ಬೀದರ್ | ಬಸವತತ್ವ ವಿರೋಧಿ ‘ದಸರಾ ದರ್ಬಾರ್’ ಕಾರ್ಯಕ್ರಮ ಕೈಬಿಡಿ : ಬಸವರಾಜ ಧನ್ನೂರ

Date:

Advertisements

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ರಂಭಾಪುರಿ ಶ್ರೀಗಳು ನಡೆಸಲು ಉದ್ದೇಶಿಸಿರುವ ದಸರಾ ದರ್ಬಾರ್ ಕಾರ್ಯಕ್ರಮ ಕೈಬಿಡಬೇಕೆಂದು ಜಾಗತಿಕ ಲಿಂಗಾಯತ ಮಹಾಸಭಾ ಕೇಂದ್ರ ಸಮಿತಿಯ ಉಪಾಧ್ಯಕ್ಷ ಬಸವರಾಜ ಧನ್ನೂರ ಆಗ್ರಹಿಸಿದ್ದಾರೆ.

‘ಬಸವಕಲ್ಯಾಣವು ಶರಣರು ತತ್ವಕ್ಕಾಗಿ ಪ್ರಾಣ ಕೊಟ್ಟ ನೆಲ. ಈ ಭೂಮಿಯಲ್ಲಿ ಶರಣರ ಸರ್ವ ಸಮಾನತೆ ತತ್ವಕ್ಕೆ ವಿರುದ್ಧವಾದ ಕಾರ್ಯಕ್ರಮ ಆಯೋಜಿಸುವುದು ಸರಿಯಲ್ಲ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

‘ನಮ್ಮದು ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಪರಂಪರೆಯೇ ಹೊರತು ದರ್ಬಾರ್ ಪರಂಪರೆ ಅಲ್ಲ. ಹೀಗಾಗಿ ದಸರಾ ದರ್ಬಾರ್ ಸಂಘಟಿಸುವ ಯಾವ ಅವಶ್ಯಕತೆಯೂ ಇಲ್ಲ. ಆಡಂಬರ, ಬಂಗಾರದ ಕಿರೀಟ ಧರಿಸುವುದು, ಎತ್ತರದಲ್ಲಿ ಕೂರುವುದು, ಅಡ್ಡಪಲ್ಲಕ್ಕಿಯಲ್ಲಿ ಮೆರೆಯುವುದು ನಮ್ಮ ಪರಂಪರೆ ಅಲ್ಲ. ನಮ್ಮದು ಸರಳ, ಜ್ಞಾನವೇ ರತ್ನ ಎನ್ನುವ, ಎನಗಿಂತ ಕಿರಿಯರಿಲ್ಲ ಎ‌ನ್ನುವ, ತತ್ವವನ್ನು ಮೆರೆಸುವ ಪರಂಪರೆ’ ಎಂದು ಹೇಳಿದ್ದಾರೆ.

Advertisements

‘ಬಸವಕಲ್ಯಾಣಕ್ಕೆ ಎಲ್ಲರಿಗೂ ಸ್ವಾಗತವಿದೆ. ಆದರೆ, ಈ ನೆಲದ ಸಂಸ್ಕೃತಿ ಹಾಗೂ ಪರಂಪರೆಗೆ ಚ್ಯುತಿ ಉಂಟಾಗುವಂತಹ ಕಾರ್ಯಕ್ರಮ ಸಂಘಟಿಸುವುದನ್ನು ಯಾರೂ ಒಪ್ಪಲು ಸಾಧ್ಯವಿಲ್ಲ. ಸಂಘಟಕರು ಕೂಡಲೇ ದಸರಾ ದರ್ಬಾರ್ ಕೈಬಿಡಬೇಕು. ಇಲ್ಲವಾದಲ್ಲಿ ಬಸವ ಭಕ್ತರ ತೀವ್ರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : BREAKING NEWS | ಸಚಿವ ಕೆಎನ್ ರಾಜಣ್ಣ ರಾಜೀನಾಮೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಅರಮನೆ, ಗುರು ಮನೆವರು ಮಾಡುವ ಮನರಂಗಜನೆ ಕಾರ್ಯಕ್ರಮ. ಈಗ ಅರಸರು ಇಲ್ಲ, ರಾಜ ಗುರುಗಳು ಇಲ್ಲ. ಏಕೆ ಈ ರೀತಿ ಡಾಂಭಿಕ ರಾಜ ದರ್ಬಾರ್ ಸಂಗೀತ ಕಛೇರಿ? ನಾವು ಎಲ್ಲ ರೀತಿಯ ಸಭೆಗಳಲ್ಲಿ, ಸಂಗೀತ, ನೃತ್ಯ, ಗಾಯನ ಇತ್ಯಾದಿಗಳು ಆಚರಿಸುತ್ತಲೇ ಇದ್ದೇವೆ. ಅದಕ್ಕೆ ಲಿಂಗಾಯತ ಧರ್ಮದ ಪೂರ್ಣ ಗೌರವರ ಇದೆ. ಸಮಕಾಲೀನ ಕಾಲದಲ್ಲಿ ಏನೆಲ್ಲ ಅವಶ್ಯಕ ಎಂಬುದನ್ನು ನೀವು ತಿಳಿಯಬೇಕು. ಕೋಮು ಗಲಭೆಗಳು ಹತ್ತಿಕ್ಕ್ಕಿಹಾಗೂ ಸಾಹಿತ್ಯ, ವಚನ ಸ್ವೀಕರಿಸುವ ಅವಶ್ಯಕತೆ ಇದೆ. ನಿಜ ಆಚರಣೆಗಳನ್ನು ಅವರು ಸಮಾಜಕ್ಕೆ ಬಿತ್ತಬೇಕಾಗಿದೆ. ಶರಣು ಶರಣಾರ್ಥಿ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X