ಮಂಗಳೂರು | ಬಿಜೆಪಿ ನೇತೃತ್ವದ ಭಾರತದಲ್ಲಿ ಯುವಜನರ ಆಶೋತ್ತರ ಕಡೆಗಣನೆ: ಸುನೀಲ್ ಕುಮಾರ್ ಬಜಾಲ್

Date:

ಭಾರತ ದೇಶದಲ್ಲಿಂದು ನಿರುದ್ಯೋಗದ ಪ್ರಮಾಣ ವಿಪರೀತವಾಗಿ ಏರಿಕೆಯಾಗಿದೆ. ಬಡತನ, ಹಸಿವು, ಅಸ್ಪ್ರಶ್ಯತೆ, ಮತೀಯವಾದದ ಸಾಗಿರುವಂತಹ ಭಾರತವನ್ನು ಭಗತ್ ಸಿಂಗ್ ಬಯಸಿರಲಿಲ್ಲ. ಕೇಂದ್ರದಲ್ಲಿ ಆಳುವ ಬಿಜೆಪಿ ನೇತೃತ್ವದ ಭಾರತದಲ್ಲಿ ಯುವಜನರ ಆಶೋತ್ತರಗಳನ್ನು ಕಡೆಗಣಿಸಲಾಗಿದೆ ಎಂದು ಡಿವೈಎಫ್ಐ ಮಾಜಿ ರಾಜ್ಯಾಧ್ಯಕ್ಷರಾದ ಸುನೀಲ್ ಕುಮಾರ್ ಬಜಾಲ್ ಕಿಡಿಕಾರಿದರು.

- Advertisement -

ಅವರು ಭಾನುವಾರ ಡಿವೈಎಫ್ಐ ಮಂಗಳೂರು ದ.ಕ ಜಿಲ್ಲಾ ಸಮಿತಿ ಭಗತ್ ಸಿಂಗರ ಹುತಾತ್ಮ ದಿನದ ಅಂಗವಾಗಿ ನಿರುದ್ಯೋಗದ ವಿರುದ್ಧ ಸೌಹಾರ್ದ ಭಾರತಕ್ಕಾಗಿ ನಗರದ ಜಿಲ್ಲಾ ಪಂಚಾಯತ್ ಕಚೇರಿಯಿಂದ ಉರ್ವಸ್ಟೋರ್ ಜಂಕ್ಷನ್ ವರೆಗೆ ನಡೆದ ಭಗತ್ ಸಿಂಗ್ ಹುತಾತ್ಮ ಜ್ಯೋತಿ ಮೆರವಣೆಗೆ ಹಾಗೂ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...
1003893358

ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಮಾತನಾಡುತ್ತಾ ಇವತ್ತಿನ ಶಿಕ್ಷಣ ಸಂಸ್ಥೆಗಳು ನಿರುದ್ಯೋಗಿ ಯುವಜನರನ್ನು ಸೃಷ್ಟಿಸುವ ಕಾರ್ಖಾನೆಯಾಗಿದೆ. ಶಿಕ್ಷಣ ಪಡೆದು ಹೊರ ಬರುತ್ತಿರುವ ಯುವಜನರಿಗೆ ಉದ್ಯೋಗವಿಲ್ಲ ಇರುವ ಉದ್ಯೋಗಳಿಗೆ ಭದ್ರತೆಯಿಲ್ಲ ಸಣ್ಣ ಪುಟ್ಟ ಅಂಗಡಿ ಮುಂಗಟ್ಟುಗಳಲ್ಲಿ ಕಡಿಮೆ ಆದಾಯಕ್ಕೆ ದುಡಿಯುತ್ತಿರುವ ಕಾರ್ಮಿಕರಿಗೆ ಕನಿಷ್ಠ ವೇತನವೂ ಇಲ್ಲ ಈ ಬಗ್ಗೆ ಒಬ್ಬನೇ ಒಬ್ಬ ಶಾಸಕ ವಿಧಾನಸೌಧದ ಒಳಗೆ ಧ್ವನಿ ಎತ್ತುತ್ತಿಲ್ಲ .ಅದೇ ಶಾಸಕರೆಲ್ಲ ತಮ್ಮ ಸಂಬಳ ಹೆಚ್ಚಳಗೊಳಿಸಿ ಅವರ ಬದುಕನ್ನಷ್ಟೇ ಭದ್ರಗೊಳಿಸುತ್ತಿರುವುದು ನಾಚಿಕೆಗೇಡಿನ ಸಂಗತಿ‌ ಎಂದು ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿ ಡಿವೈಎಫ್ಐ ದ.ಕ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಮಾತನಾಡುತ್ತಾ, ಇಂದಿನ ಯುವತಲೆಮಾರಿಗೆ ಭಗತ್ ಸಿಂಗರ ಹೋರಾಟದ ಆಶಯಗಳನ್ನು ತಿಳಿಸುವ ಮತ್ತು ಅವರ ಕನಸಿನ ಭಾರತವನ್ನು ಕಟ್ಟುವ ಇತಿಹಾಸಗಳ ಕುರಿತು ತಿಳಿಸಬೇಕಾಗಿದೆ. ಯುವಜನರು ಎದುರಿಸುತ್ತಿರುವ ಸಮಸ್ಯೆಗಳ ವಿರುದ್ಧದ ಹೋರಾಟಗಳಿಗೆ ಅಣಿನೇರಿಸಬೇಕಾಗಿದೆ.

ವೇದಿಕೆಯಲ್ಲಿ ಡಿವೈಎಫ್ಐ ಜಿಲ್ಲಾ ಮುಖಂಡರಾದ ನವೀನ್ ಕೊಂಚಾಡಿ, ನಿತಿನ್ ಕುತ್ತಾರ್, ಪುನೀತ್ ಉರ್ವಸ್ಟೋರ್, ಮಾಧುರಿ ಬೋಳಾರ್ ಉಪಸ್ಥಿತರಿದ್ದರು.

ಈ ವೇಳೆ ಡಿವೈಎಫ್ಐ ಜಿಲ್ಲಾ ಮುಖಂಡರಾದ ಜಗದೀಶ್ ಬಜಾಲ್, ರಿಜ್ವಾನ್ ಹರೇಕಳ,‌ ರಾಜೇಶ್ ಉರ್ವಸ್ಟೋರ್, ಮನೋಜ್ ಉರ್ವಸ್ಟೋರ್, ಪ್ರದೀಪ್, ಧಿರಾಜ್ ಬಜಾಲ್, ಪ್ರಕಾಶ್ ಶೆಟ್ಟಿ ಬಜಾಲ್, ಭಾರತೀ ಬೋಳಾರ, ದಯಾನಂದ ಶೆಟ್ಟಿ, ಇಕ್ಬಾಲ್ ಉರ್ವಸ್ಟೋರ್ ಮುಂತಾದವರು ಉಪಸ್ಥಿತರಿದ್ದರು.

1003893354
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...

ಕೊಡಗು | ಸಮಾಜದ ನೋವಿಗೆ ಧ್ವನಿಯಾದ ಪತ್ರಕರ್ತನ ಬದುಕಿಗಾಗಿ ನೆರವಿನ ಮನವಿ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ಸಮಾಜದ ನೋವು,...

ರಾಯಚೂರು | ಅಂತರರಾಜ್ಯ ಕಳ್ಳನ ಬಂಧನ: ₹25.50 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ

ಸಿಂಧನೂರು ನಗರದ ಮನೆಗೆ ಬೀಗ ಹಾಕಿ ಹೊರಗೆ ಹೋಗಿದ್ದ ವೇಳೆ ಬೀಗ...