ಬೀದರ್‌ | 7.5 ಕೆ.ಜಿ. ಗಾಂಜಾ ಪತ್ತೆ ಹಚ್ಚಿದ ಶ್ವಾನ; ಓರ್ವ ಆರೋಪಿ ಬಂಧನ

Date:

Advertisements

ಔರಾದ್‌ ತಾಲ್ಲೂಕಿನ ಸಂತಪೂರ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯನಗರ ತಾಂಡಾ (ಬಾರ್ಡರ್) ಸಿವಾರದಲ್ಲಿ ಮಾದಕ ವಸ್ತು ಗಾಂಜಾವನ್ನು ಮಾರಾಟ/ಸಾಗಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ವಿಜಯನಗರ ತಾಂಡಾ ನಿವಾಸಿ ಅಂಬಾಜಿ (56) ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ 7.5 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಯು ತನ್ನ ಹೊಲದಲ್ಲಿ ಸೋಯಾ ಹೊಟ್ಟಿನಲ್ಲಿ ಬಚ್ಚಿಟ್ಟಿದ್ದ 7.5 ಕೆ.ಜಿ. ಗಾಂಜಾವನ್ನು ಪತ್ತೆ ಹಚ್ಚುವಲ್ಲಿ ಬೀದರ್ ಜಿಲ್ಲಾ ಪೊಲೀಸ್ ಘಟಕದಲ್ಲಿ ಮಾದಕ ದ್ರವ್ಯ ಪತ್ತೆ ಪರಿಣತಿ ಹೊಂದಿರುವ ‘ದೀಪಾ’ ಎಂಬ ಶ್ವಾನ ಯಶಸ್ವಿಯಾಗಿರುವುದು ವಿಶೇಷ.

Advertisements
WhatsApp Image 2025 03 22 at 8.00.09 AM
ಸೋಯಾ ಹೊಟ್ಟಿನಲ್ಲಿ ಗಾಂಜಾ ಪತ್ತೆ ಹಚ್ಚಿದ ಪೊಲೀಸ್‌ ತನಿಖಾ ತಂಡ

ತಹಸೀಲ್ದಾರ್‌ ಮಲ್ಲಶೆಟ್ಟಿ ಚಿದ್ರೆ, ಸಂತಪೂರ ಠಾಣೆ ಪಿಎಸ್‌ಐ ನಂದಕುಮಾರ್‌ ಮುಳೆ, ಸುನೀಲಕುಮಾರ್‌ ಕೋರೆ, ಏಕನಾಥ, ಕೊಟ್ರೆಶ, ರಾಮರೆಡ್ಡಿ, ಸುಭಾಷ, ಸಿದ್ದಣ್ಣಾ, ಗೌತಮ ಹಾಗೂ ಮತ್ತಿತರರು ಕಾರ್ಯಾಚರಣೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಎಸ್ಸೆಸ್ಸೆಲ್ಸಿ ಪರೀಕ್ಷೆ : ಮೊದಲ ದಿನ 1,039 ವಿದ್ಯಾರ್ಥಿಗಳು ಗೈರು

ಶ್ವಾನ ʼದೀಪಾʼ ತರಬೇತಿದಾರ ಅಶೋಕ ಹಾಗೂ ತನಿಖಾ ತಂಡದ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಶ್ಲಾಘಿಸಿದ್ದಾರೆ. ಈ ಸಂಬಂಧ ಸಂತಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X