ಭದ್ರಾವತಿ | ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ವಂಚನೆ; ಸಿಕ್ಕಿಬಿದ್ದ ಮ್ಯಾಟ್ರಿಮೋನಿ ವಂಚಕ

Date:

Advertisements

ಮ್ಯಾಟ್ರಿಮೋನಿಯ ಅಪ್ಲಿಕೇಶನ್‌ಗಳಲ್ಲಿ ಪರಿಚಯ ಮಾಡಿಕೊಂಡು ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂ ದೋಚಿದ್ದ ವಂಚಕನೊಬ್ಬ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ವಿಜಯಪುರ ತಾಲೂಕು ನಿವಾಸಿ ಭೀಮರಾಜ್‌ ಬಂಧಿತ ಆರೋಪಿ.

ಆನ್‌ಲೈನ್‌ ಅಪ್ಲಿಕೇಶನ್‌ಗಳನ್ನು ನಂಬಿ ಮೋಸ ಹೋಗದಂತೆ ಶಿವಮೊಗ್ಗ ಪೊಲೀಸ್‌ ಇಲಾಖೆ ಭೀಮರಾಜ್ ಫೋಟೋ ಹಾಗೂ ಆತ ನಡೆಸಿದ ವಂಚನೆ ಪ್ರಕರಣಗಳ ಲಿಸ್ಟ್‌ ಬಿಡುಗಡೆ ಮಾಡಿ ಎಚ್ಚರಿಕೆ ನೀಡಿದೆ.

ಮ್ಯಾಟ್ರಿಮೋನಿ ಮೂಲಕ ಪರಿಚಯವಾದ ಭೀಮರಾಜ್, ಈ ಮೊದಲೇ ತಾನು ಮದುವೆಯಾಗಿರುವುದನ್ನು ಮರೆಮಾಚಿ, ಭದ್ರಾವತಿಯ ಮಹಿಳೆಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ, ಅವರಿಂದ ಹಣ ಮತ್ತು ಒಡವೆಗಳನ್ನು ಪಡೆದು ಬಳಿಕ ಸಂಪರ್ಕಕ್ಕೂ ಸಿಗದೆ ಪರಾರಿಯಾಗಿದ್ದಾನೆ. ಮಹಿಳೆಯಿಂದ ತನ್ನ ತಾಯಿಯ ಆರೋಗ್ಯ ಸರಿಯಿಲ್ಲ ಎಂದು ಹೇಳಿ ಫೋನ್ ಪೇ ಮೂಲಕ ಒಟ್ಟು ₹5,43,451 ಗಳನ್ನು ಪಡೆದಿದ್ದ. ನಂತರ ₹2,00,000 ಕ್ಯಾಶ್‌ ಪಡೆದುಕೊಂಡಿದ್ದ. ಸಾಲದೆಂಬಂತೆ ಕಚೇರಿ ಸಮಾರಂಭದ ಕಾರಣ ಹೇಳಿ ಸುಮಾರು ₹2,25,000 ಮೌಲ್ಯದ ಬಂಗಾರ ಪಡೆದುಕೊಂಡಿದ್ದ. ಆ ಬಳಿಕ ಸಂಪರ್ಕಕ್ಕೆ ಸಿಗದೆ ವಂಚಿಸಿದ್ದ ಎನ್ನಲಾಗಿದೆ.

Advertisements

ಈ ಸಂಬಂಧ ಸಂತ್ರಸ್ತೆ ದಾಖಲಿಸಿದ ದೂರಿನನ್ವಯ ಪೊಲೀಸರು 318(2), 318(4) BNS-2023 2 66 (C), 66(D) IT ACT ಅಡಿಯಲ್ಲಿ ಕೇಸ್‌ ದಾಖಲಿಸಿದ್ದರು.

1001227867

ಈ ಸುದ್ದಿ ಓದಿದ್ದೀರಾ?: ಭದ್ರಾವತಿ | ಪೊಲೀಸ್‌ ಠಾಣೆ ಕಾರ್ಯವೈಖರಿ ತಿಳಿಸಲು ವಿದ್ಯಾರ್ಥಿಗಳಿಗೆ ʼತೆರೆದ ಮನೆʼ ಕಾರ್ಯಕ್ರಮ

ಅಲ್ಲದೆ ಆತನ ವಿರುದ್ಧ 10 ಪೊಲೀಸ್‌ ಠಾಣೆಗಳಲ್ಲಿ ಒಟ್ಟು 12 ಕೇಸ್‌ಗಳಿರುವುದು ತನಿಖೆಯಿಂದ ಗೊತ್ತಾಗಿದೆ. ಪ್ರಸ್ತುತ ಆತ ಕೊಪ್ಪಳ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ವರದಿಯಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X