ಭದ್ರಾವತಿ | ಮೊಬೈಲ್‌ಗೆ 2 ಮೆಸೇಜ್ ಬಂತು : ಒಟಿಪಿ ಹೇಳದೇನೆ ಹೋಯ್ತು ₹5 ಲಕ್ಷ ಹಣ

Date:

Advertisements

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ನಿವಾಸಿಯೊಬ್ಬರ ಬ್ಯಾಂಕ್ ಖಾತೆಯಿಂದ ಸೈಬರ್ ಖದೀಮರು ಬರೋಬ್ಬರಿ 5.70 ಲಕ್ಷ ರೂಪಾಯಿ ದೋಚಿರುವ ಘಟನೆ ನಡೆದಿದೆ. ಮೊಬೈಲ್‌ಗೆ ಬಂದ ಕೇವಲ ಎರಡು ಮೆಸೇಜ್‌ಗಳ ಮೂಲಕ ಓಟಿಪಿ ಕೇಳದೆಯೇ ಹಣ ಪಡೆದಿದ್ದಾರೆ.

ಈ ಬಗ್ಗೆ ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಭದ್ರಾವತಿಯ ಸಾದತ್ ಕಾಲೋನಿಯ ವ್ಯಕ್ತಿಯೊಬ್ಬರ ಫೋನ್​ಗೆ ಎರಡು ಟೆಕ್ಸ್ಟ್​ ಮೇಸೇಜ್​ ಬಂದಿದ್ದವು. ಅದು HDFC ಬ್ಯಾಂಕ್​ ನ ಮೆಸೇಜ್​ ಆಗಿದ್ದು ಅದನ್ನು ದೂರುದಾರರು ಓಪನ್​ ಮಾಡಿದಾಗ ಅವರಿಗೊಂದು ಶಾಕ್​ ಎದುರಾಗಿತ್ತು.

ಅದೇನೆಂದರೆ ಅವರ ಬ್ಯಾಂಕ್​ನಿಂದ 5 ,70,000 ರೂಪಾಯಿ ಹಣ ಡೆಬಿಟ್ ಆಗಿತ್ತು. ಆದರೆ ಯಾರಿಗೂ ಹಣ ಹಾಕದ ದೂರುದಾರರು ಗಾಬರಿಯಿಂದ ಬ್ಯಾಂಕ್​ನಲ್ಲಿ ಹೋಗಿ ವಿಚಾರಿಸಿದಾಗಲೂ ಸಹ ಬ್ಯಾಂಕ್​ ಸಿಬ್ಬಂದಿ ನಿಮ್ಮ ಖಾತೆಯಿಂದ ಹಣ ಕಟ್​ ಆಗಿದೆ ಎಂದು ಹೇಳಿದ್ದರು.

Advertisements

ಇದರಿಂದ ದೂರುದಾರರಿಗೆ ಯಾರೋ ತಮ್ಮ ವಯಕ್ತಿಕ ಖಾತೆಯನ್ನು ಹ್ಯಾಕ್​ ಮಾಡಿ ಮೊಬೈಲ್​ಗೆ ಒಟಿಪಿಯನ್ನೂ ಕಳುಹಿಸದೆ ಹಂತ ಹಂತವಾಗಿ ಹಣವನ್ನು ವರ್ಗಾಯಿಸಿಕೊಂಡಿರುವುದು ತಿಳಿದು ಬಂದಿದೆ. ಕೂಡಲೆ ಪೊಲೀಸರಿಗೆ ಮಾಹಿತಿ‌ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

Download Eedina App Android / iOS

X