ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

Date:

Advertisements

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು ಬೆದರಿಸಿ ₹20 ಲಕ್ಷ ರೂಪಾಯಿ ಸುಲಿಗೆ ಮಾಡಲು ಯತ್ನಿಸಿದ ಮೂವರು ಯುವಕರನ್ನು ಭಟ್ಕಳ ನಗರ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಆಗಸ್ಟ್ 16ರ ರಾತ್ರಿ ವ್ಯಾಪಾರಿಯೊಬ್ಬರು ತಮ್ಮ ಅಂಗಡಿಯಲ್ಲಿ ಇದ್ದಾಗ ಅಪರಿಚಿತರಿಂದ ಫೋನ್‌ ಕರೆ ಬಂದಿದ್ದು, “ನಿನ್ನ ಮಗಳ ಖಾಸಗಿ ಚಿತ್ರ–ವಿಡಿಯೊ ನಮ್ಮ ಬಳಿ ಇದೆ. ತಕ್ಷಣ ₹20 ಲಕ್ಷ ಕೊಡಬೇಕು. ಇಲ್ಲವಾದರೆ ವಿಡಿಯೊ ವೈರಲ್ ಮಾಡಿ ನಿನ್ನ ಮಾನ ಮರ್ಯಾದೆ ಹಾಳು ಮಾಡುತ್ತೇವೆಂದು ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಬಳಿಕ ಆಗಸ್ಟ್ 18 ಮತ್ತು 19ರಂದು ವ್ಯಾಪಾರಿ ಪತ್ನಿಯ ಮೊಬೈಲ್‌ಗೆ ಕರೆ ಮಾಡಿ, ₹20 ಲಕ್ಷ ಸಾಧ್ಯವಿಲ್ಲದಿದ್ದರೂ ಕನಿಷ್ಠ ₹15 ಲಕ್ಷ ಕೊಡಲೇಬೇಕು” ಎಂದು ಒತ್ತಾಯ ಮಾಡಿ ತಂದೆ ತಾಯಿಗೆ ಮಾನಸಿಕ ಹಿಂಸೆ ನೀಡಿದ್ದಾರೆ.

ಇದರಿಂದ ಬೇಸತ್ತು ಯುವತಿಯ ಪೋಷಕರು ಭಟ್ಕಳ ಪೋಲಿಸರಿಗೆ ದೂರನ್ನು ನೀಡಿದ್ದು, ದೂರು ಸ್ವೀಕರಿಸಿದ ಪೊಲೀಸರು ಇನ್ಸ್‌ಪೆಕ್ಟರ್ ದಿವಾಕರ ಹಾಗೂ ಪಿಎಸ್‌ಐ ನವೀನ್ ನಾಯ್ಕ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ, ಆರೋಪಿಗಳಾದ ಮೊಹಮ್ಮದ್ ಫಾರಿಸ್, ಮೊಹಮ್ಮದ್ ಅರ್ಶದ್ ಮತ್ತು ವಿದ್ಯಾರ್ಥಿ ಅಮನ್ ಎಂಬುವವರನ್ನು ಪತ್ತೆಹಚ್ಚಿ ಬಂಧಿಸಿದರು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ಆಪರೇಷನ್ ಯಶಸ್ವಿಯಾಗಲು ಮಹೇಶ್ ಎಂ ಕೆ ಅವರ ಮಾರ್ಗದರ್ಶನ ದೊರೆತಿದ್ದು, ಠಾಣೆಯ ಸಿಬ್ಬಂದಿ ದಿನೇಶ್ ನಾಯಕ, ವಿನಾಯಕ ಪಾಟೀಲ್, ನಾಗರಾಜ ಮೊಗೇರ, ಮಹಾಂತೇಶ ಹಿರೇಮಠ, ಕಾಶಿನಾಥ ಕೊಟಗುಣಸಿ, ಲೊಕೇಶ ಕತ್ತಿ, ಮಹೇಶ್ ಅಮಗೋತ, ರಾಘವೇಂದ್ರ ಗೌಡ, ಜಗದೀಶ ನಾಯಕ ಹಾಗೂ ಜಿಲ್ಲಾ ತಾಂತ್ರಿಕ ವಿಭಾಗದ ಬಬನ್ ಮತ್ತು ಉದಯ ಎಂಬುವವರು ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

ಗದಗ | ಬಸವಾದಿ ಶರಣರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಎಸ್. ವಿ. ಸಂಕನೂರು

"12ಣೆ ಶತಮಾನದಲ್ಲಿ ಶರಣೆಯರು ಮಹಿಳೆಯರಿಗೆ ಸ್ವತಂತ್ರವಾಗಿ ಬದುಕಬೇಕು ಎಂಬ ಆಶಯವನ್ನು ಹೊಂದಿದ್ದರು....

ಶ್ರೀರಂಗಪಟ್ಟಣ | ಪರಿಸರಸ್ನೇಹಿ ಗಣಪನ ಪ್ರತಿಷ್ಠಾಪನೆಗಾಗಿ ಜಾಗೃತಿ ಜಾಥಾ

ಗೌರಿ ಗಣೇಶನ ಹಬ್ಬದ ಪ್ರಯುಕ್ತ ರೋಟರಿ ಶ್ರೀರಂಗಪಟ್ಟಣ ಹಾಗೂ ಅಚೀವರ್ಸ್ ಅಕಾಡೆಮಿ...

Download Eedina App Android / iOS

X