ಒಂದೇ ಮಳೆಗೆ ಹೊಂಡವಾದ ನಲ್ಲೂರಳ್ಳಿ ಮೆಟ್ರೋ ನಿಲ್ದಾಣ

Date:

  • ಅವೈಜ್ಞಾನಿಕ ಕಾಮಗಾರಿಯಲ್ಲ ಎಂದ ಅಧಿಕಾರಿಗಳು
  • ಮಳೆಯ ನೀರು ಹೊರಗೆ ಚೆಲ್ಲಲು ಸಿಬ್ಬಂದಿ ಹರಸಾಹಸ

ಕಾಮಗಾರಿ ಪೂರ್ಣವಾಗದಿದ್ದರೂ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಂದ ತರಾತುರಿಯಲ್ಲಿ ಉದ್ಘಾಟನೆಯಾದ ವೈಟ್ ಫೀಲ್ಡ್ ಹಾಗೂ ಕೆ ಆರ್ ಪುರಂ ಮಾರ್ಗದ ನಲ್ಲೂರಳ್ಳಿ ಮೆಟ್ರೋ ನಿಲ್ದಾಣದಲ್ಲಿ ಅವೈಜ್ಞಾನಿಕ ಕಾಮಗಾರಿ ಬೆಳಕಿಗೆ ಬಂದಿದೆ.

ಮಾರ್ಚ್‌ 25ರಂದು ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆಯಾಗಿದ್ದ ನೇರಳೆ ಮಾರ್ಗದ ನಲ್ಲೂರಳ್ಳಿ ಮೆಟ್ರೋ ನಿಲ್ದಾಣದಲ್ಲಿ ಏ.3ರ ರಾತ್ರಿ ಸುರಿದ ಮಳೆಗೆ, ಟಿಕೆಟ್‌ ನೀಡುವ ಸ್ಥಳ ಮತ್ತು ರೈಲಿಗಾಗಿ ಪ್ರಯಾಣಿಕರು ಕಾಯುವ ಸ್ಥಳದಲ್ಲಿ ನೀರು ತುಂಬಿಕೊಂಡಿತ್ತು. ಇದರಿಂದ ಪ್ರಯಾಣಿಕರು ಭಾರೀ ಸಮಸ್ಯೆ ಅನುಭವಿಸಬೇಕಾಯಿತು.

ನಲ್ಲೂರಳ್ಳಿ ಮೆಟ್ರೋ ನಿಲ್ದಾಣದ ಅವ್ಯವಸ್ಥೆಯ ಫೋಟೊ ಮತ್ತು ವಿಡಿಯೋಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ನೆಟ್ಟಿಗರು, ಮೆಟ್ರೋ ನಿಲ್ದಾಣದ ಅವೈಜ್ಞಾನಿಕ ಕಾಮಗಾರಿಯ ಬಗ್ಗೆ ವ್ಯಾಪಕ ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆ ಗೀಳಿಗಾಗಿ ಇನ್ನೂ ಕಾಮಗಾರಿಯೇ ಪೂರ್ಣವಾಗದ ಮೆಟ್ರೋ ಮಾರ್ಗವನ್ನು ಉದ್ಘಾಟನೆ ಮಾಡಲಾಗಿದೆ ಎಂದು ಟೀಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ನೀತಿ ಸಂಹಿತೆ ಜಾರಿಯಾದರೂ ರಾರಾಜಿಸುತ್ತಿವೆ ಫೋಟೊ-ಬ್ಯಾನರ್ ಗಳು: ದಂಡದ ಎಚ್ಚರಿಕೆ

ಕೆಲವು ದಿನಗಳ ಹಿಂದೆ ಕೆ ಆರ್‌ ಪುರಂ ಮೆಟ್ರೋ ಕಾಮಗಾರಿಯಿಂದ ಸಂಚಾರ ದಟ್ಟಣೆ ಹೆಚ್ಚಾಗಿತ್ತು. ಇದೀಗ ಮಳೆ ನೀರು ತುಂಬಿಕೊಂಡಿದೆ. ಅದಲ್ಲದೆ ಮೆಟ್ರೋ ರೈಲಿಗಾಗಿ ಕಾಯುವ ನಿಲ್ದಾಣದಲ್ಲಿ ನಿಲ್ಲಲು ಸಹ ವ್ಯವಸ್ಥಿತವಾದ ಜಾಗ ಇಲ್ಲ. ಅಲ್ಲಿಯೂ ಮಳೆ ಧಾರಕಾರವಾಗಿ ಸುರಿಯುತ್ತಿದೆ. ಇದು 40% ಸರ್ಕಾರದ ಭ್ರಷ್ಟಚಾರ ಎಂದು ನೆಟ್ಟಿಗರು ಲೇವಡಿ ಮಾಡಿದ್ದಾರೆ.

ಕಾಮಗಾರಿ ಅವೈಜ್ಞಾನಿಕವಾಗಿಲ್ಲ: ಸ್ಪಷ್ಟನೆ

ಈ ಕುರಿತು ಬಿಎಂಆರ್‌ಸಿಎಲ್‌ ನ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀವಾಸ್‌, ಈದಿನ.ಕಾಮ್‌ ಜೊತೆಗೆ ಮಾತನಾಡಿ, “ಇದು ಅವೈಜ್ಞಾನಿಕ ಕಾಮಗಾರಿಯಲ್ಲ. ಮಳೆ ಜೋರಾಗಿ ಬಂದಿರುವುದೇ ಇದಕ್ಕೆ ಕಾರಣ. ಮಳೆಯ ನೀರು ಹೊರಗಿನಿಂದ ಮೆಟ್ರೋ ನಿಲ್ದಾಣದ ಒಳಕ್ಕೆ ಹರಿದು ಬಂದಿದೆ. ಮಳೆ ನೀರನ್ನು ಹೊರಗೆ ಹಾಕಿ, ಈಗ ಅಲ್ಲಿ ಸ್ವಚ್ಛ ಮಾಡಲಾಗಿದೆ” ಎಂದು ಸ್ಪಷ್ಟನೆ ನೀಡಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಸಾಂಪ್ರದಾಯಿಕ ಗರಡಿ ಮನೆಗೆ ಹೂಡಿಕೆ ಮಾಡಿದ ಕ್ರಿಕೆಟಿಗ ಧೋನಿ

ಕ್ರಿಕೆಟ್‌ ಇತಿಹಾಸದಲ್ಲಿ ಶ್ರೇಷ್ಠ ನಾಯಕ ಎಂದೆನಿಸಿಕೊಂಡಿದ್ದ ಮಹೇಂದ್ರ ಸಿಂಗ್ ಧೋನಿ ಅವರು...

ಮಹಾಧರಣಿ | ದುಡಿವ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಿಎಂ ಸಭೆ: ಸಚಿವ ಕೃಷ್ಣ ಬೈರೇಗೌಡ

ಧರಣಿನಿರತರ ಹಕ್ಕೊತ್ತಾಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸಲು ಒಪ್ಪಿದ್ದಾರೆ. ಶೀಘ್ರದಲ್ಲೇ...

ಬೆಂಗಳೂರು | ನಕಲಿ ಟಿಕೆಟ್ ತೋರಿಸಿ ವಿಮಾನ ನಿಲ್ದಾಣದ ಟರ್ಮಿನಲ್ ಒಳಗೆ ಪ್ರವೇಶಿಸಿದ ಮಹಿಳೆ

ನಕಲಿ ಟಿಕೆಟ್ ತೋರಿಸಿ ವಿಮಾನ ನಿಲ್ದಾಣದ ಟರ್ಮಿನಲ್ ಒಳಗೆ ಪ್ರವೇಶ ಪಡೆದಿದ್ದ...

ಬೆಂಗಳೂರು ವಿಮಾನ ನಿಲ್ದಾಣದ ಭದ್ರತಾ ತಪಾಸಣೆಗೆ ನೂತನ ತಂತ್ರಜ್ಞಾನ ಅಳವಡಿಕೆ

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ...