ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್‌ ಶುಲ್ಕ ವಸೂಲಿಗೆ ಆಕ್ರೋಶ: ಸಿಎಂ ಕಚೇರಿಗೆ ದೂರು

Date:

Advertisements

ನಗರದ ಕೆಲ ಮೆಟ್ರೋ ನಿಲ್ದಾಣಗಳಲ್ಲಿ ವಾಹನ ಸವಾರರಿಂದ ಹೆಚ್ಚುವರಿ ಪಾರ್ಕಿಂಗ್‌ ಶುಲ್ಕ ವಸೂಲು ಮಾಡಲಾಗುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ಬಗ್ಗೆ ಸಿಎಂ ಕಚೇರಿಗೆ ಪ್ರಯಾಣಿಕರೊಬ್ಬರು ದೂರು ನೀಡಿದ್ದಾರೆ.

ಈ ಸಂಬಂಧ ಮೆಟ್ರೋ ಪ್ರಯಾಣಿಕ ಸುಜಯ್‌ ಸುರೇಶ್‌ ಸೇಠ್‌ ಎಂಬುವವರು ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕೊಂದು ಕೊರತೆ ವಿಭಾಗಕ್ಕೆ ದೂರು ನೀಡಿದ್ದಾರೆ.

ನವೆಂಬರ್‌ 1 ರಂದು ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಪಾರ್ಕಿಂಗ್‌ನಲ್ಲಿ ನಾನು 5 ಗಂಟೆ ಕಾರು ನಿಲ್ಲಿಸಿದ್ದೆ. ಅಲ್ಲಿ ಪಾರ್ಕಿಂಗ್‌ ಶುಲ್ಕ ವಸೂಲು ಮಾಡುತ್ತಿದ್ದ ವ್ಯಕ್ತಿ, 40 ರೂ. ಬದಲಾಗಿ 150 ರೂ. ನೀಡುವಂತೆ ಒತ್ತಾಯಿಸಿ ಪಡೆದ. ಇಂತಹವರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿಆಗ್ರಹಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಶ್ರೀಲಂಕಾ ಕ್ರಿಕೆಟ್ ಮಂಡಳಿ ಹಾಳಾಗಲು ಜಯ್ ಶಾ ಕಾರಣ:ಅರ್ಜುನ್ ರಣತುಂಗ

ಕೆಲ ದಿನಗಳ ಹಿಂದೆ ಪ್ರಯಾಣಿಕರೊಬ್ಬರು ಕೆಂಪೇಗೌಡ ಇಂಟರ್‌ ಜೇಂಜ್‌ ಮೆಟ್ರೋ ನಿಲ್ದಾಣದಲ್ಲಿ ಪಾರ್ಕಿಂಗ್‌ನಲ್ಲಿ ಬೈಕ್‌ ನಿಲ್ಲಿಸಿದ್ದು, ವಾಪಸ್‌ ತೆಗೆದುಕೊಳ್ಳಲು ಹೋದಾಗ ಶುಲ್ಕ ಸಂಗ್ರಹಕಾರ 20 ರೂ. ನೀಡುವಂತೆ ಕೇಳಿದ್ದಾರೆ. ಅದಕ್ಕೆ ಬೈಕ್‌ ಮಾಲೀಕರು, ”ಎರಡು ಗಂಟೆಗಳ ಬೈಕ್‌ ನಿಲುಗಡೆ 20 ರೂ. ಹೇಗಾಗುತ್ತದೆ,” ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಸಿಬ್ಬಂದಿ ಎರಡು ಗಂಟೆಗೆ 20 ರೂ, ನಂತರದ ಪ್ರತಿ ಗಂಟೆಗೆ ಹೆಚ್ಚುವರಿ ಶುಲ್ಕ ಇರುತ್ತದೆ,” ಎಂದು ಉತ್ತರಿಸಿದ್ದಾನೆ.

ನಿಗದಿತ ಪಾರ್ಕಿಂಗ್‌ ಶುಲ್ಕ ಎಷ್ಟು?

ದ್ವಿಚಕ್ರ ವಾಹನಗಳಿಗೆ ಮೊದಲ 4 ಗಂಟೆಗಳ ಅವಧಿಗೆ 15 ರೂ. ನಂತರ ಪ್ರತಿ ಗಂಟೆಗೆ ಹೆಚ್ಚುವರಿ 5 ರೂ.aನ್ನು ಪಾರ್ಕಿಂಗ್‌ಗೆ ಬಿಎಂಆರ್‌ಸಿಎಲ್‌ ನಿಗದಿ ಮಾಡಿದೆ. ಇಡೀ ದಿನ ದ್ವಿಚಕ್ರ ವಾಹನ ನಿಲುಗಡೆಗೆ ಗರಿಷ್ಠ 30ರೂ. ಸಂಗ್ರಹಿಸಬಹುದಾಗಿದೆ. ಕಾರುಗಳಿಗೆ ಮೊದಲ 4 ಗಂಟೆಗಳಿಗೆ 30 ರೂ. ಶುಲ್ಕ ಮತ್ತು ನಂತರದ ಪ್ರತಿ ಗಂಟೆಗೆ ಹೆಚ್ಚುವರಿ 10 ರೂ. ನಿಗದಿ ಮಾಡಿದ್ದು, ಇಡೀ ದಿನದ ನಿಲುಗಡೆಗೆ ಗರಿಷ್ಠ 60 ರೂ. ಆಗಬಹುದು. ಆದರೆ, ಪಾರ್ಕಿಂಗ್‌ ನಿರ್ವಾಹಕರು ಮತ್ತು ಸಿಬ್ಬಂದಿ ನಿಗದಿಗಿಂತ ಹೆಚ್ಚುವರಿ ಶುಲ್ಕವನ್ನು ವಸೂಲಿ ಮಾಡುತ್ತಿದ್ದಾರೆ.

33 ನಿಲ್ದಾಣಗಳಲ್ಲಿ ಪಾರ್ಕಿಂಗ್‌ ವ್ಯವಸ್ಥೆ

ಬಿಎಂಆರ್‌ಸಿಎಲ್‌ ವೆಬ್‌ಸೈಟ್‌ ಪ್ರಕಾರ, ಕಾರ್ಯಾಚರಣೆಯಲ್ಲಿರುವ 66 ಮೆಟ್ರೋ ನಿಲ್ದಾಣಗಳ ಪೈಕಿ 33 ನಿಲ್ದಾಣಗಳಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಇದ್ದು, 11,496 ದ್ವಿಚಕ್ರವಾಹನ ಮತ್ತು 1724 ಕಾರುಗಳಿಗೆ ಪಾರ್ಕಿಂಗ್‌ ಸೇವೆ ಒದಗಿಸಲಾಗುತ್ತಿದೆ. ಇನ್ನು ಪಾರ್ಕಿಂಗ್‌ ಶುಲ್ಕದಿಂದ ಬಿಎಂಆರ್‌ಸಿಎಲ್‌ ಪ್ರತಿ ವರ್ಷ 6 ಕೋಟಿ ರೂ. ಆದಾಯ ಗಳಿಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X