ಮೋದಿ ರೋಡ್ ಶೋ | ನೀಟ್‌ ಬರೆಯುವವರಿಗೆ ಪರೀಕ್ಷಾ ಕೇಂದ್ರ ತಲುಪುವುದೇ ಅಗ್ನಿ ಪರೀಕ್ಷೆ

Date:

Advertisements
  • ಮೋದಿ ರೋಡ್ ಶೋ ಸಂಚಾರ ದಟ್ಟಣೆ; ಬೇಸತ್ತ ಬೆಂಗಳೂರಿಗರು
  • ರೋಡ್ ಶೋ ಯಾವ್ಯಾವ ಕ್ಷೇತ್ರಗಳಲ್ಲಿರಲಿದೆ ನಿಖರ ಮಾಹಿತಿ ಇಲ್ಲ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಭಾನುವಾರ ನಡೆಯಲಿದ್ದು, ಅದೇ ದಿನ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್‌ ಶೋ ಇರುವ ಕಾರಣ ಪರೀಕ್ಷಾ ಕೇಂದ್ರ ತಲುಪುವುದು ಹೇಗೆ ಎಂಬ ಆತಂಕದಲ್ಲಿ ವಿದ್ಯಾರ್ಥಿಗಳು ಹೈರಾಣಾಗಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹಿನ್ನೆಲೆ, ಪ್ರಧಾನಿ ಮೋದಿ ಅವರು ಭರ್ಜರಿ ರೋಡ್ ಶೋ ನಡೆಸುತ್ತಿದ್ದಾರೆ. ಈಗಾಗಲೇ ಬೆಂಗಳೂರಿನ ವಾಹನ ಸವಾರರು ಮೋದಿ ರೋಡ್ ಶೋನಿಂದ ಉಂಟಾಗುವ ಸಂಚಾರ ದಟ್ಟಣೆಗೆ ಪರದಾಡುತ್ತಿದ್ದು, ಈ ಮಧ್ಯೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕುವ ಆತಂಕದಲ್ಲಿದ್ದಾರೆ.

ಪ್ರಚಾರದ ಭರಾಟೆ; ವಿದ್ಯಾರ್ಥಿಗಳ ಅಳಲು ಕೇಳೋರಿಲ್ಲ

Advertisements

ದ್ವಿತೀಯ ಪಿಯುಸಿ ಬಳಿಕ, ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಬರೆಯುವ 1.9 ಲಕ್ಷ ವಿದ್ಯಾರ್ಥಿಗಳು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರ – ಪಟ್ಟಣಗಳಲ್ಲಿ ಭಾನುವಾರ ಪರೀಕ್ಷೆ ಬರೆಯಲಿದ್ದಾರೆ. ಇದು ಅವರ ಜೀವನದ ಮಹತ್ವದ ಘಟ್ಟವಾಗಿದೆ.

ಈ ಮಧ್ಯೆ ವಿಶೇಷ ಭದ್ರತಾ ವ್ಯವಸ್ಥೆ ಇರುವ ರಾಜಕೀಯ ಪಕ್ಷಗಳ ರೋಡ್ ಶೋ, ಪ್ರಚಾರ ಸಭೆ ಹಾಗೂ ರ್‍ಯಾಲಿ ನಡೆಯಲಿವೆ. ವಿಶೇಷ ಭದ್ರತಾ ವ್ಯವಸ್ಥೆ ಕೈಗೊಳ್ಳಲು ನಾಯಕರು ಸಾಗುವ ಮಾರ್ಗಗಳನ್ನು ಸಾಮಾನ್ಯವಾಗಿ ಮೂರ್ನಾಲ್ಕು ಗಂಟೆ ಮೊದಲೇ ಬಂದ್ ಮಾಡಲಾಗುತ್ತದೆ. ಮೋದಿಯವರ ರೋಡ್‌ ಶೋ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರ ನಡುವೆ ಇರುತ್ತದೆ. ಪರೀಕ್ಷೆ ಎದುರಿಸುವ ಸವಾಲು, ಭೀತಿಯ ನಡುವೆ ಪರೀಕ್ಷಾ ಕೇಂದ್ರ ತಲುಪುವುದೇ ವಿದ್ಯಾರ್ಥಿಗಳಿಗೆ ಸಾಹಸವಾಗಿ ಪರಿಣಮಿಸಿದೆ.

ಈ ಬಗ್ಗೆ ಇಲ್ಲಿಯವರೆಗೂ ರಾಜಕೀಯ ಪಕ್ಷದ ನಾಯಕರು ಚಿಂತಿಸಿಲ್ಲ. ಚುನಾವಣಾ ಭರಾಟೆಯಲ್ಲಿ ತೊಡಗಿಕೊಂಡಿದ್ದಾರೆ. ಮೋದಿಯವರ ರೋಡ್ ಶೋ ಯಾವ್ಯಾವ ವಿಧಾನಸಭಾ ಕ್ಷೇತ್ರಗಳಲ್ಲಿ ಸಾಗಲಿದೆ ಎಂಬ ನಿಖರ ಮಾಹಿತಿ ಸಹ ಪ್ರಧಾನಿ ಕಾರ್ಯಾಲಯ ಇನ್ನೂ ಬಿಡುಗಡೆ ಮಾಡಿಲ್ಲ.

ಈ ಸುದ್ದಿ ಓದಿದ್ದೀರಾ?: ಮೋದಿ ಬರುತ್ತಾರೆ ಬೀದಿ ನಾಯಿ ಹಿಡಿಯಿರಿ: ಬಿಬಿಎಂಪಿಗೆ ಪೊಲೀಸರ ಪತ್ರ

ಭಾನುವಾರ ನಡೆಯಲಿರುವ ನೀಟ್‌ ಪರೀಕ್ಷೆ ಮಧ್ಯಾಹ್ನ 2 ರಿಂದ 5.20 ರವರೆಗೆ ನಡೆಯಲಿದೆ. 11:00 ಗಂಟೆಗೆ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಹಾಜರಾಗಿರಬೇಕು. ಇಂತಹ ಸಮಯದಲ್ಲಿ ರಸ್ತೆ ಬಂದ್ ಆದರೆ, ದೂರದ ಊರುಗಳಿಂದ ಬೆಂಗಳೂರಿಗೆ ಬಂದು ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳು ತೊಂದರೆಗೆ ಸಿಲುಕುವಂತಾಗುತ್ತದೆ.

ಪರ್ಯಾಯ ಮಾರ್ಗ ಸೂಚಿಸಿದರೂ ತಪ್ಪದ ತಲೆ ನೋವು

ರಾಜಕೀಯ ನಾಯಕರ ರೋಡ್‌ ಶೋ ಎಂದರೆ ಪ್ರತಿ ಬಾರಿ ಪರ್ಯಾಯ ಮಾರ್ಗಗಳ ಸೂಚನೆ ಹೊರಡಿಸುವ ಪೊಲೀಸರು, ಬದಲಿ ಮಾರ್ಗಗಳ ಮಾಹಿತಿ ನೀಡಿದರೂ ಪರೀಕ್ಷೆ ಎದುರಿಸುವ ಬಗ್ಗೆ ಹಲವು ಸವಾಲು ತಲೆಯಲ್ಲಿರಿಸಿಕೊಂಡ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ತಲುಪುವುದಾದರು ಹೇಗೆ ಎಂಬ ಆತಂಕದಲ್ಲೇ ಇರುತ್ತಾರೆ ಎಂದು ನೀಟ್ ಎದುರಿಸುವ ವಿದ್ಯಾರ್ಥಿಗಳ ಪೋಷಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

“ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ತಲುಪಲು ತಮ್ಮ ಮನೆಗಳಿಂದ ಬಹಳ ದೂರ ಪ್ರಯಾಣಿಸಬೇಕಾಗುತ್ತದೆ ಎಂಬುದನ್ನು ಗಣನೆಗೆ ತೆಗೆದುಕೊಂಡು, ತೊಂದರೆಯಾಗದಂತೆ ಬದಲಿ ಮಾರ್ಗದ ಯೋಜನೆ ರೂಪಿಸುತ್ತಿದ್ದೇವೆ” ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಕೆ ಅಣ್ಣಾಮಲೈ ಹೇಳಿದ್ದಾರೆ.

ರಾಹುಲ್ ಗಾಂಧಿ ಪ್ರಚಾರ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಹ ಬೆಂಗಳೂರಿನ ಮಹದೇವಪುರದಲ್ಲಿ ಪ್ರಚಾರ ನಡೆಸಲಿದ್ದಾರೆ. ಶಿವಾಜಿನಗರದಲ್ಲಿ ಬಹಿರಂಗ ಸಭೆ ನಡೆಸಲಿದ್ದಾರೆ. ದೆಹಲಿ ನಾಯಕರ ರಾಜಧಾನಿ ಮತಬೇಟೆಗೆ ವಾಹನ ಸವಾರರು ಮತ್ತು ನೀಟ್ ಪರೀಕ್ಷಾರ್ಥಿಗಳಿಗೆ ತೊಂದರೆ ಉಂಟು ಮಾಡುವ ಸಾಧ್ಯತೆಗಳಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X