ಭಾಲ್ಕಿ | ಸಾಹಿತ್ಯ ಕ್ಷೇತ್ರಕ್ಕೆ ಜಿ.ಬಿ.ವಿಸಾಜಿ ಕೊಡುಗೆ ವಿಶಿಷ್ಟ : ಮೋಹನ ರೆಡ್ಡಿ

Date:

Advertisements

ಗಡಿಭಾಗದ ಸಾಹಿತ್ಯ ಕ್ಷೇತ್ರಕ್ಕೆ ಹಿರಿಯ ಸಾಹಿತಿ ಜಿ.ಬಿ.ವಿಸಾಜಿ ಅವರು ವಿಶಿಷ್ಟ ಕೊಡುಗೆ ನೀಡಿದ್ದಾರೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಆಡಳಿತಾಧಿಕಾರಿ ಮೋಹನ ರೆಡ್ಡಿ ಹೇಳಿದರು.

ಭಾಲ್ಕಿ ತಾಲೂಕಿನ ತಳವಾಡ(ಕೆ) ಗ್ರಾಮದ ಅಲ್ಲಮ ಪ್ರಭು ಬಿ.ಇಡಿ ಕಾಲೇಜಿನಲ್ಲಿ ಶಬನಮ್ ಎಜುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೋಮವಾರ ಆಯೋಜಿಸಿದ್ದ ಹಿರಿಯ ಸಾಹಿತಿ ಜಿ.ಬಿ.ವಿಸಾಜಿ ಪ್ರಥಮ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ʼಹಿರೇಮಠ ಸಂಸ್ಥಾನದ ಧಾರ್ಮಿಕ, ಶೈಕ್ಷಣಿಕ, ಸಾಹಿತಿಕ ಕಾರ್ಯಕ್ರಮಗಳಲ್ಲಿ ಹಿರಿಯ ಸಾಹಿತಿ ಜಿ.ಬಿ.ವಿಸಾಜಿ ಅವರ ಸೇವೆ ವಿಶಿಷ್ಟವಾಗಿ ಇರುತ್ತಿತ್ತು. ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ ಕುರಿತು ಕಾಯಕ ಪರಿಣಾಮಿ, ಭಾಲ್ಕಿ ಇತಿಹಾಸ ಸೇರಿ ಮುಂತಾದ ಪುಸ್ತಕ ರಚಿಸಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ. ಉತ್ತಮ ಸಾಹಿತ್ಯ ಪಟು ಆಗಿದ್ದರಿಂದ ಕನ್ನಡ ಭಾಷೆಯ
ಮೇಲೆ ಪ್ರಭುತ್ವ ಸಾಧಿಸಿದ್ದರು. ಅವರ ಸರಳ ವ್ಯಕ್ತಿತ್ವ ನಮ್ಮೆಲ್ಲರಿಗೂ ಪ್ರೇರಣೆಯಾಗಿದೆʼ ಎಂದು ತಿಳಿಸಿದರು.

ʼಸಾಹಿತಿ ಜಿ.ಬಿ.ವಿಸಾಜಿ ಅವರ ಮಾರ್ಗದರ್ಶನದಲ್ಲಿ 15 ಪುಸ್ತಕಗಳನ್ನು ಬರೆಯಲು ಸಾಧ್ಯವಾಗಿದೆ. ಅವರು ಒಬ್ಬ ಕನ್ನಡದ ಭೀಷ್ಮರಾಗಿದ್ದರುʼ ಎಂದು ಹಿರಿಯ ಸಾಹಿತಿ ಗಣಪತಿ ಭೂರೆ ತಿಳಿಸಿದರು.

ಶಬನಮ್ ಎಜುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಡಾ.ಮಕ್ತುಂಬಿ ಮಾತನಾಡಿ, ʼವಿದ್ಯಾರ್ಥಿಗಳಲ್ಲಿ ಗುರು ಭಕ್ತಿ ಹೆಚ್ಚಾಗಬೇಕು. ಜಿ.ಬಿ.ವಿಸಾಜಿ ಅವರ ಪ್ರೇರಣೆಯಿಂದ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಯಿತು. ಅವರ ಬದುಕು-ಬರಹ ನಮಗೆ ಸ್ಫೂರ್ತಿಯಾಗಬೇಕುʼ ಎಂದರು.

ಪ್ರಾಚಾರ್ಯ ಪಾಂಡುರಂಗ ಕುಂಬಾರ್ ಮಾತನಾಡಿ, ʼಚನ್ನಬಸವ ಪಟ್ಟದೇವರು ಕನ್ನಡಕ್ಕಾಗಿ ದುಡಿದು ಕನ್ನಡ ಮಠ ಕಟ್ಟಿದರು. ಅದನ್ನು ಬಸವಲಿಂಗ ಪಟ್ಟದ್ದೆವರು ಮುಂದುವರಿಸಿದ್ದಾರೆ. ಹಿರೇಮಠ ಪರಿಸರದಲ್ಲಿ ಇಂತಹ ಸಾಹಿತಿಗಳು ಬೆಳೆಯಲು ಸಾಧ್ಯವಾಗಿದೆ. ಜೀವನದಲ್ಲಿ ನಿರಂತರ ಅಧ್ಯಯನ ಮುಖ್ಯ, ಪಾಠದೊಂದಿಗೆ ಸಾಹಿತ್ಯ ಓದಬೇಕುʼ ಎಂದರು.

ಇದನ್ನೂ ಓದಿ : ಬೀದರ್‌ | ಚೆಂಡು ಹೂವು ಕೃಷಿಯಲ್ಲಿ ಖುಷಿ ಕಂಡ ಬಿಎಸ್ಸಿ ಪದವೀಧರ

ಕಾರ್ಯಕ್ರಮದಲ್ಲಿ ಕಾಲೇಜಿನ ಉಪ ಪ್ರಾಚಾರ್ಯ ಮಾಣಿಕರಾವ ಪಾಂಚಾಳ ಸ್ವಾಗತಿಸಿದರು. ರಾಜೇಂದ್ರ ವರವಟ್ಟೆ ನಿರೂಪಿದರು. ಅರ್ಚನಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X