ಇಸ್ಲಾಂ ಧರ್ಮ ಹಿಂಸೆಯನ್ನು ಬಿತ್ತುತ್ತದೆ ಎನ್ನುವುದೇ ಶುದ್ಧ ಸುಳ್ಳು: ಚಿರಂಜೀವಿ ಸಿಂಘ್

Date:

Advertisements
  • ಯೋಗೇಶ್ ಮಾಸ್ಟರ್ ಅವರ ‘ನನ್ನ ಅರಿವಿನ ಪ್ರವಾದಿ’ ಪುಸ್ತಕ ಬಿಡುಗಡೆ ಕಾರ್ಯಕ್ರಮ
  • ಬೆಂಗಳೂರಿನ ಬಿಫ್ಟ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಅಭಿಪ್ರಾಯ

ಇಸ್ಲಾಂ ಎಂದರೆ ಹಿಂಸೆ ಬಿತ್ತುವ ಧರ್ಮ ಎನ್ನುವುದು ಜಗತ್ತಿನಾದ್ಯಂತ ಇರುವ ಶುದ್ಧ ಸುಳ್ಳು. ಅದನ್ನು ಹೋಗಲಾಡಿಸಿ, ಶಾಂತಿಯ ಧರ್ಮ ಎನ್ನುವ ಸತ್ಯದ ದರ್ಶನವನ್ನು ‘ನನ್ನ ಅರಿವಿನ ಪ್ರವಾದಿ’ ಪುಸ್ತಕ ಮಾಡಿಸುತ್ತದೆ ಎಂದು ನಿವೃತ್ತ ಐಎಎಸ್‌ ಅಧಿಕಾರಿ ಚಿರಂಜೀವಿ ಸಿಂಘ್ ಹೇಳಿದರು.

ಮಂಗಳೂರಿನ ಶಾಂತಿ ಪ್ರಕಾಶನ ಗುರುವಾರ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಬಿಫ್ಟ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಯೋಗೀಶ್‌ ಮಾಸ್ಟರ್‌ ಅವರ ‘ನನ್ನ ಅರಿವಿನ ಪ್ರವಾದಿ’ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.

FB IMG 1695944556016

ಬಸವ ತತ್ವಕ್ಕೂ ಕುರಾನಿಗೂ ಸಾಕಷ್ಟು ಹೋಲಿಕೆ ಇದೆ. ಎರಡೂ ಧರ್ಮಗಳ ಸಾರವೂ ಒಂದೇ ಆಗಿದೆ. ಯೋಗೀಶ್‌ ಮಾಸ್ಟರ್‌ ಅವರ ಪುಸ್ತಕ ಪೈಗಂಬರ್‌ ಅವರ ಅನುಭವದ ಕಥನವಾಗಿದೆ. ಎಲ್ಲ ಧರ್ಮಗಳನ್ನೂ ಗೌರವಿಸುವ, ಸ್ಮರಿಸುವ ಧ್ಯೇಯಗಳನ್ನು ಒಳಗೊಂಡಿದೆ. ಸರ್ವ ಜನಾಂಗದ ಶಾಂತಿಯ ತೋಟದ ಪರಿಕಲ್ಪನೆ ಕಟ್ಟಿಕೊಟ್ಟಿದೆ. ಓದುವ ಅಭ್ಯಾಸ ಕಡಿಮೆಯಾಗುತ್ತಿರುವ ಈ ದಿನಗಳಲ್ಲಿ ಪುಸ್ತಕವನ್ನು ಡಿಜಿಟಲ್‌ ಆವೃತ್ತಿಗಳ ಮೂಲಕವೂ ಜನರಿಗೆ ತಲುಪಿಸುವ ಕೆಲಸ ಆಗಬೇಕು ಎಂದರು.

Advertisements

ಲೇಖಕಿ ವಸುಂಧರಾ ಭೂಪತಿ ಮಾತನಾಡಿ, ಉತ್ತಮ ನಡೆಯ ಮೂಲಕ ಅಪ್ಪಂದಿರು ಮಕ್ಕಳನ್ನು ತಿದ್ದಬೇಕು. ಸ್ನೇಹಿತರಂತೆ ಕಾಣಬೇಕು. ತ್ಯಾಗ ಸೌಹಾರ್ದ ಕಲಿಸಬೇಕು. ಮಕ್ಕಳ ಸುಳ್ಳುಗಳನ್ನು ಕ್ಷಮಿಸಬೇಕು. ಅಂತಹ ಮಕ್ಕಳು ಸಮಾಜಕ್ಕೆ ಉತ್ತಮ ಪ್ರಜೆಗಳಾಗುತ್ತಾರೆ ಎಂಬ ವಿವರಗಳನ್ನೂ ಪುಸ್ತಕ ದಾಖಲಿಸಿದೆ ಎಂದರು.

FB IMG 1695945428412

ಕೃತಿ ಕುರಿತು ‘ಸುಧಾ’ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರಘುನಾಥ ಚ.ಹ. ಮಾತನಾಡಿದರು.

ಜಮಾತೆ ಇಸ್ಲಾಮೀ ಹಿಂದ್‌ ಕಾರ್ಯದರ್ಶಿ, ಶಾಂತಿ ಪ್ರಕಾಶನ ಸಂಸ್ಥೆಯ ವ್ಯವಸ್ಥಾಪಕ ಮುಹಮ್ಮದ್ ಕುಂಞಿ, ಲೇಖಕ ಯೋಗೀಶ್‌ ಮಾಸ್ಟರ್‌ ಉಪಸ್ಥಿತರಿದ್ದರು.

ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯಾಧ್ಯಕ್ಷ ಮುಹಮ್ಮದ್‌ ಸಾದ್ ಬೆಳಗಾಮಿ ಅಧ್ಯಕ್ಷತೆ ವಹಿಸಿದ್ದರು.

FB IMG 1695945386382
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X