ಬೀದರ್ | ಅಕ್ಕಮಹಾದೇವಿಯ ಸಂಘರ್ಷದ ಬದುಕು ಸಮಾಜಕ್ಕೆ ಮಾದರಿ: ಶಾಸಕ ಈಶ್ವರ ಖಂಡ್ರೆ

Date:

12ನೆಯ ಶತನಮಾನದಲ್ಲಿ ಅಕ್ಕಮಹಾದೇವಿ ಅವರು ಸಮಸಮಾಜ ನಿರ್ಮಾಣ ಮತ್ತು ಮಹಿಳೆಯರ ಸ್ವತಂತ್ರಕ್ಕಾಗಿ ನಡೆಸಿದ ಸಂಘರ್ಷ, ತ್ಯಾಗಮಯ ಬದುಕು ಎಲ್ಲರಿಗೂ ಮಾದರಿಯಾಗಿದೆ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.

ಬೀದರ್‌ ಜಿಲ್ಲೆ ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಅಕ್ಕಮಹಾದೇವಿ ಜಯಂತಿ ನಿಮಿತ್ತ ಅಕ್ಕಮಹಾದೇವಿ ಪುತ್ಥಳಿಗೆ ಮಾಲಾರ್ಪಣೆ ಸಲ್ಲಿಸಿ ಅವರು ಮಾತನಾಡಿದರು.

“ವಚನಗಾರ್ತಿ ಅಕ್ಕಮಹಾದೇವಿ ಅವರ ಒಂದೊದು ವಚನಗಳಲ್ಲಿ ಬದುಕಿನ ಮೌಲ್ಯಗಳು ಅಡಗಿವೆ. ಜೀವನದಲ್ಲಿ ಎಷ್ಟೇ ಕಷ್ಟ, ಸಮಸ್ಯೆಗಳು ಬಂದರೂ ಎದೆಗುಂದದೇ ಧೈರ್ಯದಿಂದ ಎದುರಿಸಿ ಮಹಿಳಾ ಕುಲದ ಸ್ವಾಭಿಮಾನವನ್ನು ಎತ್ತಿ ಹಿಡಿದಿದ್ದರು. ಅಕ್ಕಮಹಾದೇವಿ ಅವರು ತೋರಿದ ದಿಟ್ಟತನ, ಧೈರ್ಯವನ್ನು ಪ್ರಸ್ತುತ ಕಾಲದ ಎಲ್ಲ ಮಹಿಳೆಯರು ತಮ್ಮ ನಿಜ ಜೀವನದಲ್ಲಿ ಆಚರಣೆಗೆ ತಂದರೇ ಹೆಣ್ಣು ಭ್ರೂಣ ಹತ್ಯೆ, ದೌರ್ಜನ್ಯದಂತಹ ಪ್ರಕರಣಗಳಿಗೆ ಕಡಿವಾಣ ಬೀಳಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಭಾಲ್ಕಿಯಲ್ಲಿ ಅಕ್ಕಮಹಾದೇವಿ ಪುತ್ಥಳಿ ನಿರ್ಮಾಣ ಆಗಬೇಕೆನ್ನುವುದು ಮಹಿಳೆಯರ ಬಹುದಿನಗಳ ಬೇಡಿಕೆ ಆಗಿತ್ತು. ಅದರಂತೆ ಚನ್ನಬಸವಾಶ್ರಮದಲ್ಲಿ ಡಾ.ಬಸವಲಿಂಗ ಪಟ್ಟದ್ದೇವರ, ಗುರುಬಸವ ಪಟ್ಟದ್ದೇವರ ಮಾರ್ಗದರ್ಶನದ ಮೇರೆಗೆ ಅಕ್ಕಮಹಾದೇವಿ ಪುತ್ಥಳಿಗೆ ದೇಣಿಗೆ ಮತ್ತು ಅನಾವರಣಕ್ಕೆ ಅವಕಾಶ ಸಿಕ್ಕಿರುವುದು ನನ್ನ ಪುಣ್ಯವೆಂದು ಭಾವಿಸಿದ್ದೇನೆ” ಎಂದು ತಿಳಿಸಿದರು.

“ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಸಾನಿಧ್ಯ ವಹಿಸಿ ಮಾತನಾಡಿ, “12ನೇ ಶತನಮಾನದಲ್ಲಿ ಅಕ್ಕಮಹಾದೇವಿ ಅವರಿಗೆ ಅರಸೊತ್ತಿಗೆ ವೈಭವ ಇದ್ದರೂ ಅದನ್ನು ಧಿಕ್ಕರಿಸಿ ಮಹಿಳೆಯರ ಸಬಲೀಕರಣಕ್ಕಾಗಿ ಕ್ರಾಂತಿ ನಡೆಸಿದರು. ಜೀವನದಲ್ಲಿ ನಿಂದನೆ, ಟೀಕೆ ಬಂದರೂ ಹೇಗೆಲ್ಲ ಎದುರಿಸಬೇಕು ಎನ್ನುವುದು ಅಕ್ಕಮಹಾದೇವಿ ಅವರು ತಮ್ಮ ವಚನದಲ್ಲಿ ಬಹಳ ಸುಂದರವಾಗಿ ವಿವರಿಸಿದ್ದಾರೆ. ಜೀವನ ಸಾರ್ಥಕತೆಗೆ ಎಲ್ಲ ಮಹಿಳೆಯರು ಅಕ್ಕನ ವಚನ ತಪ್ಪದೇ ಪಠಣ ಮಾಡಬೇಕು” ಎಂದು ನುಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್ಐ, ಪೇದೆ

ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಿದ್ದರು. ಈ ವೇಳೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ತಾಲೂಕು ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ಮಲ್ಲಮ್ಮ ನಾಗನಕೇರೆ, ಪ್ರಮುಖರು ಶುಭಾಂಗಿ ಬಳತೆ, ಅಕ್ಷತಾ ಅಷ್ಟೂರೆ, ಪ್ರಭಾ ಕರಕಾಳೆ, ಸಾವಿತ್ರಿ ಪಾಟೀಲ್, ಸರೋಜನಿ ಪಾಟೀಲ್, ಗೀತಾ ಕರಕಾಳೆ, ಶೋಭಾ ಸಾವಳೆ, ಗಂಗಾ ಅಷ್ಟೂರೆ, ಸ್ವರೂಪಾ ಬಳತೆ, ಇಂದುಮತಿ ಮಾನಕಾರಿ, ಸಂತೋಷಿ ಹುಣಜೆ, ಪವಿತ್ರ ಮುರಾಳೆ, ವಿಮಲಾಬಾಯಿ ಚಾಕೂರೆ, ಸಿದ್ದು ತುಗಶೆಟ್ಟೆ, ವಿಜಯಕುಮಾರ ಸಜ್ಜನ್ ಸೇರಿದಂತೆ ಇತರರು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಇಂಗ್ಲಿಷ್‌ ಬ್ಯಾನರ್ ಹರಿದು ಕರವೇ ಕಾರ್ಯಕರ್ತರ ಆಕ್ರೋಶ; ವಶಕ್ಕೆ ಪಡೆದ ಪೊಲೀಸರು

ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 4ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅದಕ್ಕೂ ಮುನ್ನ...

ಬೆಂಗಳೂರು | ಬ್ರ್ಯಾಂಡ್‌ ಹೆಸರು ಬಳಸಿ ನಕಲಿ ಬಟ್ಟೆ ತಯಾರು: ಸಿಸಿಬಿ ದಾಳಿ

ಅರ್ಮಾನಿ, ಲಿವೈಸ್, ಅಲ್ಲೆನ್ ಸೊಲ್ಲಿ, ಬುರ್ಬೆರಿ ಲೆದರ್ ಟ್ಯಾಗ್ಸ್, ಪೋಲೊ, ಎಲ್​ಪಿ...

ಮಂಡ್ಯ | ರಸ್ತೆಯಲ್ಲಿ ಸಂಚರಿಸುವ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

ಬೈಕ್​​ನಲ್ಲಿ ಬಂದು ರಸ್ತೆಯಲ್ಲಿ ಓಡಾಡುವ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ...

ಮೈತ್ರಿ ಕಗ್ಗಂಟು | ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ಸಿಗುವುದೇ ಡೌಟು!

ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡಿವೆ. ರಾಜ್ಯದಲ್ಲಿ...