ಭಟ್ಕಳ | ಗಣಪತಿ ವಿಸರ್ಜನೆ ವೇಳೆ ಮಸೀದಿ ಕಿಟಕಿ ಗಾಜು ಒಡೆದು, ಗೊಜ್ಜು ತೂರಾಟ ಆರೋಪ: ದೂರು–ಪ್ರತಿದೂರು ದಾಖಲು

Date:

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಮಸೀದಿಯ ಕಿಟಕಿ ಗಾಜನ್ನು ಕಲ್ಲಿನಿಂದ ಒಡೆದಿರುವ ಹಾಗೂ ಮೆರವಣಿಗೆಯತ್ತ ಗೊಜ್ಜು ತೂರಿರುವ ಆರೋಪಕ್ಕೆ ಸಂಬಂಧಿಸಿ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

- Advertisement -

ಸೆ.16ರಂದು ರಾತ್ರಿ ಸುಮಾರು 9.45ರ ವೇಳೆಗೆ ತಲಾಂದ ಸಾರ್ವಜನಿಕ ಗಣಪತಿ ವಿಸರ್ಜನೆ ಮೆರವಣಿಗೆ ತಲಾಂದ ಕಡೆಯಿಂದ ಗುಳ್ಳೆ ರೈಲ್ವೆ ಬ್ರಿಡ್ಜ್ ದಾಟಿ ರೈಲ್ವೆ ಸ್ಟೇಷನ್ ರಸ್ತೆ ಮೂಲಕ ಸಾಗುತ್ತಿದ್ದ ವೇಳೆ, ಗುಳ್ಳೆ ರೈಲ್ವೆ ಸ್ಟೇಷನ್ ರಸ್ತೆಯ ಪಕ್ಕದಲ್ಲಿರುವ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿಯ ಹಿಂಭಾಗದ ಕಿಟಕಿ ಗಾಜನ್ನು ಯಾರೋ ಕಿಡಿಗೇಡಿಗಳು ಕಲ್ಲಿನಿಂದ ಒಡೆದಿದ್ದಾರೆ ಎಂದು ಮಸೀದಿ ಕಾರ್ಯದರ್ಶಿ ದೂರು ನೀಡಿದ್ದಾರೆ. ಈ ಸಂಬಂಧ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಗುನ್ನಾ ನಂ.166/2026ರಂತೆ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಈ ಸುದ್ದಿ ಓದಿದ್ದೀರಾ? ಕುಮಟಾ | ನಿಲ್ಲಿಸಿದ್ದ ಲಾರಿ ಏಕಾಏಕಿ ಚಲಿಸಿ ಏಳನೀರು ವ್ಯಾಪಾರಿ ಸಾವು: ಮತ್ತೊಬ್ಬರಿಗೆ ಗಾಯ

ಇದೇ ವೇಳೆ, ತಲಾಂದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಜು ತಂದೆ ಸಂಕಪ್ಪ ನಾಯ್ಕ ಅವರು ನೀಡಿದ ದೂರಿನಂತೆ ಮತ್ತೊಂದು ಪ್ರಕರಣ ದಾಖಲಾಗಿದೆ. ಸೆ.16ರಂದು ರಾತ್ರಿ ಸುಮಾರು 8.20ಕ್ಕೆ ತಲಾಂದ ಗಣೇಶೋತ್ಸವ ಮಂಟಪದಿಂದ ಗಣೇಶ ವಿಗ್ರಹವನ್ನು ವಿಸರ್ಜನೆಗೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಗುತ್ತಿತ್ತು. ರಾತ್ರಿ ಸುಮಾರು 9.30ರ ವೇಳೆಗೆ ಮೆರವಣಿಗೆ ಗುಳ್ಳೆ ರೈಲ್ವೆ ಹಳಿ ಮೇಲಿರುವ ಬ್ರಿಡ್ಜ್ ದಾಟುತ್ತಿದ್ದ ಸಂದರ್ಭದಲ್ಲಿ ರಾಮಚಂದ್ರ ನಾಯ್ಕ ಅವರಿಗೆ ಸೇರಿದ ಅಲ್ಡಿಂಗ್ ಮೇಲಿನಿಂದ ಯಾರೋ ಕಿಡಿಗೇಡಿಗಳು ಮೆರವಣಿಗೆಯತ್ತ ಗೊಜ್ಜು ತೂರಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಕುರಿತು ಗುನ್ನಾ ನಂ.167/2026ರಂತೆ ಪ್ರಕರಣ ದಾಖಲಾಗಿದೆ.

ಪ್ರಕರಣಗಳ ಆರೋಪಿತರ ಪತ್ತೆಗಾಗಿ ಭಟ್ಕಳ ಎಎಸ್‌ಪಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರನ್ನು ಒಳಗೊಂಡ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ತನಿಖೆ ಹಾಗೂ ಆರೋಪಿತರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಳಿಕ ಪರಿಸ್ಥಿತಿ ಶಾಂತಿಯುತವಾಗಿದ್ದು, ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಬಳಿಕ ಪೊಲೀಸ್ ಠಾಣೆಯಲ್ಲಿ ಸೇರಿದ್ದ ಜನರಿಗೆ ಪ್ರಕರಣ ದಾಖಲಿಸಿರುವ ಕುರಿತು ಮಾಹಿತಿ ನೀಡಲಾಗಿದ್ದು, ಅವರು ಶಾಂತಿಯುತವಾಗಿ ಠಾಣೆಯಿಂದ ತೆರಳಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ತ್ರೀ ಸಬಲೀಕರಣಕ್ಕೆ ರಾಣಿ ಚನ್ನಮ್ಮನ ಜೀವನ, ಹೋರಾಟವೇ ಪ್ರೇರಣೆ: ಪ್ರೊ. ಸಿ.ಎಂ ತ್ಯಾಗರಾಜ

ರಾಣಿ ಚನ್ನಮ್ಮನ ಚರಿತ್ರೆ ಹಾಗೂ ಅವರು ಪ್ರತಿಪಾದಿಸಿದ ಸ್ವಾತಂತ್ರ್ಯ, ಸ್ವಾಭಿಮಾನ, ಧೈರ್ಯ...

ಬಾಗಲಕೋಟೆ | ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ: ರಾಷ್ಟ್ರಮಟ್ಟದ ಸಾಧನೆಗೆ ಸಚಿವ ಕಾಶಪ್ಪನವರ ಕರೆ

ಶಿಕ್ಷಣದ ಜತೆಗೆ ಕ್ರೀಡೆಗೂ ಸಮಾನ ಮಹತ್ವ ನೀಡುವ ಮೂಲಕ ಮಕ್ಕಳ ಸರ್ವಾಂಗೀಣ...

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾಕ್ಕೆ ಕಲ್ಲು ತೂರಾಟ ಆರೋಪ; ಪ್ರಕರಣ ದಾಖಲು

ಗಣಪತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಹಾಗೂ ಮದರಸಾಕ್ಕೆ ಕಲ್ಲು ತೂರಾಟ...

ರಾಯಚೂರು | ಮಳೆಗಾಲ ಮುಗಿಯುವ ಮುನ್ನವೇ ಬಿಸಿಲಿನ ತಾಪ; ರಾಯಚೂರಿನಲ್ಲಿ 37.6 ಡಿಗ್ರಿ ಉಷ್ಣಾಂಶ

ಸೆಪ್ಟೆಂಬರ್‌ ಮಳೆಗಾಲ ಮುಕ್ತಾಯವಾಗಿ, ಅಕ್ಟೋಬರ್‌ನಲ್ಲಿ ಚಳಿಗಾಲ ಆರಂಭವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ...