ಶಿವಾಜಿನಗರ | ಕುಸಿದುಬಿದ್ದ ಬಿಬಿಎಂಪಿ ನರ್ಸರಿ ಶಾಲೆ ಕಟ್ಟಡ; 80 ಮಕ್ಕಳು ಅಪಾಯದಿಂದ ಪಾರು

Date:

Advertisements

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ನರ್ಸರಿ ಶಾಲೆ ಕಟ್ಟಡವೊಂದು ನ.27ರ ಬೆಳಗಿನ ಜಾವ ಕುಸಿದು ಬಿದ್ದಿದೆ.

ಬೆಂಗಳೂರಿನ ಶಿವಾಜಿನಗರದ ಕುಕ್ಸ್ ರೋಡ್‌ನ ಬಿ ಕ್ರಾಸ್‌ನಲ್ಲಿರುವ ಬಿಬಿಎಂಪಿಯ ನರ್ಸರಿ ಶಾಲೆ ಕುಸಿದು ಬಿದ್ದಿದೆ. ಈ ಶಾಲೆಯಲ್ಲಿ 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ನಿತ್ಯ 75 ರಿಂದ 80 ಮಕ್ಕಳು ಶಾಲೆಗೆ ಬರುತ್ತಿದ್ದವು.

ಈ ಅವಘಡ ನಡೆಯುವುದಕ್ಕೂ ನರ್ಸರಿ ಶಾಲೆ ಆರಂಭವಾಗುವುದಕ್ಕೂ ಕೆಲವೇ ಗಂಟೆಗಳ ವ್ಯತ್ಯಾಸವಿತ್ತು. ಬೆಳಗಿನ ಜಾವ ಈ ಕಟ್ಟಡ ಕುಸಿದಾಗ ಕಟ್ಟಡದಲ್ಲಿ ಯಾರು ಇರಲಿಲ್ಲ. ಇದರಿಂದ 80ಕ್ಕೂ ಹೆಚ್ಚು ಮಕ್ಕಳು, ಶಿಕ್ಷಕರು ಅಪಾಯದಿಂದ ಪಾರಾಗಿದ್ದಾರೆ. ಆದರೆ, ಶಾಲಾ ಆವರಣದಲ್ಲಿ ನಿಲ್ಲಿಸಿದ್ದ ಹತ್ತಾರು ವಾಹನಗಳು ಕಟ್ಟಡ ಅವಶೇಷಗಳಡಿ ಸಿಲುಕಿ ನಜ್ಜುಗುಜ್ಜಾಗಿವೆ.

Advertisements

ಸ್ಥಳೀಯರ ಆಕ್ರೋಶ

“ಈ ಕಟ್ಟಡ ಬೆಳಗಿನ ಜಾವ ಬಿದ್ದಿದ್ದರಿಂದ ಶಾಲೆಯಲ್ಲಿ ಯಾವ ಮಕ್ಕಳು ಇರಲಿಲ್ಲ. ಅದೃಷ್ಟವಶಾತ್ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಶಾಲೆಯಲ್ಲಿ 80ಕ್ಕೂ ಹೆಚ್ಚು ಮಕ್ಕಳು ನರ್ಸರಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಒಂದು ವೇಳೆ ಶಾಲಾ ಸಮಯದಲ್ಲಿ ಕಟ್ಟಡ ಕುಸಿದಿದ್ದರೆ ಮಕ್ಕಳ ಗತಿ ಏನು? ಅಪಾಯ ಜರುಗಿದ್ದರೆ ಇದಕ್ಕೆ ಯಾರು ಹೊಣೆ? ಈ ಕಟ್ಟಡ ಬೀಳುವ ಸ್ಥಿತಿಯಲ್ಲಿದ್ದರೂ ಸಹ ಇಲ್ಲೇ ಶಾಲೆ ನಡೆಸುತ್ತಿರುವುದು ಎಷ್ಟು ಸರಿ?” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಶಾಲೆಗೆ ಸುಮಾರು 75 ವರ್ಷಗಳ ಇತಿಹಾಸವಿದ್ದು, ಬಹಳ ವರ್ಷಗಳಿಂದಲೇ ಈ ಕಟ್ಟಡ ಕುಸಿಯುವ ಭೀತಿಯಲ್ಲಿತ್ತು. ಇದು ಬಿಬಿಎಂಪಿಗೆ ಸೇರಿದ ಇಂಗ್ಲಿಷ್ ಶಾಲೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಡಿ. 2ರಿಂದ ಮೂರು ದಿನ ಮಲ್ಲೇಶ್ವರದಲ್ಲಿ ಕಡಲೆಕಾಯಿ ಪರಿಷೆ

ಬಿಬಿಎಂಪಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಜೆಸಿಬಿ ಕಟ್ಟಡದ ಅವಶೇಷಗಳ ತೆರವು ಕಾರ್ಯ ನಡೆಸಿದೆ. ಇನ್ನು ವಾಹನಗಳಿಗೆ ಹಾನಿಯಾಗಿದ್ದರಿಂದ ಮಾಲೀಕರು ಕಂಗಾಲಾಗಿದ್ದಾರೆ.

“ಈ ಶಾಲೆಯಲ್ಲಿ ಕಲಿಯುತ್ತಿದ್ದ ಶಾಲಾ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು” ಎಂದು ಕಾಂಗ್ರೆಸ್ ನಾಯಕ ರಿಜ್ವಾನ್ ಅರ್ಷದ್ ಭರವಸೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X