ನೂತನ ಜವಳಿ ಹಾಗೂ ಸಿದ್ಧ ಉಡುಪು ನೀತಿ ಪರಿಷ್ಕರಣೆ, ಶೀಘ್ರವೇ ಅನುಷ್ಠಾನ: ಸಚಿವ ಶಿವಾನಂದ ಎಸ್

Date:

ಕೈಮಗ್ಗ ನೇಕಾರರು ಹಾಗೂ ಜವಳಿ ಕಾರ್ಖಾನೆಗಳಲ್ಲಿ ದುಡಿಯುತ್ತಿರುವ ಮಹಿಳಾ ಕಾರ್ಮಿಕರಿಗೆ 2ರಿಂದ 3 ಸಾವಿರ ರೂಪಾಯಿ ಪ್ರೋತ್ಸಾಹ ಧನ ಸೇರಿದಂತೆ ಇನ್ನಿತರ ಅಂಶಗಳನ್ನು ಒಳಗೊಂಡ ನೂತನ ಜವಳಿ ಹಾಗೂ ಸಿದ್ಧ ಉಡುಪು ನೀತಿಯನ್ನು ಪರಿಷ್ಕರಿಸಲಾಗಿದ್ದು, ಶೀಘ್ರದಲ್ಲಿ ಇದನ್ನು ಘೋಷಿಸಿ ಅನುಷ್ಠಾನಕ್ಕೆ ತರಲಾಗುವುದು ಎಂದು ಜವಳಿ ಸಚಿವ ಶಿವಾನಂದ ಎಸ್ ಪಾಟೀಲ್ ತಿಳಿಸಿದ್ದಾೆರ.

- Advertisement -

ವಿಧಾನ ಪರಿಷತ್​ನಲ್ಲಿ ಬಿಜೆಪಿ ಸದಸ್ಯ ಎಂ. ನಾಗರಾಜ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಈ ಹಿಂದಿನ ಮೂರು ಜವಳಿ ನೀತಿಗಳ ಸಾಧಕ-ಬಾಧಕಗಳ ಅಧ್ಯಯನ ಮಾಡಿ, ಎಲ್ಲರ ಸಲಹೆ ಸೂಚನೆಗಳನ್ನು ಪರಿಗಣಿಸಿ, 2025ರಿಂದ 2030ರವರೆಗೆ ಹೊಸ ಜವಳಿ ನೀತಿ ರೂಪಿಸಲಾಗಿದೆ. ಶೀಘ್ರದಲ್ಲಿ ಇದನ್ನು ಘೋಷಿಸಿ, ಕಾರ್ಯಾರೂಪಕ್ಕೆ ತರಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಜವಳಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಕಾರ್ಮಿಕರಿಗೆ ಹಾಗೂ ಕೈಮಗ್ಗ ನೇಕಾರರಿಗೆ 2ರಿಂದ 3 ಸಾವಿರ ಸಹಾಯಧನ ನೀಡಲಾಗುವುದು. ನೇಕಾರ ಸನ್ಮಾನ ಯೋಜನೆಯಡಿ ಕೊಡಲಾಗುತ್ತಿದ್ದ 2,500 ರೂ.ಗಳನ್ನು 5 ಸಾವಿರ ರೂ.ಗೆ ಏರಿಸಲಾಗಿದೆ. ಪರಿಷ್ಕೃತ ನೀತಿಯಲ್ಲಿ ಇನ್ನೂ ಹೆಚ್ಚಳ ಮಾಡಲಾಗುವುದು” ಎಂದು ಸಚಿವರು ಮಾಹಿತಿ ನೀಡಿದರು.

“ಮಹಾರಾಷ್ಟ್ರ ಹಾಗೂ ತಮಿಳುನಾಡು ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದ ಜವಳಿ ಕೈಗಾರಿಕೆಗಳಿಗೆ ಹೆಚ್ಚಿನ ಮಟ್ಟದಲ್ಲಿ ಸಬ್ಸಿಡಿ ನೀಡಲಾಗುತ್ತಿದೆ. 1ರಿದ 10 ಹೆಚ್.ಪಿ ವಿದ್ಯುತ್ ಸಂಪರ್ಕ ಪಡೆದ ವಿದ್ಯುತ್ ಮಗ್ಗಗಳಿಗೆ ಉಚಿತ ವಿದ್ಯುತ್ ಪೂರೈಸಲಾಗುತ್ತಿದೆ. 10 ಹೆಚ್.ಪಿಯಿಂದ 20 ಹೆಚ್​​.ಪಿ ವಿದ್ಯುತ್ ಮಗ್ಗಗಳಿಗೆ ಪ್ರತಿ ಯೂನಿಟ್‌ಗೆ ₹1.25 ಶುಲ್ಕ ವಿಧಿಸಿದರೆ, ಬೇರೆ ರಾಜ್ಯಗಳಲ್ಲಿ ಪ್ರತಿ ಯೂನಿಟ್​​​ಗೆ ₹5 ಇದೆ. 2019ರಿಂದ 2024ರವರೆಗೆ ₹954 ಕೋಟಿ ಸಬ್ಸಿಡಿ ನೀಡಲಾಗಿದೆ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಬ್ಯಾಂಕ್‌ ನೌಕರರ ಮುಷ್ಕರ

“2024-25ನೇ ಸಾಲಿನ ಬಜೆಟ್​​ನಲ್ಲಿ 2024ರಿಂದ 29ರ ಅವಧಿಯಲ್ಲಿ 10 ಸಾವಿರ ಕೋಟಿ ರೂ. ಬಂಡವಾಳ ಹೂಡಿ 2 ಲಕ್ಷ ಮಂದಿಗೆ ಉದ್ಯೋಗ ಸೃಷ್ಟಿಸುವುದಾಗಿ ತಿಳಿಸಲಾಗಿದೆ. ಇದಕ್ಕೆ ಪೂರಕವಾಗಿ ಹೊಸ ಜವಳಿ ನೀತಿಯನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ” ಎಂದು ಸಚಿವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಲೇಜಿಗೆ ಹೋದವಳು ಎಂಟು ತಿಂಗಳ ನಂತರ ಪತ್ತೆ: ಆಧಾರ್‌ ಒಟಿಪಿ ಆಧರಿಸಿ ರಹಸ್ಯ ಭೇದಿಸಿದ ಸಿಐಡಿ

ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿ, ಸುಮಾರು ಎಂಟು ತಿಂಗಳುಗಳಿಂದ ನಿಗೂಢವಾಗಿ...

ಶಾಸಕ ಮುನಿರತ್ನ ಸೇರಿ 8 ಜನರ ವಿರುದ್ಧ ಎಫ್‌ಐಆರ್

ಮಹಿಳೆಯೊಬ್ಬರನ್ನು ಗುರಿಯಾಗಿಸಿಕೊಂಡು ಪಿತೂರಿ ನಡೆಸಿ, ಅವರ ವಿರುದ್ಧ ಸುಳ್ಳು ಎಫ್‌ಐಆ‌ರ್ ದಾಖಲಿಸಿ...

ಕೆಪಿಎಸ್‌ಸಿಯಲ್ಲಿ ಸಮಗ್ರ ಸುಧಾರಣೆ ತರಲು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಆಗ್ರಹ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ನಿರಂತರವಾಗಿ ನಡೆಯುತ್ತಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ,...

​‘ಪ್ರೊ. ಸಿ.ಎನ್.ಆರ್. ರಾವ್‌ಗೆ ನೋಟಿಸ್ ನೀಡಿಲ್ಲ’: ಚುನಾವಣಾ ಆಯೋಗ

ಭಾರತ ರತ್ನ ಪುರಸ್ಕೃತ, ಹಿರಿಯ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ...