ಬೀದರ್‌ | ಬಸವತತ್ವ ಪ್ರಚಾರಕ್ಕೆ ಬದುಕು ಸಮರ್ಪಿಸಿಕೊಂಡ ಅಕ್ಕ ಅನ್ನಪೂರ್ಣತಾಯಿ

Date:

Advertisements

ಲಿಂಗಾಯತ ಮಹಾ ಮಠದ ವತಿಯಿಂದ ಇಲ್ಲಿಯ ಬಸವಗಿರಿಯ ನಿಸರ್ಗದ ಮಡಿಲಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅಕ್ಕ ಅನ್ನಪೂರ್ಣತಾಯಿ ಅವರ ಪ್ರಥಮ ಸ್ಮರಣೋತ್ಸವ ಶುಕ್ರವಾರ ಆರಂಭಗೊಂಡಿತು.

ಮೊದಲಿಗೆ ಗುರುವಚನ ಪರುಷಕಟ್ಟೆಗೆ ತೆರಳಿ, ಪ್ರಭುದೇವ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಗುರು ವಚನಗಳಿಗೆ ಪುಷ್ಪವೃಷ್ಟಿಗೈದು, ಗೌರವ ಸಮರ್ಪಿಸಲಾಯಿತು.

ಬಳಿಕ ಧಾರವಾಡದ ಬಸವ ಭಕ್ತ ಬಸವರಾಜ ಹಡಪದ ಅವರು ಷಟ್‍ಸ್ಥಲ ಧ್ವಜಾರೋಣಗೈದರು. ಧ್ವಜಗೀತೆಯ ನಂತರ ಶರಣ ಸಂಕುಲದಿಂದ ಬಸವ ಜಯಘೋಷ ಮೊಳಗಿದವು. ಅನಂತರ ಅಕ್ಕನವರ ಐಕ್ಯ ಮಂಟಪದಲ್ಲಿ ವಚನಗಳನ್ನು ಓದಿ, ಬಸವಮಂತ್ರ ಪಠಣಗೈದು, ಪುಷ್ಪಾರ್ಚನೆ ಮಾಡಿ ಭಕ್ತಿ ಸಮರ್ಪಣೆ ಮಾಡಲಾಯಿತು. ವಚನ ಪಾರಾಯಣ ಸುಸೂತ್ರವಾಗಿ ನಡೆಯಿತು.

Advertisements

ಅಕ್ಕನ ಬಸವ ನಿಷ್ಠೆ ಅನುಕರಣೀಯ :

ಅಕ್ಕ ಅನ್ನಪೂರ್ಣತಾಯಿ ಬಸವ ತತ್ವ ಪ್ರಚಾರಕ್ಕೆ ತಮ್ಮ ಬದುಕು ಸಮರ್ಪಿಸಿಕೊಂಡಿದ್ದರು. ಅವರ ಬಸವ ನಿಷ್ಠೆ ಅನುಕರಣೀಯ ಎಂದು ಲಿಂಗಾಯತ ಮಹಾ ಮಠದ ಪ್ರಭುದೇವ ಸ್ವಾಮೀಜಿ ಹೇಳಿದರು.

ಇಲ್ಲಿಯ ಬಸವಗಿರಿಯಲ್ಲಿ ಅಕ್ಕ ಅನ್ನಪೂರ್ಣತಾಯಿ ಪ್ರಥಮ ಸ್ಮರಣೋತ್ಸವದ ಮೊದಲ ದಿನವಾದ ಶುಕ್ರವಾರ ನಡೆದ ಸಾಮೂಹಿಕ ವಚನ ಪಾರಾಯಣ ಹಾಗೂ ಅನುಭಾವ ಗೋಷ್ಠಿಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ʼನನಗೆ ಅಕ್ಕನವರು ಗುರುವಾಗಿದ್ದರೆ, ಅವರಿಗೆ ಬಸವಣ್ಣ ಗುರುವಾಗಿದ್ದರು. ಕಾರಣ, ಅಕ್ಕನವರ ಬೋಧನೆಗಳೇ ನನಗೆ ಬಸವಣ್ಣನವರ ಬೋಧನೆಗಳಾಗಿವೆ. ಅಕ್ಕ ನನಗೆ ಗುರುವಷ್ಟೇ ಅಲ್ಲ; ತಾಯಿಯಾಗಿಯೂ ಪೋಷಿಸಿದ್ದಾರೆ. ಭಕ್ತಿ ಇದ್ದಲ್ಲಿ ಶಕ್ತಿ ಇರುತ್ತದೆ. ಕೇವಲ ತತ್ವ ಅರಿತರೆ ಸಾಲದು. ಅದನ್ನು ಕಾರ್ಯರೂಪಕ್ಕೆ ತರಬೇಕು. ಆಗ ಮಾತ್ರ ಬದುಕು ಅರಳುತ್ತದೆ. ವಿಸ್ತಾರಗೊಳ್ಳುತ್ತದೆʼ ಎಂದು ತಿಳಿಸಿದರು.

WhatsApp Image 2025 05 23 at 7.34.00 PM
ಸಾಮೂಹಿಕ ವಚನ ಪಾರಾಯಣ ನಡೆಯಿತು

ಚರಜಂಗಮ ಸಿದ್ರಾಮಪ್ಪ ಕಪಲಾಪುರೆ ಮಾತನಾಡಿ, ʼಅರಣ್ಯದಂತಿದ್ದ ಈ ನೆಲ ಅಕ್ಕನವರು ಪಾದವಿಟ್ಟಿದ್ದರಿಂದ ಬಸವಗಿರಿ ಆಯಿತು. ಪವಿತ್ರ ಕ್ಷೇತ್ರವಾಯಿತು. ಅಕ್ಕನವರು ಮನೆ ಮನೆಗಳ ಮೇಲೆ ಬಸವ ಧ್ವಜ ಹಾರಿಸುವುದು, ವಚನ ಓದುವುದು, ಬಸವ ಚರಿತ್ರೆ ಓದುವುದನ್ನು ಕಲಿಸಿ ಅನಿಷ್ಠ ಪದ್ಧತಿಗಳನ್ನು ಹೊಡೆದೊಡಿಸಿದರುʼ ಎಂದು ಸ್ಮರಿಸಿದರು.

ಇನ್ನೊಬ್ಬರ ನೋವು ನಲಿವುಗಳಿಗೆ ಸ್ಪಂದಿಸಿ ಧೈರ್ಯ ತುಂಬುತ್ತಿದ್ದ ಮಾತೃ ಸ್ವರೂಪಿ ಅಕ್ಕನನ್ನು ಕಳೆದುಕೊಂಡು ಸಮಾಜ ಬಡವಾಗಿದೆ. ವಚನಗಳನ್ನು ಓದುವುದರಿಂದ ನಾಲಿಗೆ, ಕಿವಿ, ಹೃದಯವಷ್ಟೇ ಅಲ್ಲ; ಜೀವನವೂ ಶುದ್ಧವಾಗುತ್ತದೆ. 108 ವಚನಗಳನ್ನು ಓದಿದರೆ ಬದುಕಿನ ಹಲವು ಕಷ್ಟಗಳು ಪರಿಹಾರಗೊಳ್ಳುತ್ತವೆʼ ಎಂದರು.

ಪರುಷಕಟ್ಟೆಯ ಚನ್ನಬಸವಣ್ಣ ಮಾತನಾಡಿ, ʼವಚನಗಳನ್ನು ಓದಿ, ಅನುಷ್ಠಾನಿಸುವುದು ವಚನ ಪಾರಾಯಣದ ಉದ್ದೇಶ. ವಚನ ಪಾರಾಯಣದಿಂದ ಮಾತು ಮೌನವಾಗಿ ಅಪರಿಮಿತ ಆನಂದ ಲಭಿಸುತ್ತದೆ. ಇನ್ನೊಬ್ಬರಲ್ಲಿ ದೋಷ ಹುಡುಕುವುದನ್ನು ಬಿಟ್ಟು, ತ್ಯಾಗ ಭಾವನೆ ಬೆಳೆಸಿಕೊಳ್ಳಬೇಕು. ಪರ ಚಿಂತೆ ನಮಗೇಕಯ್ಯ ಎಂಬ ಬಸವಾಣಿಯನ್ನು ಮರೆಯಬಾರದು. ಅಕ್ಕನವರು ಹೇಳಿದಂತೆ ಯಾವಾಗಲೂ ಸಕಾರಾತ್ಮಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕುʼ ಎಂದು ತಿಳಿಸಿದರು.

ಅಕ್ಕನವರು ಹೆಣ್ಣುಮಕ್ಕಳಿಗೆ ಸ್ಫೂರ್ತಿಯಾಗಿದ್ದರು. ವಚನ ವೈಭವ ಅಕ್ಕನವರಿಂದ ಜಾರಿಯಾಯಿತು ಎಂದು ಭಾಲ್ಕಿ ಹಿರೇಮಠದ ಮಹಾಲಿಂಗ ಸ್ವಾಮೀಜಿ ಸ್ಮರಿಸಿದರು. ಕಲ್ಪನಾ ಬೀದೆ ಅಕ್ಕನವರ ಜೀವನ ಹಾಗೂ ಸಂದೇಶಗಳನ್ನು ಬಣ್ಣಿಸುವ ಸ್ವರಚಿತ ಕವನ ವಾಚಿಸಿದರು.

ಇದನ್ನೂ ಓದಿ : ಬೀದರ್‌ | ಮೇ 26 ರಿಂದ ಜೂ.2ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 : 47 ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ

ಕಲಬುರಗಿಯ ಪತಿಷ್ಠಾನದ ಅಧ್ಯಕ್ಷ ರಾಜಶೇಖರ ಯಂಕಂಚಿ, ಉದ್ಯಮಿಗಳಾದ ಚಂದ್ರಶೇಖರ ಹೆಬ್ಬಾಳೆ, ಜೈರಾಜ ಖಂಡ್ರೆ, ಹುಮನಾಬಾದ್‍ನ ಮಲ್ಲಿಕಾರ್ಜುನ ರಟಕಲ್, ಸಾಹಿತಿ ರಮೇಶ ಮಠಪತಿ ಉಪಸ್ಥಿತರಿದ್ದರು. ಚಂದ್ರಕಾಂತ ಪಟ್ನೆ, ಕಂಟೆಪ್ಪ ಗಂದಿಗುಡೆ, ರೇವಣಪ್ಪ ಮೂಲಗೆ ಹಾಗೂ ಮಹೇಶ ಬಿರಾದಾರ ತಂಡದವರ ವಚನ ಸಂಗೀತ ಗಮನ ಸೆಳೆಯಿತು. ಲಿಂಗಾಯತ ಸೇವಾ ದಳದ ಅಧ್ಯಕ್ಷ ಅಭಿಷೇಕ ಮಠಪತಿ ಸ್ವಾಗತಿಸಿದರು. ಸಿ.ಎಸ್. ಪಾಟೀಲ, ಅಣವೀರ ಕೂಡಂಬಲ ಶರಣು ಸಮರ್ಪಿಸಿದರು. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X