ಯಲಹಂಕ | 10 ಕೋಟಿ ರೂ. ಮೌಲ್ಯದ ಒತ್ತುವರಿ ಜಮೀನು ಸರ್ಕಾರದ ವಶಕ್ಕೆ

Date:

  • ಕಂದಾಯ ಇಲಾಖೆಯಿಂದ ಮುಂದುವರೆದ ಸರ್ಕಾರಿ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ
  • 10 ಕೋಟಿ ರೂ. ಮೌಲ್ಯದ 6.05 ಎಕರೆ ಸರ್ಕಾರಿ ಜಮೀನು ಸರ್ಕಾರದ ವಶಕ್ಕೆ

ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಸಿರುವ ಕಂದಾಯ ಇಲಾಖೆ ಅಧಿಕಾರಿಗಳು, ಯಲಹಂಕ ತಾಲೂಕು, ಜಾಲ ಹೋಬಳಿ, ಕಟ್ಟಿಗೇನಹಳ್ಳಿ ಗ್ರಾಮದ ಸರ್ವೆ ನಂ.28 ರಲ್ಲಿ ಒತ್ತುವರಿಯಾಗಿದ್ದ ಸುಮಾರು 10 ಕೋಟಿ ರೂ. ಮೌಲ್ಯದ 6.05 ಎಕರೆ ಸರ್ಕಾರಿ ಜಮೀನನ್ನು ವಶಕ್ಕೆ ಪಡೆದಿದ್ದಾರೆ.

- Advertisement -

ಈ ಮೂಲಕ ಭೂ ಒತ್ತುವರಿದಾರರು ಹಾಗೂ ಭೂ ಮಾಫಿಯಾಗೆ ಸರ್ಕಾರ ಬಿಸಿ ಮುಟ್ಟಿಸಿದೆ. ಬೆಂಗಳೂರಿನಾದ್ಯಂತ ಭೂ ಒತ್ತುವರಿ ತೆರವು ಮಾಡುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಅದರಂತೆ ಕಳೆದ ವಾರ ಯಲಹಂಕದ ಬಾಗಲೂರಿನ ಬಳಿ 25 ಕೋಟಿ ರೂ. ಮೌಲ್ಯದ 6.07 ಎಕರೆ ಸರ್ಕಾರಿ ಭೂ ಒತ್ತುವರಿ ತೆರವುಗೊಳಿಸಲಾಗಿತ್ತು. ಈಗ ಕಾರ್ಯಾಚರಣೆ ಮುಂದುವರಿಸಿ ಇನ್ನಷ್ಟು ಒತ್ತುವರಿ ತೆರವು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಯಲಹಂಕ ತಾಲ್ಲೂಕು ಜಾಲ ಹೋಬಳಿ, ಕಟ್ಟಿಗೇನಹಳ್ಳಿ ಗ್ರಾಮದ ಸರ್ವೆ ನಂ.28 ರ ಜಮೀನಿಗೆ ಸಂಬಂಧಿಸಿದಂತೆ, ಗೋಮಾಳದ ಜಮೀನಿಗೆ ವಿವರವಾದ ವರದಿಯನ್ನು ದಾಖಲೆಗಳೊಂದಿಗೆ ಸಲ್ಲಿಸಲು ಮತ್ತು ಜಮೀನಿನಲ್ಲಿ ಯಾವುದೇ ಖಾತೆ ಅನುಭವವಿಲ್ಲದೇ ಇರುವ ಒತ್ತುವರಿದಾರರನ್ನು ಖುಲ್ಲಾಪಡಿಸಿ ಕ್ರಮವಹಿಸುವಂತೆ ನಿರ್ದೇಶಿಸಲಾಗಿತ್ತು.

ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 104 ರ ಅಡಿ ವಿಚಾರಣೆ ನಡೆಸಲು ನಿರ್ಧರಿಸಿ ಪ್ರತಿವಾದಿಗಳಿಗೆ ನೋಟೀಸ್ ಕೂಡ ನೀಡಲಾಗಿತ್ತು. ಅದರಂತೆ ಕಟ್ಟಿಗೇನಹಳ್ಳಿಯ ಸರ್ವೆ ನಂ.28 ರ ಜಮೀನಿನಲ್ಲಿ ತಾಲೂಕು ಮೋಜಿಣಿದಾರರು ಒತ್ತುವರಿ ಎಂದು ಗುರುತಿಸಿದ 6.05 ಎಕರೆ ಜಮೀನನಲ್ಲಿ ಒತ್ತುವರಿ ತೆರವುಗೊಳಿಸಲಾಗಿದೆ.

ಒತ್ತುವರಿದಾರರ ವಿವರ

  • ಕೋಗಿಲು ಗ್ರಾಮದ ಸರ್ವೆ ನಂ. 100 ರ ಹಿಡುವಳಿದಾರರಾದ ಉಡುಪ ಅವರಿಂದ ಕಟ್ಟಿಗೇನಹಳ್ಳಿಯ ಸರ್ವೆ ನಂ.28 ರಲ್ಲಿ 0-10 ಗುಂಟೆ ಜಮೀನನ್ನು ಒತ್ತುವರಿ ಮಾಡಿದ್ದು, ಇದನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.
  • ಎಸ್.ಜಯರಾಮ್ ಬಿನ್ ಸುಬ್ರಮಣ್ಯ ಮೊದಲಿಯಾರ್ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0-20 ಗುಂಟೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.
  • ಸುಬ್ಬಣ್ಣ ಬಿನ್ ಚಿಕ್ಕಮುನಿಯಪ್ಪ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 2-29 ಎಕರೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.
  • ದೊಡ್ಡಕ್ಕಮ್ಮ ಕೋಂ ಲೇಟ್ ಕೆ.ಮುನಿಯಪ್ಪ, ಮುನಿರಾಜು ಮತ್ತು ಎಂ. ಮಂಜುನಾಥ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0-12 ಗುಂಟೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.
  • ವೈ.ಜಿ.ಕೇಶವ ಬಿನ್ ಗೋವಿಂದಪ್ಪ ಅವರಿಗೆ ಸಂಬಂಧಿಸಿದಂತೆ, ನಂ.ಎಲ್ಎನ್ ಡಿ/ಎಸ್ ಆರ್/1/104/78-79 ರಂತೆ ಅಬ್ದುಲ್ ಸತ್ತಾರ್ ರವರಿಗೆ 2-00 ಎಕರೆ ಮಂಜೂರಾಗಿತ್ತು. ನಂತರ ಕ್ರಯವಿಕ್ರಯ ನಡೆದು, ವೈ.ಜಿ ಕೇಶವ ಬಿನ್ ಗೋವಿಂದಪ್ಪರವರಿಗೆ ಖಾತೆ ದಾಖಲಾಗಿತ್ತು. ವಿಶೇಷ ಜಿಲ್ಲಾಧಿಕಾರಿಗಳ ಆದೇಶದಂತೆ ಸರ್ಕಾರದ ಹೆಸರಿಗೆ ಖಾತೆ ದಾಖಲಾಗಿ, ಗೋಮಾಳ ಶೀರ್ಷಿಕೆಯಲ್ಲಿ ಖಾತೆ ಮುಂದುವರೆಯುತ್ತಿದೆ. 2.00 ಎಕರೆ ಜಮೀನಿನ ಪ್ರಕರಣ ವಿಶೇಷ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಆದರೆ, ಇವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0.05 ಗುಂಟೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.
  • ರಮೇಶ್ ಬಿನ್ ಚಿಕ್ಕಪಾಪಮ್ಮ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0.12 ಎಕರೆ ಜಮೀನು ಒತ್ತುವರಿ ತೆರವುಗೊಳಿಸಲಾಗಿದೆ. ಇದೇ ಗ್ರಾಮದಲ್ಲಿ ಬ್ಲಾಕ್ ನಂ.12ರಲ್ಲಿ 0.15 ಗುಂಟೆ ವಿಸ್ತೀರ್ಣದಲ್ಲಿ 4 ಮನೆಗಳು ನಿರ್ಮಾಣವಾಗಿದ್ದು, ತೆರವುಗೊಳಿಸಲು ಮೌಖಿಕವಾಗಿ 2 ದಿನಗಳ ಕಾಲಾವಕಾಶ ಕೋರಿದ್ದರು. ಅದರಂತೆ ಕಾಲಾವಕಾಶ ನೀಡಿ, ಸೂಕ್ತ ಪೊಲೀಸ್ ಬಂದೋಬಸ್ತ್‌ನೊಂದಿಗೆ ತೆರವುಗೊಳಿಸಲಾಗಿದೆ.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...

ಬೆಂಗಳೂರಿನ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ನಕಲಿ ಕ್ಯಾನ್ಸರ್ ಔಷಧ ಪೂರೈಕೆ: ಫಾರ್ಮಸಿ ಮಾಲೀಕನ ಬಂಧನ

ರಾಜಧಾನಿ ಬೆಂಗಳೂರಿನ 90ಕ್ಕೂ ಹೆಚ್ಚು ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳಿಗೆ ನಕಲಿ ಹಾಗೂ...