ಬೀದರ್‌ | ಕೆಸರು ಗದ್ದೆಯಂತಾದ ರಸ್ತೆ; ಸಿಲುಕಿದ ವಾಹನಗಳು

Date:

Advertisements

ರಾಜ್ಯದ ಗಡಿ ಅಂಚಿಗೆ ಕೇವಲ 3 ಕಿಮೀ ಅಂತರದಲ್ಲಿರುವ ಕರ್ನಾಟಕ-ತೆಲಂಗಾಣ ಮಾರ್ಗದ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ರಾಜ್ಯಗಳ ಕೊಂಡಿಯಂತಿರುವ ಈ ರಸ್ತೆಯು ರಾಜ್ಯದ ಮಾನ ಮರ್ಯಾದೆಯನ್ನೇ ಹರಾಜು ಹಾಕುತ್ತಿದೆ.

ತೆಲಂಗಾಣದ ಪ್ರಮುಖ ಕೇಂದ್ರ ಪಿಟ್ಲಂ, ಕಂಗಟಿ, ನಾರಾಯಣಖೇಡ ಹೈದರಾಬಾದ್ ಸೇರಿದಂತೆ ಹಲವು ನಗರಗಳಿಗೆ ಸಂಚರಿಸುವ ಗಡಿ ಗ್ರಾಮಗಳ ಜನರು ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ದ್ವಿಚಕ್ರ ವಾಹನ ಸವಾರರಂತೂ ಸಂಚರಿಸುವುದು ದೊಡ್ಡ ಸಾಹಸ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ಕೆಸರಿನ ರಸ್ತೆಯಲ್ಲಿ ಸಿಲುಕಿರುವ ಲಾರಿ

“ಚಿಂತಾಕಿ-ನಾಗನಪಲ್ಲಿ ಮಧ್ಯೆ ಹೊರವಲಯದ ವರೆಗೆ ರಸ್ತೆ ನಿರ್ಮಾಣ ಮಾಡಿದ್ದು, ನಾಗನಪಲ್ಲಿ ಹೊರವಲಯದಿಂದ ಕರ್ನಾಟಕ ಗಡಿವರೆಗೆ ರಸ್ತೆ ಅಗಲೀಕರಣ ಮಾಡಲಾಗಿದೆ. ಇದರಿಂದ ರಸ್ತೆ ಮಧ್ಯೆ ಮಳೆ ನೀರು ಸಂಗ್ರಹವಾಗಿದೆ. ಇಂಥ ಹದಗೆಟ್ಟ ರಸ್ತೆ ಮೇಲೆ ಮರಳು ಲಾರಿ, ಬಸ್ ಸೇರಿದಂತೆ ಬಹುತೇಕ ವಾಹನಗಳು ಸಿಲುಕಿರುವ ಘಟನೆ ಜರುಗಿದೆ” ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

Advertisements
ಗುಂಡಿಬಿದ್ದಿರುವ ಬೀದರ್ ರಸ್ತೆ

ಈ ಸುದ್ದಿ ಓದಿದ್ದೀರಾ? ಹದಗೆಟ್ಟ ರಸ್ತೆ; ದುರಸ್ತಿಗೆ ಗ್ರಾಮಸ್ಥರ ಆಗ್ರಹ

“ಹದಗೆಟ್ಟಿರುವ ರಸ್ತೆ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ನಿತ್ಯ ಸಂಚಾರ ಮಾಡಲು ಹೈರಾಣಾಗುತ್ತಿದೆ” ಎಂದು ಔರಾದ್‌ ತಾಲೂಕಿನ ನಾಗನಪಲ್ಲಿ ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X