನಿಸಿದ್ದಾರೆ.

ಈ ವೇಳೆ ಅಲ್ಲೇ ಇದ್ದ ಇನ್ನೋರ್ವ ಯುವಕ ಕೂಡ ಧ್ವನಿಗೂಡಿಸಿದ್ದರಿಂದ ಸಿಬ್ಬಂದಿ ಮೌನವಾಗಿದ್ದಾರೆ. ಕೊನೆಗೂ ಯುವಕ ಕಾರ್ತಿಕ್ ಆ ರೈತನನ್ನು ಕರೆದುಕೊಂಡು ಒಳಪ್ರವೇಶಿಸಿದ್ದಾರೆ. ಘಟನೆಯ ಎಲ್ಲವನ್ನೂ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿಕೊಂಡಿದ್ದರು. ಆ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು, ಮೆಟ್ರೋ ಸಿಬ್ಬಂದಿಗಳ ವರ್ತನೆಗೆ ಕಿಡಿಕಾರಿದ್ದರು. ರೈತ ರಾಜಾಜಿನಗರದಿಂದ ಯಾವ ಸ್ಟೇಷನ್‌ಗೆ ಪ್ರಯಾಣಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿಲ್ಲ.

ಈ ವಿಡಿಯೋ ವೈರಲಾದ ಬಳಿಕ ಎಚ್ಚೆತ್ತುಕೊಂಡ ಬಿಎಂಆರ್‌ಸಿಎಲ್ ಅಧಿಕಾರಿಗಳು, “ನಮ್ಮ ಮೆಟ್ರೋ ಸಾರ್ವಜನಿಕ ಸಾರಿಗೆಯಾಗಿದ್ದು, ರಾಜಾಜಿನಗರ ಘಟನೆಯ ಕುರಿತು ತನಿಖೆ ನಡೆಸಿ , ಭದ್ರತಾ ಮೇಲ್ವಿಚಾರಕರ ಸೇವೆಯನ್ನು ವಜಾಗೊಳಿಸಲಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಿಗಮವು ವಿಷಾದಿಸುತ್ತದೆ” ಎಂದು ಸೋಮವಾರ(ಫೆ.26) ಅಧಿಕೃತ ಹೇಳಿಕೆ ನೀಡಿದೆ.

“ಮೆಟ್ರೋ ಒಳಗೆ ರೈತನನ್ನು ಬಿಡದ ಭದ್ರತಾ ಮೇಲ್ವಿಚಾರಕನನ್ನು ಕೂಡಲೇ ವಜಾಗೊಳಿಸಲಾಗಿದೆ. ಈ ಘಟನೆಯ ಕುರಿತು ತನಿಖೆ ನಡೆಸಲಾಗುವುದು” ಎಂದು ಮೆಟ್ರೋ ಹಿರಿಯ ಅಧಿಕಾರಿ ಯಶವಂತ ಚವ್ಹಾಣ್ ಭರವಸೆ ನೀಡಿದ್ದಾರೆ.

ಯುವಕ ಕಾರ್ತಿಕ್ ನಡೆಗೆ ವ್ಯಾಪಕ ಪ್ರಶಂಸೆ

ಸಿಬ್ಬಂದಿಗಳ ಈ ನಡೆಯ ವಿರುದ್ಧ ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲೇ ಸುಮಾರು 15 ನಿಮಿಷ ನಿಂತು ಪ್ರಶ್ನಿಸಿ, ರೈತನನ್ನು ಮೆಟ್ರೋದಲ್ಲಿ ಪ್ರಯಾಣ ಮಾಡುವಂತೆ ನೆರವಾದ ಯುವಕ ಕಾರ್ತಿಕ್ ನಡೆಗೆ, ನೆಟ್ಟಿಗರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಈ ಬಗ್ಗೆ ಹಲವು ಮಂದಿ ಕಮೆಂಟ್ ಮಾಡಿದ್ದು, ತನ್ನೆದುರು ನಡೆದ ಅನ್ಯಾಯವನ್ನು ಪ್ರಶ್ನಿಸಿ, “ರೈತನ ಪರವಾಗಿ ನಿಂತಿದ್ದು ಸರಿಯಾದ ನಡೆ. ಸಾರ್ವಜನಿಕ ಸಾರಿಗೆ ಅನ್ನೋದನ್ನು ಸಿಬ್ಬಂದಿಗಳಿಗೆ ಬಿಎಂಆರ್‌ಸಿಎಲ್ ಅಧಿಕಾರಿಗಳು ಸರಿಯಾದ ತರಬೇತಿ ನೀಡಬೇಕು. ಆಗ ಮಾತ್ರ ಇಂಥದ್ದನ್ನೆಲ್ಲ ತಡೆಯಬಹುದು” ಎಂದು ತಿಳಿಸಿದ್ದಾರೆ.

“ಸಿಬ್ಬಂದಿಯನ್ನು ವಜಾಗೊಳಿಸುವುದರಿಂದ ನೀವು ಸಾಧಿಸುವುದು ಏನಿಲ್ಲ. ಆತನಿಗೂ ಹೆಂಡತಿ ಮಕ್ಕಳಿರುತ್ತಾರೆ. ಒಬ್ಬರ ಅನ್ನ ಕಿತ್ತುಕೊಳ್ಳುವುದೂ ಕೂಡ ತಪ್ಪೇ. ನಡೆದ ಘಟನೆ ಯ ಬಗ್ಗೆ ತನಿಖೆ ನಡೆಸಿ, ಸಿಬ್ಬಂದಿಗಳಲ್ಲಿ ಜಾಗೃತಿ ಮೂಡಿಸಿ, ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಿ. ತಪ್ಪು ತಿದ್ದಿಕೊಳ್ಳಲು ಒಂದು ಅವಕಾಶ ಕೊಡಿ” ಎಂದು ಕೂಡ ಕೆಲವರು ಸಿಬ್ಬಂದಿಯನ್ನು ನಡೆಯನ್ನು ಖಂಡಿಸುವುದರ ಜೊತೆಗೆ ಜಾಗೃತಿ ಮೂಡಿಸುವಂತೆ ಚೈತ್ರಾ ದೇವರಾಜ್ ಎಂಬುವವರು ಮೆಟ್ರೋ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ...

ಲೋಕಸಭಾ ಚುನಾವಣೆ | ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಲೋಕಸಭಾ ಚುನಾವಣೆ ಹಿನ್ನೆಲೆ, ಏ.26 ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...

ಬೆಂಗಳೂರು | ಕೆಎಂಎಫ್ ಹೊಸ ದಾಖಲೆ​; ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ

ವು(ಕೆಎಂಎಫ್‌) ನಂದಿನಿ ಬ್ರ್ಯಾಂಡ್​ ಉತ್ಪನ್ನಗಳ ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ...